ಮೇ 17ರಂದು ವಿಶಿಷ್ಟಚೇತನರ ಸಂಸ್ಥೆಯ 34ನೇ ವಾರ್ಷಿಕ ಮಹೋತ್ಸವ
ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ 34ನೇ ವರ್ಷದ ವಾರ್ಷಿಕ ಮಹೋತ್ಸವ ಸಮಾರಂಭ ಮೇ 17ರಂದು ಮಂಗಳೂರಿನ ರೆಡ್ ಕ್ರಾಸ್ ಸಭಾಭವನದಲ್ಲಿ ನಡೆಯಲಿದೆ. ಸಮಾಜದಲ್ಲಿ ಕಡೆಗಣನೆಗೆ ಒಳಗಾಗಿರುವ ಅಶಕ್ತ ಹಾಗೂ ದೈಹಿಕ ವಿಶೇಷಚೇತನರನ್ನು ಒಗ್ಗೂಡಿಸಿ, ಅವರ ಹಕ್ಕುಗಳ ರಕ್ಷಣೆ ಹಾಗೂ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸಂಸ್ಥೆಯನ್ನು 1992ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಖ್ಯಾತ ಮೂಳೆರೋಗ ತಜ್ಞ ಡಾ. ಎಂ. ಶಾಂತರಾಮ ಶೆಟ್ಟಿ…