ಕರಾವಳಿಯಲ್ಲಿ ಮೇ 6ರಿಂದ ಗುಡುಗು-ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು :ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ…

Read More

ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9-10ರಂದು

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್‌ಸಿಎಲ್) ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ…

Read More

ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’

ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಹಾಗೂ ತುಳುನಾಡು ಎಜುಕೇಶನಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ (ರಿ.)ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೊಡಿಯಾಲ್‌ಬೈಲ್‌ನ ಎಸ್.ಕೆ.ಡಿ.ಬಿ. ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಈ ಪ್ರವಚನ ನಡೆಯಲಿದ್ದು, ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರ ಶ್ರೀಹರಿ ಆಚಾರ್ಯ…

Read More

ಮಂಗಳೂರು: KA19 ಫಿಟ್ ಕ್ಲಬ್ ಭವ್ಯ ಉದ್ಘಾಟನೆ

ಮಂಗಳೂರು: ನಗರದ ಶಾಲಿಮಾರ್ ಕಾಂಪ್ಲೆಕ್ಸ್, 6ನೇ ಮಹಡಿ ಕಂಕನಾಡಿಯಲ್ಲಿರುವ ಸುಸಜ್ಜಿತ ಶಾಲಿಮಾರ್ ಕಾಂಪ್ಲೆಕ್ಸ್‌ನಲ್ಲಿ ‘KA19 ಫಿಟ್ ಕ್ಲಬ್’ ನ ಭವ್ಯ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಭಾಗವಹಿಸಿ ಶುಭ ಹಾರೈಕೆಯನ್ನು ಸಲ್ಲಿಸಿದರು.ಸಮಾರಂಭಕ್ಕೆ ಮಿಸ್ಟರ್ ವರ್ಲ್ಡ್ ರೇಮಂಡ್ ಡಿಸೋಜ , ನಟ ಹಾಗೂ ಸಮಾಜ ಸೇವಕರಾದ ತಮ್ಮಣ್ಣ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಮೋಹನ್ ರಾಜ್, ಯುವ ಕಾಂಗ್ರೆಸ್ ಜಿಲ್ಲಾ ಇನ್‌ಚಾರ್ಜ್ ನಸೀರ್ ಸಮಾನಿಗೆ,…

Read More

ಪಂಚರಾಜ್ಯ ಫಲಿತಾಂಶಗಳು ಬಿಜೆಪಿ ಪರ ಸುನಾಮಿ: ಸತೀಶ್ ಕುಂಪಲ

ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ .ಸತೀಶ್ ಕುಂಪಲ ಹೇಳಿದ್ದಾರೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ ಎಂದವರು ಹೇಳಿದ್ದಾರೆ. ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ…

Read More

ಸ್ವಚ್ಛ ಮಂಗಳೂರು ಅಭಿಯಾನಕ್ಕೆ ಚಾಲನೆ: ಶ್ರಮದಾನದಲ್ಲಿ 3000 ಕೆಜಿ ತ್ಯಾಜ್ಯ ತೆರವು

ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನದ ಮೇ ತಿಂಗಳ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ರೋಸಾರಿಯೋ ಚರ್ಚ್ ಮುಖ್ಯಸ್ಥರಾದ ಫಾ. ವಲೇರಿಯನ್ ಡಿ’ಸೋಜಾ ಹಾಗೂ ಎಂ.ಆರ್.ಪಿ.ಎಲ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಬಿ.ಎಚ್.ವಿ. ಪ್ರಸಾದ್ ಅವರು ಹಸಿರು ನಿಶಾನೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಕೇಶವ ಪಟ್ಟಾಳಿ, ನಿವೃತ್ತ ಸೇನಾನಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಡಾ. ದನೇಶ್ ಕುಮಾರ್, ಕಮಲಾಕ್ಷ ಪೈ, ದಿಲ್‌ರಾಜ್ ಆಳ್ವ ಹಾಗೂ ಶ್ರೀ ರಂಜನ್ ಬೆಳ್ಳರ್ಪಾಡಿ ಉಪಸ್ಥಿತರಿದ್ದು, ಸ್ವಯಂಸೇವಕರನ್ನು ಪ್ರೋತ್ಸಾಹಿಸಿದರು….

Read More

ಕರಾವಳಿಗೆ ಹೈಕೋರ್ಟ್ ಪೀಠ ಹೋರಾಟಕ್ಕೆ ವೇಗ: ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ವೇಗ ದೊರೆತಿದ್ದು, ವಿವಿಧ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ಐವನ್ ಡಿಸೋಜ ತಿಳಿಸಿದ್ದಾರೆ. ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಪೀಠಕ್ಕೆ ಅನುಮತಿ ದೊರಕಿದ ಕೂಡಲೇ ಪ್ರಾರಂಭಿಕವಾಗಿ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಾರ್ಯಾಚರಣೆ ಆರಂಭವಾಗಲಿದ್ದು, ನಂತರ ಸೂಕ್ತ ಸ್ಥಳದಲ್ಲಿ…

Read More

ಬಿ.ಎಸ್.ವೈ ಅಭಿಮಾನೋತ್ಸವಕ್ಕೆ ಡಿಕೆ ಬಿಜೆಪಿ ಸಜ್ಜು: ವಾಹನ ಸ್ಟಿಕ್ಕರ್ ಅಭಿಯಾನಕ್ಕೆ ಚಾಲನೆ

ಮಂಗಳೂರು, ಮೇ 2: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಚಿತ್ರದುರ್ಗದಲ್ಲಿ ನಡೆಯಲಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಹಿನ್ನೆಲೆ, ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ವತಿಯಿಂದ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನಗರದ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಇದೇ ತಿಂಗಳ 9ರಂದು ನಡೆಯಲಿರುವ ಅಭಿಮಾನೋತ್ಸವಕ್ಕೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಯಡಿಯೂರಪ್ಪ…

Read More

ಬಿಎಸ್ ವೈ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು

ಮಂಗಳೂರು, ಮೇ 2: “ಬಿಎಸ್ ವೈ ಅಭಿಮಾನೋತ್ಸವ” ಕಾರ್ಯಕ್ರಮ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕರ್ತರನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದುಳಿದ ವರ್ಗಗಳ…

Read More

ಸಿಎಂ ಗಾದಿ ಪೈಪೋಟಿಯೇ ಸರ್ಕಾರದ 3 ವರ್ಷದ ಸಾಧನೆ: ಸತೀಶ್ ಕುಂಪಲ

ಮಂಗಳೂರು, ಮೇ 2: ರಾಜ್ಯ ಸರ್ಕಾರ ಆಡಳಿತ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪೈಪೋಟಿಯೇ ಕಳೆದ ಮೂರು ವರ್ಷಗಳ ಸರ್ಕಾರದ ಸಾಧನೆಯಾಗಿದೆ ಎಂದು ಸತೀಶ್ ಕುಂಪಲ ಟೀಕಿಸಿದ್ದಾರೆ. ಮಂಗಳೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಸರ್ಕಾರವೇ ಘೋಷಿಸಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಹ ಸಮರ್ಪಕವಾಗಿ ಸೌಲಭ್ಯಗಳು ತಲುಪುತ್ತಿಲ್ಲ ಎಂದರು. ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗದೆ ಜನರು…

Read More
error: Content is protected !!