ಡೀಸೆಲ್ ಕೊರತೆ: ಮೀನುಗಾರರಿಂದ ಆಕ್ರೋಶ

ಮೀನುಗಾರಿಕಾ ಧಕ್ಕೆಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಪ್ರಾಥಮಿಕ ಮೀನುಗಾರರ ಸಂಘದ ಪೆಟ್ರೋಲ್ ಪಂಪ್‌ನಲ್ಲಿ ಮೀನುಗಾರಿಕಾ ದೋಣಿಗಳಿಗೆ ಸಮರ್ಪಕವಾಗಿ ಡೀಸೆಲ್ ಪೂರೈಕೆಯಾಗದೆ ತೊಂದರೆ ಉಂಟಾಗಿರುವ ಬಗ್ಗೆ ಬೋಟ್ ಮಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಕನ್ ವ್ಯವಸ್ಥೆಯಡಿ ನಿಯಮಿತವಾಗಿ ಡೀಸೆಲ್ ಪೂರೈಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಾಲ್ ಬೋಟ್ ಮಾಲಕರ ಸಂಘದ ಕೋಶಾಧಿಕಾರಿ ಅಬೂಬಕರ್ ಅಶ್ರಫ್, ಸಂಘದಡಿ ಸುಮಾರು 500 ಮೀನುಗಾರಿಕಾ ದೋಣಿಗಳು ಕಾರ್ಯನಿರ್ವಹಿಸುತ್ತಿವೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ತೈಲ…

Read More

ಅಹ್ಲೆ ಹದೀಸ್ ಸಮ್ಮೇಳನ ಎ.18–19ರಂದು ಮಂಗಳೂರಿನಲ್ಲಿ

ಜಮೀಯತೇ ಅಹ್ಲೆ ಹದೀಸ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಎ. 18 ಮತ್ತು 19ರಂದು ಅಹ್ಲೆ ಹದೀಸ್ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಲಾಂ ಕಾಟಿಪಳ್ಳ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎ.18ರಂದು ಬೆಳಗ್ಗೆ 10 ಗಂಟೆಗೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ ಎಂದರು. ಅಖಿಲ ಭಾರತ ಜಮೀಯತೇ ಅಹ್ಲೆ ಹದೀಸ್ ಅಧ್ಯಕ್ಷ ಅಸ್ಗರ್ ಅಲಿ ಇನಾಮ್ ಮೆಹ್ಡಿ ಮಾರ್ಗದರ್ಶನದಲ್ಲಿ, ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್‌ ವಹಾಬ್…

Read More

ಮಂಗಳೂರಿನಲ್ಲಿ ‘ಚಾಕೊಲೇಟ್ ಸ್ಟ್ರೀಟ್’ 7ನೇ ಆವೃತ್ತಿ ಎ.11–12ರಂದು

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯು (ನಿಕೋ) ವತಿಯಿಂದ ಕ್ಯಾಂಪ್ಕೋ ಸಹಯೋಗದಲ್ಲಿ ಮಂಗಳೂರಿನ ಅತಿದೊಡ್ಡ ಚಾಕೊಲೇಟ್ ಹಬ್ಬ ‘ಚಾಕೊಲೇಟ್ ಸ್ಟ್ರೀಟ್’ನ 7ನೇ ಆವೃತ್ತಿ ಎ.11 ಮತ್ತು 12 ರಂದು ನಗರದ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆಯೋಜಿಸಲಿದೆ ಎಂದು ನಿಟ್ಟೆ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಮುಖ್ಯಸ್ಥೆ ಡಾ. ಮೌಲ್ಯ ಬಾಲಾಡಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸೊಲ್ಮೆಲು ಚಾಕೊಲೇಟ್ ಸಂಸ್ಥೆಯ ಸ್ಥಾಪಕ ಮಯೂರ್…

Read More

ಏಪ್ರಿಲ್ 12ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಇದೇ ಏಪ್ರಿಲ್ 12, ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಪುರಭವನದಲ್ಲಿ (ಟೌನ್ ಹಾಲ್) ಬಹಿರಂಗ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ತಿಳಿಸಿದರು. ನಗರದ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಐಕ್ಯತೆ…

Read More

ಹಬ್ಬದ ದಟ್ಟಣೆ ಕಡಿಸಲು ರೈಲುಗಳಿಗೆ ಹೆಚ್ಚುವರಿ ಬೋಗಿಗಳು

ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.ಎ.10 ಮತ್ತು 11 ರಂದು ಚೆನ್ನೈನಿಂದ ಹೊರಡುವ ಚೆನ್ನೈ ಎಗ್ಮೋರ್ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16159 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.ಎ. 12 ಮತ್ತು 13 ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್…

Read More

ವಿಶ್ವ ಕೊಂಕಣಿ ಸಂಗೀತ ಮಹಾಸಮಾವೇಶಕ್ಕೆ ಕೌಂಟ್‌ಡೌನ್ ಆರಂಭ

ನಲ್ವತ್ತರ ಸಂವತ್ಸರ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ನವೆಂಬರ್ 3 ರಿಂದ 15 ರವರೆಗೆ ನಡೆಸಲು ತೀರ್ಮಾನಿಸಿದೆ . ಇದರ ಪೂರ್ವಭಾವಿಯಾಗಿ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಏಪ್ರಿಲ್ 10 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರಾದ ಲುವಿ ಜೆ ಪಿಂಟೊ ತಿಳಿಸಿದರು . ಅವರು ನಗರದ…

Read More

ಅತ್ತಾವರ ದೈವಸ್ಥಾನದಲ್ಲಿ ಇಂಟರ್‌ಲಾಕ್ ಕಾಮಗಾರಿ ಉದ್ಘಾಟನೆ

ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ಪ್ರಾಂಗಣಕ್ಕೆ ಇಂಟರ್‌ಲಾಕ್ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭವನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕೆ ಹಾಗೂ ದೈವಸ್ಥಾನದ ಅನೇಕ ಕಾರ್ಯ ಚಟುವಟಿಕೆಗಳಿಗೆ ಇಂಟರ್‌ಲಾಕ್ ನ ಅಗತ್ಯವಿರುವ ಬಗ್ಗೆ ಸ್ಥಳೀಯ ಪ್ರಮುಖರು ನನ್ನ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಕಾಮಗಾರಿ ಆರಂಭಿಸಲಾಗಿ, ಇದೀಗ ದೈವ ಪ್ರೇರಣೆಯಿಂದ ಪೂರ್ಣಗೊಂಡಿದೆ ಎಂದರು. ನಿಕಟಪೂರ್ವ ಮನಪಾ ಸದಸ್ಯರು ಹಾಗೂ ಮಾಜಿ ಮೇಯರ್ ದಿವಾಕರ್…

Read More

6000 ಗಾಯಕರು, 5000 ಹಾಡುಗಳು: ಕೊಂಕಣಿ ಸಂಗೀತದ ಮಹಾಸಂಭ್ರಮ

ನಲ್ವತ್ತರ ಸಂವತ್ಸರ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ನವೆಂಬರ್ 3 ರಿಂದ 15 ರವರೆಗೆ ನಡೆಸಲು ತೀರ್ಮಾನಿಸಿದೆ . ಇದರ ಪೂರ್ವಭಾವಿಯಾಗಿ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ನವೆಂಬರ್ 10 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರಾದ ಲುವಿ ಜೆ ಪಿಂಟೊ ತಿಳಿಸಿದರು . ಅವರು ನಗರದ…

Read More

ಚುನಾವಣಾ ಜಾಗೃತಿಗೆ ಬಾಲಕಿಯ ವಿಶಿಷ್ಟ ಪ್ರಯತ್ನ: ಮತದಾನದ ಮಹತ್ವ ಸಾರಿದ ಸನ್ನಿಧಿ

ಬಂಟ್ವಾಳ/ಕಾಸರಗೋಡು:ಮತದಾರರನ್ನು ಚುನಾವಣಾ ಪ್ರಕ್ರಿಯೆಯ ಭಾಗವಾಗಿಸಲು ಹನ್ನೊಂದು ವರ್ಷದ ಬಾಲಕಿ ಸನ್ನಿಧಿ ಕಶೆಕೋಡಿ ವಿಶಿಷ್ಟ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಮಂಗಳೂರು ಬಂಟ್ವಾಳ ಮೂಲದ ಸನ್ನಿಧಿ, ಮಂಜೇಶ್ವರ ಹಾಗೂ ಕಾಸರಗೋಡು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಮತದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಐದು ಭಾಷೆಗಳಲ್ಲಿ ಮಾತನಾಡುವ ಸಾಮರ್ಥ್ಯ ಹೊಂದಿರುವ ಈ ಬಾಲಕಿ, ದೆಹಲಿ, ಗೋವಾ, ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿಯೂ ಇದೇ ರೀತಿಯ ಜಾಗೃತಿ ಕಾರ್ಯ ನಡೆಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಕಾಸರಗೋಡು ಜಿಲ್ಲಾ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಡಗರ

ಮಂಗಳೂರು (ಅತ್ತಾವರ):ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಭಕ್ತಿಭಾವದಿಂದ ನಡೆಯಲಿದ್ದು, ಅದರ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಉತ್ಸವದ ಅವಧಿಯಲ್ಲಿ ಪ್ರತಿದಿನ ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆಗಳು ನಡೆಯಲಿವೆ. ಏಪ್ರಿಲ್ 20ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಅಂಬುರುಹ ಯಕ್ಷಗಾನ ಕೇಂದ್ರ ಮಲೆಮಾರು ಅವರಿಂದ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ. ಏಪ್ರಿಲ್ 21ರಂದು ಗೋಲ್ಡನ್ ಸ್ಟಾಕಲ್ಸ್ ಅತ್ತಾವರ ತಂಡದಿಂದ ನೃತ್ಯ ಕಾರ್ಯಕ್ರಮ…

Read More
error: Content is protected !!