ಎಸ್‌ಎಂಎ ಮಂಜನಾಡಿ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್

ಮಂಜನಾಡಿ, ಜೂ. 9: ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ವತಿಯಿಂದ “ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್” ಹಾಗೂ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಮಂಜನಾಡಿಯ ಅಲ್-ಮದೀನಾ ಶರಫುಲ್ ಉಲಮಾ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಅಲ್-ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಅಲ್-ಮದೀನಾ ಶರೀಯತ್ ಕಾಲೇಜಿನ ಪ್ರಾಂಶುಪಾಲ ಸೈಯ್ಯದ್ ಉಹೈಸಿ ಸಖಾಫಿ ಅವರು ದುಆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ಅಧ್ಯಕ್ಷ ಹಾಜಿ ಎನ್.ಎಸ್. ಕರೀಂ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

18 ವರ್ಷದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಗಳೂರು, ಜೂನ್ 8: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ ತೆರಳಿದ್ದು, ಬಳಿಕ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯು ಸುಮಾರು 162 ಸೆಂ.ಮೀ. ಎತ್ತರ ಹೊಂದಿದ್ದು, ಕಪ್ಪು ಬಣ್ಣದ ತಲೆಕೂದಲು, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟಿನವರಾಗಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ ಮತ್ತು ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಅವರು ಕನ್ನಡ ಹಾಗೂ…

Read More

ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಸೂಚನೆ

ಮಂಗಳೂರು, ಜೂನ್ 8: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಸ್ಪತ್ರೆ ಆಡಳಿತ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳಿಗೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಸ್ಪತ್ರೆಗೆ ಆಗಮಿಸುವ ಬಹುತೇಕ ರೋಗಿಗಳು ಕನ್ನಡ ಭಾಷಿಕರಾಗಿದ್ದು, ಇತರ ಭಾಷೆಗಳ ಅರಿವು ಇಲ್ಲದ ಕಾರಣ ಕೆಲ ವೈದ್ಯರು ಹಾಗೂ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂವಹನ ನಡೆಸದಿರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಲ್ಲದೆ, ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ…

Read More

ದಕ್ಷಿಣ ಕನ್ನಡದಲ್ಲಿ ಮಳೆ ಚುರುಕು; ಜೂನ್ 10ರಿಂದ ಮುಂಗಾರು ಮತ್ತಷ್ಟು ಬಿರುಸು ಸಾಧ್ಯತೆ

ಮಂಗಳೂರು, ಜೂನ್ 9: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡಕವಿದ ವಾತಾವರಣದ ನಡುವೆ ಬಿಟ್ಟು ಬಿಟ್ಟು ಮಳೆಯಾಗಿದೆ. ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದೆ. ಕಡಬ ತಾಲೂಕಿನಲ್ಲಿ ಅತಿ ಹೆಚ್ಚು 27.3 ಮಿ.ಮೀ. ಮಳೆಯಾಗಿದ್ದು, ಪುತ್ತೂರಿನಲ್ಲಿ 11.3…

Read More

ಸಮುದ್ರದ ಮಧ್ಯೆ ಯಕ್ಷಗಾನ ವೈಭವ: ಇತಿಹಾಸ ಸೃಷ್ಟಿಸಿದ ಯಕ್ಷಧ್ರುವ ಸಮುದ್ರಯಾನ

ಮಂಗಳೂರು: ಯಕ್ಷಗಾನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮುದ್ರದ ಮಧ್ಯೆ ಐಷಾರಾಮಿ ಕೋರ್ಡೆಲಿಯಾ ಕ್ರೂಸ್ ಹಡಗಿನ ಮಾರ್ಕ್ಯೂ ಥಿಯೇಟರ್‌ನಲ್ಲಿ ಯಕ್ಷಗಾನ ಪ್ರದರ್ಶನ ನಡೆಯುವ ಮೂಲಕ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ತರಂಗ ಸಂಗಮ, ಮುಂಬೈ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಯಕ್ಷಧ್ರುವ ಸಮುದ್ರಯಾನ’ ಕಾರ್ಯಕ್ರಮ ಯಕ್ಷಗಾನ ಪ್ರಿಯರಿಗೆ ಅಪೂರ್ವ ಅನುಭವವನ್ನು ನೀಡಿದೆ. ಜೂನ್ 1ರಿಂದ 5ರವರೆಗೆ ನಡೆದ ಈ ವಿಶೇಷ ಸಮುದ್ರಯಾನದಲ್ಲಿ ಸುಮಾರು 640ಕ್ಕೂ ಅಧಿಕ ತುಳು-ಕನ್ನಡಿಗ ಯಕ್ಷಗಾನ ಅಭಿಮಾನಿಗಳು,…

Read More

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಬಡವರಿಗೆ ನಿವೇಶನ ನೀಡುವಲ್ಲಿ ವಿಳಂಬ, ಹೆಚ್ಚುವರಿ ಪಾವತಿ ಹೆಸರಿನಲ್ಲಿ ಶೋಷಣೆ: ಆರೋಪ ಮಂಗಳೂರು, ಜೂನ್ 9: ಮಧ್ಯಮ ವರ್ಗದ ಹಾಗೂ ದುಡಿಯುವ ಜನರ ಮೇಲೆ ಆಸ್ತಿ ತೆರಿಗೆ ಹೆಚ್ಚಳದ ಮೂಲಕ ಆರ್ಥಿಕ ಹೊರೆ ಹೇರಲಾಗುತ್ತಿದೆ. ಮತ್ತೊಂದೆಡೆ, ವರ್ಷಗಳಿಂದ ನಿವೇಶನಕ್ಕಾಗಿ ಕಾಯುತ್ತಿರುವ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವ ಬದಲು ಹೆಚ್ಚುವರಿ ಪಾವತಿಯ ಹೆಸರಿನಲ್ಲಿ ಮತ್ತಷ್ಟು ಶೋಷಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ…

Read More

ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ – ಯು.ಟಿ ಖಾದರ್

ಮಂಗಳೂರು, ಜೂನ್ 9: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಸಮನ್ವಯದಿಂದ ನಿರ್ವಹಿಸಬೇಕು ಎಂದು ತಿಳಿಸಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು…

Read More

ಮೋದಿ ಸರಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ – ಸುಕುಮಾರ್ ತೊಕ್ಕೋಟು

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ ಹಾಗೂ ಬದುಕು ವಿನಾಶದತ್ತ ಸಾಗುತ್ತಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು ಅಭಿಪ್ರಾಯಪಟ್ಟರು. ಅವರು ಕಳೆದ ಎರಡು ದಿನಗಳಿಂದ ಕುತ್ತಾರ್ ನಲ್ಲಿರುವ ಮುನ್ನೂರು ಯುವಕ ಮಂಡಲದಲ್ಲಿ ಜರುಗಿದ CPIM ಉಳ್ಳಾಲ ವಲಯ ಮಟ್ಟದ ಅಧ್ಯಯನ ಶಿಬಿರವನ್ನು ಸಮಾರೋಪಗೊಳಿಸುತ್ತಾ ಈ…

Read More

ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಮಂಗಳೂರು, ಜೂ. 8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿ ವತಿಯಿಂದ ಸೋಮವಾರ ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಮುಖಂಡ ಇಮ್ತಿಯಾಜ್, ಮನೆ ಬಾಡಿಗೆದಾರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕೆಲ ಮನೆ ಮಾಲೀಕರು ಯಾವುದೇ ಮುನ್ನೋಟಿಸ್ ನೀಡದೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಡಿತಗೊಳಿಸುವುದು, ಮನೆ ಖಾಲಿ ಮಾಡುವಂತೆ ಒತ್ತಡ…

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನನ್ನ ಮೊದಲ ಆದ್ಯತೆ: ಆರೋಗ್ಯ ಸಚಿವ ಯು.ಟಿ. ಖಾದರ್ಆಸ್ಪತ್ರೆಗಳ ಲೋಪದೋಷ ಸರಿಪಡಿಸಲು ಕ್ರಮ;

ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು…

Read More
error: Content is protected !!