ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ…

Read More

‘ನನ್ನ ಜೀವ ಉಳಿದದ್ದೇ ದೊಡ್ಡದು’ : ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನ ಮಾತು

ಮಂಗಳೂರು :ಶಾರೀಕ್ ನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ ಎಂದು ಆಟೋ ಚಾಲಕ ಪುರು ಷೋತ್ತಮ ಪೂಜಾರಿ ನೋವಿನಿಂದ ನುಡಿದಿದ್ದಾರೆ.”ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್‌ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು ಎಂದವರು ಹೇಳುತ್ತಿದ್ದಾರೆ. ಕಂಕನಾಡಿ ಗರೋಡಿ ಬಳಿ 2022ರ ನ. 19ರಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮಹಮ್ಮದ್ ಶಾರೀಕ್‌ಗೆ 10 ವರ್ಷ ಕಠಿನ ಶಿಕ್ಷೆ ವಿಧಿಸಿರುವ…

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಮಂಗಳೂರು: ‘ವಾದಿರಾಜ ವಾಲಗ ಮಂಡಳಿ’ ಚಿತ್ರದ ಚಿತ್ರೀಕರಣ ಪೂರ್ಣ, ಆಗಸ್ಟ್‌ನಲ್ಲಿ ಬಿಡುಗಡೆ

ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಹಾಸ್ಯಮಯ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕಾರ್ಯಗಳು ವೇಗವಾಗಿ ಸಾಗುತ್ತಿವೆ ಎಂದು ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಂ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ವಿಶಿಷ್ಟ ಕಥಾಹಂದರ ಮತ್ತು ಹೊಸ ಶೀರ್ಷಿಕೆಯ ಮೂಲಕ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಕರಾವಳಿ ಕನ್ನಡದ ಸೊಗಡನ್ನು ಒಳಗೊಂಡಿರುವ ಈ ಸಿನಿಮಾ…

Read More

ಮೋದಿಯ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಪ್ರತಿಕ್ರಿಯೆ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ. ಇದು ರಾಜಕೀಯ ಸಂಸ್ಕೃತಿಗೆ ಧಕ್ಕೆ…

Read More

ಮಂಗಳೂರು: ‘ವಿಸರ್ಜನೆ ಅಭಿಯಾನ’ದಲ್ಲಿ ಸಂಗ್ರಹವಾದ ₹1 ಲಕ್ಷ ಮೌಲ್ಯದ ಲೋಹ ವಸ್ತುಗಳು ಕದ್ರಿ ದೇವಸ್ಥಾನಕ್ಕೆ ಹಸ್ತಾಂತರ

ಧಾರ್ಮಿಕ ತ್ಯಾಜ್ಯವನ್ನು ಗೌರವಯುತವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ರಾಮಕೃಷ್ಣ ಮಿಷನ್, ರಾಮಕೃಷ್ಣ ಮಠ ಹಾಗೂ ಸ್ವಚ್ಛ ಮಂಗಳೂರು ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿದ್ದ “ವಿಸರ್ಜನೆ ಅಭಿಯಾನ”ದಲ್ಲಿ ₹1 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ, ತಾಮ್ರ ಹಾಗೂ ಹಿತ್ತಾಳೆ ಲೋಹಗಳು ಲಭಿಸಿದ್ದು, ಅವುಗಳನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ, ಧಾರ್ಮಿಕ ತ್ಯಾಜ್ಯ ವಿಲೇವಾರಿಯ ಕ್ಷೇತ್ರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಇಂತಹ ವಿಶಿಷ್ಟ ಅಭಿಯಾನ…

Read More

ಮಂಗಳೂರು: ಮೇ 10ರಂದು ನಗರ ಮಟ್ಟದ ‘Apex Run 2026’ ಮ್ಯಾರಥಾನ್

ಮಂಗಳೂರು:ನಗರದ ಮಿಲಾಗ್ರಿಸ್ ಕಾಲೇಜು, ಐಸಿವೈಎಂ (ICYM) ಮಂಗಳೂರು ಧರ್ಮಪ್ರಾಂತ್ಯ ಹಾಗೂ ಮಂಗಳೂರು ರನ್ನರ್ಸ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ನಗರ ಮಟ್ಟದ ಬೃಹತ್ ಮ್ಯಾರಥಾನ್ “Apex Run 2026” ಇದೇ ಮೇ 10ರಂದು ನಡೆಯಲಿದೆ. ಮುಂಜಾನೆ 5 ಗಂಟೆಗೆ ಮಿಲಾಗ್ರಿಸ್ ಕಾಲೇಜು ಆವರಣದಲ್ಲಿ ಓಟಕ್ಕೆ ಚಾಲನೆ ನೀಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಲ್ವಿನ್ ಸೆರಾವೊ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೈಹಿಕ ಕ್ಷಮತೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು…

Read More

ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ)ಬೋಳಿಯಾರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

​ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ರಜತ ಮಹೋತ್ಸವದ ಸವಿನೆನಪಿಗಾಗಿ ಸಾರ್ವಜನಿಕರ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಅಮ್ಮೆಂಬಳ ಕೇಂದ್ರ ಜುಮಾ‌ ಮಸೀದಿ ಖತೀಬ್ ಅಸೈಯ್ಯದ್ ಅಮೀರ್ ತಂಙಳ್ ಹಾಗೂ ಮಜಿ ಮಹಮ್ಮಾಯ ದೇವಸ್ಥಾನದ ಅರ್ಚಕ ಮನೋಹರ್ ಭಟ್, ಮತ್ತು ಚೇಳೂರು ಸಂತ ತೋಮಸ್ ಇಗರ್ಜಿಯ ಧರ್ಮಗುರು ಫಾದರ್ ಮೈಕಲ್ ಡಿಸಿಲ್ವಾ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಬಿಂದಾಝ್ ಫ್ರೆಂಡ್ಸ್ ಅಧ್ಯಕ್ಷ ಬದ್ರುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಳಿಯಾರು ಮೊಹಿಯದ್ದೀನ್ ಜುಮಾ‌…

Read More

ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಂದ್‌: ಏಪ್ರಿಲ್‌ 28ಕ್ಕೆ ಬೃಹತ್‌ ಜನಾಂದೋಲನ ನಡಿಗೆ

ಮಂಗಳೂರು: ಇಲ್ಲಿನ ಬ್ರಹ್ಮರಕೂಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕರು, ಟೋಲ್‌ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ. ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು…

Read More
error: Content is protected !!