ಹಸಿರು ವಲಯ ಭೂಸ್ವಾಧೀನ ವಿಳಂಬಕ್ಕೆ ಆಕ್ರೋಶ: ಮೇ 1ರಿಂದ ಧರಣಿ ಎಚ್ಚರಿಕೆ

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂದಿನ ತೀರ್ಮಾನದಂತೆ ಜಿಲ್ಲಾಡಳಿತದ ಮೂಲಕವೇ ತಕ್ಷಣ ಆರಂಭಿಸಬೇಕು. ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದಲ್ಲಿ ಮೇ 1ರಿಂದ ಎಂಆರ್‌ಪಿಎಲ್ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ಎಂಆರ್‌ಪಿಎಲ್ ಮೂರನೇ ಹಂತದ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಗೆ…

Read More

ಅಡುಗೆ ಅನಿಲ ಕೊರತೆ, ಬೆಲೆ ಏರಿಕೆ: ಕೇಂದ್ರ ಸರ್ಕಾರ ವಿರುದ್ಧ ರಮಾನಾಥ ರೈ ಕಿಡಿ

ಮಂಗಳೂರು :ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು‌ ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ‌ ಕಾಂಗ್ರೆಸ್ ಆಯೋಜಿಸಿದ್ದ ಅಡುಗೆ ಅನಿಲ ದರ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ‌‌ ಪಾಲ್ಗೊಂಡು ಮಾತನಾಡಿದ ರೈ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ದೇಶದ ಆರ್ಥಿಕ ಪ್ರಸಕ್ತ ಪರಿಸ್ಥಿತಿ ಚೆನ್ನಾಗಿಲ್ಲ. ಬೆಲೆ ಏರಿಕೆಯಿಂದ ಜನರು ಕೂಡ ಕಂಗಾಲಾಗಿದ್ದಾರೆ. ಆದರೂ…

Read More

ಉಳ್ಳಾಲದಲ್ಲಿ ಭೂಗತ ಕೇಬಲ್ ಯೋಜನೆಗೆ ಚಾಲನೆ

ಮಂಗಳೂರು:ಉಳ್ಳಾಲ ನಗರ ಪ್ರದೇಶ ಹಾಗೂ ಮಂಗಳೂರು ನಗರದ ಆಯ್ದ ಭಾಗಗಳಲ್ಲಿ ಭೂಗತ (ಅಂಡರ್‌ಗ್ರೌಂಡ್) ಕೇಬಲ್ ಅಳವಡಿಸುವ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ತಿಳಿಸಿದ್ದಾರೆ.ನಗರದ ಮೆಸ್ಕಾಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೊಕ್ಕೊಟ್ಟು 33 ಕೆವಿ ಉಪಕೇಂದ್ರವನ್ನು 110 ಕೆವಿಗೆ ಅಪ್‌ಗ್ರೇಡ್ ಮಾಡುವ ಕಾರ್ಯ ಟೆಂಡರ್ ಹಂತದಲ್ಲಿದೆ ಎಂದರು. ಕೊಣಾಜೆ ಉಪಕೇಂದ್ರದಲ್ಲಿ ಹೆಚ್ಚುವರಿ 110/33 ಕೆವಿ, 20 ಎಂವಿಎ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಹೆಚ್ಚುವರಿ ಭೂಮಿ…

Read More

ಅಪಪ್ರಚಾರಕ್ಕೆ ಅನಿ ಮಂಗಳೂರು ತಿರುಗೇಟು: ಕಿಡ್ನಾಪ್, ಹಣ ವಸೂಲಿ ಆರೋಪ ಸಂಪೂರ್ಣ ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಮಂಗಳೂರಿನ ‘ಅನಿ ಕೆಫೆ’ ಮಾಲೀಕಿ ಹಾಗೂ ಮಂಗಳಮುಖಿ ಅನಿ ಮಂಗಳೂರು ಸ್ಪಷ್ಟನೆ ನೀಡಿದ್ದಾರೆ.ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿಲ್ ಕುಮಾರ್ ಎಂಬಾತ ತಮ್ಮ ಮೇಲೆ ಕಿಡ್ನಾಪ್, ದೌರ್ಜನ್ಯ ಹಾಗೂ ಹಣ ವಸೂಲಿಯ ಆರೋಪಗಳನ್ನು ಮಾಡುತ್ತಿರುವುದು ಸಂಪೂರ್ಣ ಸುಳ್ಳು ಎಂದು ತಿಳಿಸಿದ್ದಾರೆ. ಈ ಪ್ರಕರಣದ ಹಿಂದೆ ಯಾರೋ ಸಂಚು ರೂಪಿಸಿದ್ದು, ಸಮಗ್ರ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ಮೈಸೂರಿನ ಸಬರ್ ಬಸ್ ಸ್ಟ್ಯಾಂಡ್‌ನಿಂದ…

Read More

ಸಮಸ್ಯೆಗಳನ್ನು ಸವಾಲಾಗಿ ಸ್ಚೀಕರಿಸಿದ ಅಂಬೇಡ್ಕರ್: ಸಂಸದ ಚೌಟ

ಮಂಗಳೂರು: ಬಾಲ್ಯದಿಂದಲೇ ಸಮಸ್ಯೆಗಳನ್ನು ಎದುರಿಸುತ್ತಾ ಬಂದು, ಅದನ್ನೇ ಸವಾಲಾಗಿ ಸ್ವೀಕರಿಸಿದ ಧೀಮಂತ ವ್ಯಕ್ತಿ ಡಾ. ಬಿ ಆರ್ ಅಂಬೇಡ್ಕರ್ ಆಗಿದ್ದಾರೆ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಅವರು ಮಂಗಳವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ಆಡಳಿತದ ನೀತಿ ನಿರೂಪಣೆಯಲ್ಲಿ ಮಹಿಳೆಯರು, ದುರ್ಬಲರು ಭಾಗವಹಿಸಬೇಕೆಂಬುದು ಅಂಬೇಡ್ಕರ್ ಕನಸಾಗಿತ್ತು. ಇದನ್ನು ಈಡೇರಿಸಲು…

Read More

ನಂತೂರು ಅಪಘಾತ: ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ ಮೃತ್ಯು

ಬೈಕ್‌ ಸವಾರನ ಧಾವಂತಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಿರಿಯೆ ಛಾಯಾಗ್ರಾಹಕ ಸಾವಿಗೀಡಾಗಿದ್ದಾರೆ. ಕಳೆದ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ತಾರಾಯಿತೋಟ ಎಂಬಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಅಮಾಯಕ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ.ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಧರ್ಮಸ್ಥಳದ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ(27) ಎಂಬ ಯುವಕ ಶನಿವಾರ ರಾತ್ರಿ ಸುಮಾರು…

Read More

ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ, ವಾರ್ಷಿಕೋತ್ಸವ ಸಂಭ್ರಮ

ಸೇವೆಯ ಪಥಕ್ಕೆ ಹೊಸ ಚೈತನ್ಯ: ವಿಜೃಂಭಣೆಯಿಂದ ಕಂಗೊಳಿಸಿದ ಪದವಿ ಪ್ರಧಾನ ಹಾಗೂ ವಾರ್ಷಿಕೋತ್ಸವ ಸಮಾರಂಭಕುಂಟಿಕಾನದ ಎ.ಜೆ. ಆಡಿಟೋರಿಯಂನಲ್ಲಿ ಏಪ್ರಿಲ್ 13, ಸೋಮವಾರದಂದು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಪದವಿ ಪ್ರದಾನ ಹಾಗೂ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಭಕ್ತಿಪೂರ್ವಕ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಸಮಾರಂಭಕ್ಕೆ ಉಪ ಪ್ರಾಂಶುಪಾಲರಾದ ಡಾ. ತೆರೇಸಾ ಲಿಯೋನಿಲ್ಡಾ ಮೆಂಡೋನ್ಸಾ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ಲರಿಸ್ಸಾ ಮಾರ್ಥಾ ಸಾಮ್ಸ್ ಅವರು ಕಾಲೇಜಿನ ಯಶೋಗಾಥೆಯನ್ನೊಳಗೊಂಡ ವಾರ್ಷಿಕ ವರದಿಯನ್ನು ಮಂಡಿಸುವ ಮೂಲಕ…

Read More

ಕನಿಷ್ಠ ವೇತನದ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ

ಕನಿಷ್ಠ ವೇತನ ಪುನರ್ ವಿಮರ್ಶೆಗೆ ಆಗ್ರಹಿಸಿ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳ ಸಂರಕ್ಷಿಸಲು ಒತ್ತಾಯಿಸಿ ನಗರದಲ್ಲಿಂದು ಸಾರ್ವಜನಿಕರ ಮಧ್ಯೆ ಸಹಿ ಸಂಗ್ರಹ ಚಳುವಳಿಯನ್ನು ನಡೆಸಲಾಯಿತು.ಕಾರ್ಮಿಕ ವರ್ಗದ ಆಶಾಕಿರಣವಾದ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾರಣೆಯ ದಿನದಂದು ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಚಳುವಳಿಯನ್ನು ನಡೆಸಬೇಕೆಂಬ CITU ಕರೆಯ ಮೇರೆಗೆ CITU ದ.ಕ.ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಈ ಕಾರ್ಯಕ್ರಮವನ್ನು‌ ಆಯೋಜಿಸಲಾಯಿತು. ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದ ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ,…

Read More

ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ: ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ

ಮಂಗಳೂರು: ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕೆಂದು ನವಸಹಜ ಸಮುದಾಯ ಸಂಘಟನೆ ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷೆ ನಿಖಿಲಾ, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ಮಂಗಳೂರಿನ ಕೆಲವರು ಅಪಹರಿಸಿದ್ದು, ಆತನಿಗೆ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹಾಗೂ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಯನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಮಾಡಿಸಿರುವುದು ಗಂಭೀರ ಅಪರಾಧವಾಗಿದೆ ಎಂದು…

Read More

ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ

ಮಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮೊಗವೀರ ಸಮುದಾಯದ ಮುಖಂಡರಾಗಿದ್ದ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಮೊಗವೀರ ಸಮುದಾಯದಲ್ಲಿ ಹಿರಿಯ ರಾಜಕೀಯ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಮೀನುಗಾರರಿಗೆ ಸಮಸ್ಯೆ ಎದುರಾದಾಗ ತಕ್ಷಣ ಸ್ಪಂದಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಮಾಜಿಕ ಕಳಕಳಿಯುಳ್ಳ ನಾಯಕರೆಂದು ಹೆಸರು ಗಳಿಸಿದ್ದರು. ಮಂಗಳೂರಿನ ಪ್ರಮುಖ ರಂಗಕರ್ಮಿ, ಸಾಹಿತಿ ಹಾಗೂ ಸಾಮಾಜಿಕ…

Read More
error: Content is protected !!