ಸೆಪ್ಟೆಂಬರ್ಗೆ ಪೂರ್ಣಗೊಳ್ಳಲಿರುವ ತಣ್ಣೀರುಬಾವಿ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ4 ಸಾವಿರ ಕುಟುಂಬಗಳಿಗೆ ಅನುಕೂಲ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕಿಸುವ ಫಲ್ಗುಣಿ (ಗುರುಪುರ) ನದಿಯ ಮೇಲಿನ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಸೇತುವೆ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ತಿಳಿಸಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣವಾದರೆ ಸ್ಥಳೀಯರಿಗೆ ನಗರ ಪ್ರವೇಶ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ…