ಆ.21ರಿಂದ ‘ಸಮಾಧಾನ ಸಮಾರೋಹ್-2026’ ವಿಶೇಷ ಲೋಕ ಅದಾಲತ್

ಮಂಗಳೂರು:ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಇತ್ಯರ್ಥಪಡಿಸುವ ಉದ್ದೇಶದಿಂದ ಆ.21ರಿಂದ 23ರವರೆಗೆ ‘ಸಮಾಧಾನ ಸಮಾರೋಹ್-2026’ ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ 43 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಗತ್ಯವಿದ್ದರೆ…

Read More

ಕಾನ-ಜೋಕಟ್ಟೆ ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ

ಸುರತ್ಕಲ್ :ಕಾನ -ತೋಕೂರು -ಜೋಕಟ್ಟೆ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಕಾಮಗಾರಿ ನಡೆಸಿ ದುರಸ್ಥಿ ಮಾಡುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ಎಂ.ಎಸ್.ಇ.ಝಡ್‌ ಮತ್ತು ಎಂ.ಆರ್.ಪಿ.ಎಲ್. ಕಂಪೆನಿಗಳು ನಿರ್ವಹಿಸಬೇಕಾದ ಮುಖ್ಯ ರಸ್ತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಜನಪ್ರತಿನಿದಿನಗಳು ಕಂಪೆನಿಯವರ ಕಿವಿ…

Read More

NEET ಪರೀಕ್ಷೆ ರದ್ದು: 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ – ಸುಹಾನ್ ಆಳ್ವ ಆಕ್ರೋಶ

ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ. ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು…

Read More

ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ; ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ

ಮಂಗಳೂರು, ಮೇ 12: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು,…

Read More

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎಚ್.ಎಂ. ಪೆರ್ನಾಲ್‌ಗೆ ಮೇ 15ರಂದು ಮಂಗಳೂರಿನಲ್ಲಿ ಅದ್ದೂರಿ ಸನ್ಮಾನ

ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಮೇ 15ರಂದು ಸಂಜೆ 5:45ಕ್ಕೆ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಎಂ. ಪೆರ್ನಾಲ್ ಅವರ ಸಾಹಿತ್ಯ ವಿಮರ್ಶೆ ಕೃತಿ ‘ಕೊಂಕಣಿ ಕಾವ್ಯಂ: ರೂಪಾಂ ಅನಿ ರೂಪಕಾಂ’ಗೆ…

Read More

ಮಂಗಳೂರಿನಲ್ಲಿ ಮೇ 15–16ರಂದು ICAI ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಶೀರ್ಷಿಕೆಯಡಿ ರಾಷ್ಟ್ರೀಯ ಸಮ್ಮೇಳನವನ್ನು ಮೇ 15 ಮತ್ತು 16ರಂದು ನಗರದ ಪಾಲೆಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯರಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಅಧಿಕ ಚಾರ್ಟಡ್ ಅಕೌಂಟೆಂಟ್‌ಗಳು ಹಾಗೂ ವೃತ್ತಿಪರರು ಸಮ್ಮೇಳನದಲ್ಲಿ ಭಾಗವಹಿಸುವ…

Read More

ಮಂಗಳೂರು: “ಅಪೆಕ್ಸ್ ರನ್ 2026” ಯಶಸ್ವಿ: 1500ಕ್ಕೂ ಅಧಿಕ ಓಟಗಾರರ ಭಾಗಿ

ಮಂಗಳೂರು: ಮಿಲಾಗ್ರಿಸ್ ಕಾಲೇಜು, ICYM Mangalore Diocese ಹಾಗೂ Mangalore Runners Club ಸಹಯೋಗದಲ್ಲಿ “ಅಪೆಕ್ಸ್ ರನ್ 2026” ನಗರ ಮಟ್ಟದ ಮ್ಯಾರಥಾನ್ ಭಾನುವಾರ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಗ್ಗೆ 5:30ಕ್ಕೆ ಆರಂಭವಾದ ಓಟಕ್ಕೆ ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಸಂಚಾಲಕರಾದ ರೆ. ಫಾ. ಬೊನವೆಂಜರ್ ನಜರತ್, ರೆ. ಫಾ. ಮ್ಯಾಕ್ಸಿಮ್ ಮೋಂತೆರೋ ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಲ್ವಿನ್ ಸೆರಾವೋ ಚಾಲನೆ ನೀಡಿದರು. ದೈಹಿಕ ಕ್ಷಮತೆ, ಆರೋಗ್ಯ ಜಾಗೃತಿ ಮತ್ತು ಸಮುದಾಯದ ಒಗ್ಗಟ್ಟನ್ನು…

Read More

ಬಂಟರ ಯಾನೆ ನಾಡವರ ಮಾತೃ ಸಂಘ : 2026 -29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ…

Read More

ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಕುಸಿತ: ಮಂಗಳೂರು ಕುಡಿಯುವ ನೀರು ನಿರ್ವಹಣೆಗೆ ಜಿಲ್ಲಾಡಳಿತದ ತುರ್ತು ಕ್ರಮ

ಬಂಟ್ವಾಳ: ದ.ಕ.ಜಿಲ್ಲೆಯ ಜೀವನಾಡಿಯಾಗಿರುವ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾದರೆ ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ. ಬಂಟ್ವಾಳ ಜಕ್ರಿಬೆಟ್ಟು ಡ್ಯಾಂ ನ ಕೆಳಭಾಗದಿಂದ ಪಾಣೆಮಂಗಳೂರು ನೂತನ ಸೇತುವೆವರೆಗೆ ನದಿಯಲ್ಲಿ ನೀರಿಲ್ಲದೆ ಬತ್ತಿಹೋಗಿದ್ದು, ಮರಳು ಮತ್ತು ಕಲ್ಲುಗಳು ಎದ್ದು ಕಾಣುತ್ತಿವೆ.ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಅಭಾವ ತಲೆತೊರದಿದ್ದರೂ, ಕುಡಿಯುವ ನೀರು ಪೂರೈಕೆ ಮತ್ತು ಬಳಕೆಯ ಬಗ್ಗೆ ಅಧಿಕಾರಿಗಳು ಜಾಗೃತೆವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

Read More

ಸಚಿವ ಸುಧಾಕರ್ ನಿಧನ: ಕರಾವಳಿ ಮಂಡಳಿಯಲ್ಲಿ ಶ್ರದ್ಧಾಂಜಲಿ

ಮಂಗಳೂರು- ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಅವರು ಅನಾರೋಗ್ಯದ ಕಾರಣದಿಂದ ಮೇ 10 ರಂದು ವಿಧಿವಶರಾಗಿದ್ದಾರೆ. ಈ ಪ್ರಯುಕ್ತ ಸೋಮವಾರ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಪೂರ್, ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಮಂಡಳಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳೂರಿನ ಮಂಡಳಿಯ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಯೋಜನಾ ಇಲಾಖೆಯ ಸಚಿವ ಡಿ. ಸುಧಾಕರ್ ಅವರ ಅಗಲಿಕೆಯ ಕುರಿತು ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ…

Read More
error: Content is protected !!