ಹಸಿರು ವಲಯ ಭೂಸ್ವಾಧೀನ ವಿಳಂಬಕ್ಕೆ ಆಕ್ರೋಶ: ಮೇ 1ರಿಂದ ಧರಣಿ ಎಚ್ಚರಿಕೆ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂದಿನ ತೀರ್ಮಾನದಂತೆ ಜಿಲ್ಲಾಡಳಿತದ ಮೂಲಕವೇ ತಕ್ಷಣ ಆರಂಭಿಸಬೇಕು. ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದಲ್ಲಿ ಮೇ 1ರಿಂದ ಎಂಆರ್ಪಿಎಲ್ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ಎಂಆರ್ಪಿಎಲ್ ಮೂರನೇ ಹಂತದ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಗೆ…