ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿರುವ ತಣ್ಣೀರುಬಾವಿ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ4 ಸಾವಿರ ಕುಟುಂಬಗಳಿಗೆ ಅನುಕೂಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕಿಸುವ ಫಲ್ಗುಣಿ (ಗುರುಪುರ) ನದಿಯ ಮೇಲಿನ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಸೇತುವೆ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ತಿಳಿಸಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣವಾದರೆ ಸ್ಥಳೀಯರಿಗೆ ನಗರ ಪ್ರವೇಶ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ…

Read More

ಸಿಪಿಐಎಂ ನಿಂದ ಜಿಲ್ಲೆಯಾದ್ಯಂತ ಹೋರಾಟ, ಮೇ 14 ರಂದು ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ಎಲ್ಲಾ ಹಂತದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು, ಪ್ರಥಮ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಅದಕ್ಕಾಗಿ ಗುರುತಿಸಿ, ಒಪ್ಪಂದದ ಆದೇಶ ಹೊರಡಿಸಿರುವುದನ್ನು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಇದು ಸಾರ್ವಜನಿಕ‌ ಆರೋಗ್ಯ ರಂಗವನ್ನು ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣಗೊಳಿಸುವ ಸರಕಾರದ ಪ್ರತಿಗಾಮಿ ನಡೆಯಾಗಿದೆ. ರಾಜ್ಯ ಸರಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಈ ಒಪ್ಪಂದವನ್ನು ತಕ್ಷಣ ಕೈ ಬಿಡಬೇಕು, ವೈದ್ಯರು,…

Read More

ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ : ಸಚಿವ ದಿನೇಶ್ ಗುಂಡೂರಾವ್ ಗೆ ಆಮಂತ್ರಣ

ಮಂಗಳೂರು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ , ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ , ಕರ್ನಾಟಕ ಸರಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು – ಇವುಗಳ ಸಹಯೋಗದಲ್ಲಿ ಮೇ 16ರಂದು ಕಾಸರಗೋಡಿನ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್…

Read More

ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಮಾಲಿನ್ಯಕ್ಕೆ ಜನರ ಆಕ್ರೋಶ

ಮಂಗಳೂರು: ಪಲ್ಗುಣಿ ನದಿ‌ ಕಲುಶಿತಗೊಂಡಿದೆ. ಅದರ ದೇಖಿ ರೇಖಿ ನೋಡಬೇಕಾದ ಮಂಗಳೂರು‌ ಮಹಾನಗರ ಪಾಲಿಕೆ ಕಣ್ಣು‌ಮುಚ್ಚಿ,‌ಕಿವಿ ಮುಚ್ಚಿ, ಬಾಯಿ ಮುಚ್ಚಿ ಕುಳಿತಿದೆ. ಪಾಲಿಕೆ ನಿರ್ಲಕ್ಷಕ್ಕೆ ರಾಶಿ ರಾಶಿ‌ ಮೀನುಗಳು ಸಾಯುತ್ತಿವೆ. ಮಂಗಳೂರು ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಲ್ಗುಣಿ ನದಿ ಕೆಲ ವರ್ಷಗಳ‌ ಹಿಂದೆ ಜೀವಂತ ನದಿಯಾಗಿತ್ತು. ಮೀನುಗಳು ಬದುಕಿಕೊಂಡಿದ್ದವು. ನೀರೂ ಸ್ವಚ್ಚವಾಗಿತ್ತು. ಈಗ ಅದು‌ ಮೀನುಗಳಿಗೆ ರುದ್ರಭೂಮಿಯಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ‌ ಕಾಣುತ್ತಿದೆ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ ತಿರುಗಿದ್ದ…

Read More

ಬಿಸಿಲಿನ ಆಘಾತ: ವೆನ್‍ಲಾಕ್‍ನಲ್ಲಿ ವಿಶೇಷ ಘಟಕ ಸ್ಥಾಪನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ, ವೆನ್‍ಲಾಕ್ ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್‍ನ 5ನೇ ಮಹಡಿಯಲ್ಲಿ ಶಾಖಾಘಾತಕ್ಕಾಗಿ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ. ಶಾಖಾಘಾತ: ಇದು ವೈದ್ಯಕೀಯ ತುರ್ತುಸ್ಥಿತಿ ದೇಹದ ಉಷ್ಣತೆ 104ಲಿಈ (40ಲಿಅ) ಅಥವಾ ಅದಕ್ಕಿಂತ ಹೆಚ್ಚು, ಗೊಂದಲ, ಪ್ರಜ್ಞೆ ತಪ್ಪುವುದು ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ತುರ್ತು ಸೇವೆಗೆ 108 ಕ್ಕೆ ಕರೆ ಮಾಡಬಹುದು.ಶಾಖಾಘಾತಕ್ಕೆ ತಕ್ಷಣದ ಚಿಕಿತ್ಸೆ: ಶಾಖಾಘಾತ ಜೀವಕ್ಕೆ ಅಪಾಯಕಾರಿ. ತಕ್ಷಣ ವೃತ್ತಿಪರ ಸಹಾಯ ಪಡೆಯಿರಿ. ವ್ಯಕ್ತಿಯನ್ನು ನೆರಳಿಗೆ, ಎಸಿ ರೂಮ್‍ಗೆ…

Read More

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಥಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭಾವಕಣಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಅವಿವಾಹಿತರಾಗಿರುವ ಇವರು ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

Read More

ಬಿಜೆಪಿ ಪ್ರಶಿಕ್ಷಣ ಮಹಾಭಿಯಾನ ಸಮಾಪ್ತಿ: ‘ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ’ – ನಳಿನ್ ಕುಮಾರ್ ಕಟೀಲ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್ ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗವು ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು, ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆ, ಪದಾಧಿಕಾರಿಗಳ ಸಭೆ, ಪ್ರಶಿಕ್ಷಣ, ಹೀಗೆ ನಿರಂತರ ಕಾರ್ಯ ಚಟುವಟಿಕೆಗಳೇ ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ. ವ್ಯಕ್ತಿಗಿಂತ ಪಕ್ಷ,ಮುಖ್ಯ, ಪಕ್ಷಕ್ಕಿಂತ…

Read More

ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ: ಕಾಂಗ್ರೆಸ್ ಆರೋಪ

ಮಹಿಳಾ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದೆ, ಮಹಿಳೆಯರ ಪರವಾಗಿ ಪಕ್ಷವಿದ್ದು, ವಿರೋಧಿಯಾಗಲು ಸಾಧ್ಯವೇ ಇಲ್ಲ ಎಂದು ದ.ಕ.ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಹೇಳಿದರು.ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್, ಮಣಿಪುರ ಸಹಿತ ನಾನಾ ಕಡೆಗಳಲ್ಲಿ ಮಹಿಳೆಯರಿಗೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪಿಗಳ ಕೃತ್ಯ ಖಂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿರಲಿಲ್ಲ ಎಂದರು. ಬಿಜೆಪಿಗೆ ಮಹಿಳೆಯರ ಕುರಿತು ಎಳ್ಳಷ್ಟೂ ಗೌರವವಿಲ್ಲ ಆದರೆ ಕಾಂಗ್ರೆಸ್…

Read More

2014ರ ಮಹಿಳೆ ಕೊಲೆ ಪ್ರಕರಣ: 6 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

2014ರಲ್ಲಿ ಮಂಗಳೂರಿನ ಹೊಸಬೆಟ್ಟುವಿನಲ್ಲಿ ನಡೆದಿದ್ದ ಮಹಿಳೆಯ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಾಜಸ್ಥಾನದ ಶಿವರಾಮ್ ಹಾಗೂ ಬಹುದ್ದೂರ್ ಸಿಂಗ್ @ ಬಹುದ್ದುರ @ ಬುಯ್ಯ ಎಂದು ಗುರುತಿಸಲಾಗಿದೆ.8.02.2014 ರ ಸಂಜೆ 4ರಿಂದ ರಾತ್ರಿ 8 ಗಂಟೆ ಮಧ್ಯೆ ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’ದ ಬಳಿಯ ನಿವಾಸಿಯಾದ ಸುಮತಿ ಪ್ರಭು ಎಂಬವರನ್ನು ಕುತ್ತಿಗೆಗೆ ಚೂರಿಯಿದ ಕೊಯ್ದು ಕೊಲೆ ಮಾಡಿ ಮೈಮೇಲಿದ್ದ ಸುಮಾರು 3,80,000 ಬೆಲೆಬಾಳುವ 192 ಗ್ರಾಂ (24 ಪವನ್) ತೂಕದ ಬಂಗಾರದ…

Read More

ಮಂಗಳೂರಿನ ಬಂದರಿನ ಜೈನ ಬಸದಿ

ತುಳುನಾಡು ಬಹು ಭಾಷೆಗಳ ಗೂಡು , ವಿವಿಧ ಧರ್ಮಗಳನ್ನು ಪೊರೆಯುವ ತೊಟ್ಟಿಲು , ಇಲ್ಲಿನ ಸಂಸ್ಕೃತಿ ಆಚಾರ ವಿಚಾರಗಳು ವೈಶಿಷ್ಟಗಳಿಂದ ಕೂಡಿದೆ . ಕಲೆಯನ್ನು ಆರಾಧಿಸುವ ಪರಂಪರೆ , ವೈಧಿಕ ವಿಚಾರಗಳನ್ನು ಪರಸ್ಪರ ಗೌರವಿಸುವ ನಡೆ , ದೇವಾಲಯಗಳಲ್ಲಿ ಶ್ರೀಮಂತವಾಗಿರುವ ವಾಸ್ತು ಶೈಲಿ ಎಲ್ಲವೂ ಈ ಮಣ್ಣಿನ ಅಸ್ಮಿತೆಗೆ ಹಿಡಿದ ಕೈ ಗನ್ನಡಿಯಾಗಿದೆ . ಇತಿಹಾಸವನ್ನು ತನ್ನ ಒಡಲಲ್ಲಿ ಇಟ್ಟು ವಾಸ್ತು ಶಿಲ್ಪ ಶೈಲಿಯಿಂದ ಕಣ್ಮನವವನ್ನು ಸೆಳೆಯುವ ಬಸದಿ ಮಂಗಳೂರಿನ ಬಜಿಲಕೇರಿಯಲ್ಲಿದ್ದು ಇದನ್ನು ಶ್ರೀ ಆದೀಶ್ವರ ಸ್ವಾಮಿ…

Read More
error: Content is protected !!