ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು:- ಶಕ್ತಿನಗರ ಕ್ಲಾಸಿಕ್ ಪರ್ಲ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಿದ್ದ ಸುನೀಲ್ ಶಂಕರ್ ಬೇಕಲ್ (48) ಎಂಬವರಿಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತವಾಗಿದ್ದು, ಸರಕಾರಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದು, ಎಪ್ರಿಲ್ 2 ರಂದು ಆಸ್ಪತ್ರೆಯಿಂದ ಮನೆಗೆ ಬಂದವರು ಅಲ್ಲಿಂದ ನೇರವಾಗಿ ಯಾರಿಗೂ ತಿಳಿಸದೇ ಮನೆ ಬಿಟ್ಟು ಹೋಗಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.9 ಅಡಿ, ಗೋಧಿ ಮೈಬಣ್ಣ, ಕಪ್ಪು ಕೂದಲು, ಸಾಧಾರಣ ಶರೀರ, ಕನ್ನಡ, ಹಿಂದಿ,…

Read More

ಅಪೂರ್ಣ ಚತುಷ್ಪಥ ರಸ್ತೆ ವಿರುದ್ಧ ಸುರತ್ಕಲ್‌ನಲ್ಲಿ ರಸ್ತೆ ತಡೆ: ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಸುರತ್ಕಲ್ :ಕಾನ -ಎಂ.ಅರ್.ಪಿ.ಎಲ್ . ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ನಾಗರಿಕರ ಸುಧೀರ್ಘ ಹೋರಾಟದ ಬಳಿಕ ಚತುಷ್ಪಥ ರಸ್ತೆ ಕಾಮಗಾರಿ ನಡೆಸಲು ಸರಕಾರ ಅನುದಾನ ಬಿಡುಗಡೆ…

Read More

ಮಂಗಳೂರು: ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟ ಯತ್ನ – ಮೂವರು ಬಂಧನ

ಮಂಗಳೂರು: ನಗರದ ಕದ್ರಿ ಉದ್ಯಾನವನದ ಬಳಿ ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು (Pangolin Scales) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿ.ಐ.ಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 05-05-2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ (KA 05 MS 1049) ಹೊಂಚು ಹಾಕುತ್ತಿದ್ದವರನ್ನು ವಶಕ್ಕೆ ಪಡೆದರು. ಬಂಧಿತರಿಂದ ಒಟ್ಟು 5.200 ಕೆ.ಜಿ ತೂಕದ ಚಿಪ್ಪು ಹಂದಿಯ…

Read More

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರಿಂದ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯವಾಗುತ್ತದೆ. ದೇಶದ ಯುವಜನತೆಯನ್ನು ಉದ್ಯೋಗ-ಸಂಬಂಧಿತ ತರಬೇತಿಯ ಮೂಲಕ ಸಬಲೀಕರಣಗೊಳಿಸಬೇಕು ಎಂದು ಅವರು ಹೇಳಿದರು. ಪಿಎಮ್ ಸ್ವನಿದಿ ಮತ್ತು ನಿಪುಣ್ ಯೋಜನೆಯು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸಣ್ಣ ವ್ಯಾಪಾರಿಗಳ ಮತ್ತು ಯುವಜನರ ಸಬಲೀಕರಣಕ್ಕೆ ಸಹಾಯ…

Read More

ಜೀವರಾಜ್ ಪ್ರಮಾಣವಚನಕ್ಕೆ ವಿಳಂಬವಿಲ್ಲ: ಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ಯಾವುದೇ ವಿಳಂಬವಾಗಿಲ್ಲ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಸಲಾಗಿದ್ದು, ನಿಯಮಾವಳಿ ಪ್ರಕಾರ ಅಗತ್ಯ ಅಭಿಪ್ರಾಯಗಳನ್ನು ಪಡೆದು ಸಮಯ ನಿಗದಿಪಡಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ವಿಳಂಬವೆಂದು ಹೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ವಿಶ್ವಾಸದ ಮೇಲೆ ನಡೆಯಬೇಕೇ ಹೊರತು ಆರೋಪಗಳ ಆಧಾರದಲ್ಲಿ ಅಲ್ಲ. ಸಂವಿಧಾನ ಮತ್ತು ಕಾನೂನಿನಡಿ…

Read More

ಜಿ.ಟಿ.ಟಿ.ಸಿ. ಬೈಕಂಪಾಡಿ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಆರಂಭ: ಮೇ 13 ಕೊನೆಯ ದಿನಾಂಕ

ಮಂಗಳೂರು: Government Tool Room and Training Centre (ಜಿ.ಟಿ.ಟಿ.ಸಿ.) ಬೈಕಂಪಾಡಿಯ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ಹಾಗೂ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕೋರ್ಸುಗಳು ಲಭ್ಯವಿವೆ ಎಂದರು. ಮೊದಲ ಎರಡು ಕೋರ್ಸುಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ…

Read More

ಡೆಫೆಕ್ಷನ್ ವಿರೋಧಿ ಕಾನೂನು ಬಲಪಡಿಸುವ ಅಗತ್ಯ: ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯ

ಮಂಗಳೂರು: Anti-Defection Law (ಡೆಫೆಕ್ಷನ್ ವಿರೋಧಿ ಕಾನೂನು) ಅನ್ನು ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಕಾನೂನು ತಜ್ಞರು ಮತ್ತು ಸಂವಿಧಾನ ತಜ್ಞರು ವ್ಯಕ್ತಪಡಿಸಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಸಮನ್ವಯ ಸಭೆ ಮುಂಬೈ ನಲ್ಲಿ ನಡೆದಿದ್ದು, ನಂತರದ ಎರಡನೇ ಸಭೆ ಪುರಿ ಯಲ್ಲಿ ಎರಡು ದಿನಗಳ ಕಾಲ ನಡೆಯಿತು ಎಂದರು. ಈ ಸಭೆಗಳಲ್ಲಿ ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್ ಹಾಗೂ…

Read More

ಕರಾವಳಿ ಪ್ರವಾಸೋದ್ಯಮಕ್ಕೆ ಭರವಸೆಗಳು ಈಡೇರಿಲ್ಲ: ಡಿ.ಕೆ. ಶಿವಕುಮಾರ್ ವಿರುದ್ಧ ವಿವೇಕಾನಂದ ಸಾಲಿನ್ಸ್ ಟೀಕೆ

ಮಂಗಳೂರು ಡಿ.ಕೆ. ಶಿವಕುಮಾರ್ ಅವರು ಇದೇ ವರ್ಷದ ಜನವರಿ 10ರಂದು ಮಂಗಳೂರಿಗೆ ಭೇಟಿ ನೀಡಿ ಹೂಡಿಕೆದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಕರಾವಳಿ ಕರ್ನಾಟಕಕ್ಕಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವುದಾಗಿ ಹಾಗೂ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ನೀಡಿದ ಭರವಸೆಗಳು ಇದುವರೆಗೆ ವಿಧಾನಸಭೆಯಲ್ಲಿ ಪ್ರಸ್ತಾವನೆಯಾಗದಿರುವುದು ವಿಷಾದನೀಯ ಎಂದು ವಿವೇಕಾನಂದ ಸಾಲಿನ್ಸ್ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಭೆಯಲ್ಲಿ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಅಗತ್ಯವಾದ ಬೃಹತ್ ಮೂಲಸೌಕರ್ಯ ಒದಗಿಸುವುದಾಗಿ ನೀಡಿದ ಭರವಸೆಯೂ ಈಡೇರಿಲ್ಲ ಎಂದು…

Read More

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು ‘ಮೈಕಲ್…

Read More

ಗುರುಪುರ ನೀರಿನ ಸಮಸ್ಯೆ ತುರ್ತು ಪರಿಹಾರಕ್ಕೆ ಶಾಸಕ ಭರತ್ ಶೆಟ್ಟಿ ಸೂಚನೆ

ಮಂಗಳೂರು: ಗುರುಪುರ–ಕೈಕಂಬ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ಶಾಸಕ ಭರತ್ ಶೆಟ್ಟಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಗೆ ಪ್ರತ್ಯೇಕ ಸಭೆ ಕರೆಯುವಂತೆ ಅವರು ನಿರ್ದೇಶಿಸಿದರು. ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುರುಪುರ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನೀರಿನ ಪೈಪ್ ಅಳವಡಿಕೆಗೆ ಅಗತ್ಯ ಯುಟಿಲಿಟಿ ವ್ಯವಸ್ಥೆ ಮಾಡದ ಕಾರಣ…

Read More
error: Content is protected !!