ಏಪ್ರಿಲ್ 8 ರವರೆಗೆ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಟ್ಟಿರುತ್ತದೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಗತ್ಯ ಮೂಲಸೌಕರ್ಯ ದುರಸ್ತಿಗೆ ಅನುಕೂಲವಾಗುವಂತೆ ಮತ್ತು ಸೌಲಭ್ಯದ ಸುರಕ್ಷತೆ ಮತ್ತು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತಾತ್ಕಾಲಿಕವಾಗಿ ಮುಚ್ಚುವುದು ಅಗತ್ಯವಾಗಿದೆ. ಈ ಅವಧಿಯಲ್ಲಿ ಮೃಗಾಲಯವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಸಂದರ್ಶಕರು ಮತ್ತು ಪ್ರವಾಸಿಗರು ದಿನಾಂಕಗಳನ್ನು ಗಮನಿಸಿ ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ. ನಿರ್ವಹಣಾ ಕಾರ್ಯ ಪೂರ್ಣಗೊಂಡ…

Read More

ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು ಕೋರ್ಸ್‌ಗಳ ಶುಭಾರಂಭ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಯು.ಟಿ. ಖಾದರ್ ಒತ್ತು

ಅಡ್ಯಾರ್‌ನಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಿಫ್ಸೆ ಮಿನ್ನರ್ವ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು) ಸಂಯೋಜಿತ ಕೋರ್ಸ್‌ಗಳ ಲೋಕಾರ್ಪಣೆ ಸಮಾರಂಭವು ಇಂದು ವಿಜೃಂಭಣೆಯಿಂದ ನಡೆಯಿತು. ಬೆಳಗಾವಿಯ ವಿ.ಟಿ.ಯು ಅಧಿಕೃತ ಸಂಯೋಜನೆಗೆ ಕಾಲೇಜು ಒಳಪಟ್ಟಿರುವುದು ಈ ಸಂಸ್ಥೆಗೆ ಮಹತ್ವದ ಶೈಕ್ಷಣಿಕ ಮೈಲಿಗಲ್ಲಾಗಿದ್ದು, ಗಣ್ಯರ ಸಮ್ಮುಖದಲ್ಲಿ ಅದನ್ನು ಸಂಭ್ರಮಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ವಿದ್ಯಾರ್ಥಿಗಳು ಕೇವಲ ಪದವಿಗಾಗಿ ಓದದೆ, ಜೀವನದಲ್ಲಿ ನೆರವಾಗುವ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇಂದಿನ ದಿನಗಳಲ್ಲಿ ಇಂಜಿನಿಯರಿಂಗ್…

Read More

ಮಂಗಳೂರಿನಲ್ಲಿ ‘ಫಿಸಿಯೋಕಾನ್-2026’ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 10-11ರಂದು

ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್‌ ಅಸೋಸಿಯೇಶನ್ ವತಿಯಿಂದ ಎ.10 ಮತ್ತು 11ರಂದು ಅಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2026’ ಕಾರ್ಯಕ್ರಮ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ನ ಅಧ್ಯಕ್ಷ ಡಾ.ಯು.ಟಿ. ಇಫಿಕಾರ್ ಫರೀದ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎ.10ರಂದು ಬೆಳಗ್ಗೆ 9 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆ‌ರ್. ಪಾಟೀಲ್‌ ಉದ್ಘಾಟಿಸಲಿದ್ದು, ವಿಧಾನಸಭೆಯ…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ದಿಂದ ದಾಖಲೆ ಸಾಧನೆ: ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ), 2025-26ನೇ ಹಣಕಾಸು ವರ್ಷದಲ್ಲಿ ₹20,226.19 ಕೋಟಿಗಳ ದಾಖಲೆಯ ಒಟ್ಟು ವ್ಯವಹಾರ ನಡೆಸಿ ಹೊಸ ಇತಿಹಾಸ ನಿರ್ಮಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಬ್ಯಾಂಕಿನ ವಾರ್ಷಿಕ ಪ್ರಗತಿಯ ಕುರಿತು ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬ್ಯಾಂಕ್ ಕಳೆದ ವರ್ಷಕ್ಕೆ ಹೋಲಿಸಿದರೆ ವ್ಯವಹಾರದಲ್ಲಿ ಶೇ.16.47 ರಷ್ಟು ಏರಿಕೆ…

Read More

ಮಂಗಳೂರಿನ ಪಿ.ಎ. ಕಾಲೇಜಿನಲ್ಲಿ ರಾಗಿಂಗ್ ಗುಂಪು ಘರ್ಷಣೆ: ವಿದ್ಯಾರ್ಥಿಗಳ ಆತಂಕ

ಮಂಗಳೂರು: ವಿದ್ಯೆ ಕಲಿಯಲು ಪವಿತ್ರ ತಾಣಗಳಾಗಿರಬೇಕಾದ ಶಿಕ್ಷಣ ಸಂಸ್ಥೆಗಳು ಇಂದು ರಣರಂಗವಾಗುತ್ತಿರುವ ಉದಾಹರಣೆként ಮಂಗಳೂರಿನ ಪ್ರತಿಷ್ಠಿತ P.A. College of Engineering ನಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಕಾಲೇಜಿನಲ್ಲಿ ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಲಕ್ಷಾಂತರ ರೂಪಾಯಿ ಶುಲ್ಕ ಕಟ್ಟಿಕೊಂಡು ವಿದ್ಯಾಭ್ಯಾಸಕ್ಕಾಗಿ ದೂರದ ಊರುಗಳಿಂದ ಹಾಗೂ ಇತರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಇಲ್ಲಿ ಇಂತಹ ಘಟನೆಗಳಿಗೆ ಒಳಗಾಗುತ್ತಿರುವುದು…

Read More

ಏಪ್ರಿಲ್ 7 ಮತ್ತು 8 ಕ್ಕೆ ಹರಿಕಥಾ ರಂಗದಲ್ಲಿ ವಿಶಿಷ್ಟ ಪ್ರಯೋಗಕ್ಕೆ ಸಾಕ್ಷಿಯಾಗಲಿದೆ ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯ

ಮಂಗಳೂರು: ಹರಿಕಥಾ ಕಲೆಯ ಮೇರು ಚೇತನವಾದ ದಿವಂಗತ ಡಾ. ಶೇಣಿ ಗೋಪಾಲ ಕೃಷ್ಣ ಭಟ್ಟರ ಜಯಂತ್ಯುತ್ಸವದ ಅಂಗವಾಗಿ ನಾಡಿನ ಕಿರಿಯ ಹಿರಿಯ ೧೨ ಹರಿದಾಸರ ಸಮ್ಮಿಲನ ಕಾರ್ಯಕ್ರಮವು ಕಾಸರಗೋಡು ಕೂಡ್ಲಿನ ಗುಡ್ಡೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಏಪ್ರಿಲ್ 7 ಮತ್ತು 8ರಂದು ಬೆಳಿಗ್ಗೆ ಗಂಟೆ 9 ರಿಂದ ಸಂಜೆ 6.30 ರ ತನಕ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕರಾದ ಕೂಡ್ಲು ಮಹಾಬಲ ಶೆಟ್ಟಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ,…

Read More

ಮಂಗಳೂರಿನಲ್ಲಿ ಏಪ್ರಿಲ್ 7ರಂದು ‘ಗುರುವಂದನಾ’ ಮಹೋತ್ಸವ

ಸೋದೆ ಶ್ರೀ ವಾದಿರಾಜ ಮಠದ ಪ್ರಮುಖ ಶಿಷ್ಯ ಸಮುದಾಯವಾದ ದೈವಜ್ಞ ಬ್ರಾಹ್ಮಣ ಶಿಷ್ಯ ವೃಂದದ ವತಿಯಿಂದ ಏಪ್ರಿಲ್ 7ರಂದು ಮಂಗಳೂರಿನಲ್ಲಿ ‘ಗುರುವಂದನಾ’ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ ಎಂದು ಮಂಗಳೂರು ‘ಗುರುವಂದನಾ’ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೇಟ್ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಂದು ಸಂಜೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಸಭಾ ಭವನದಲ್ಲಿ ಸೋದೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರಿಗೆ ಭಕ್ತಿಪೂರ್ವಕ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ ಬ್ರಹ್ಮಕಲಶೋತ್ಸವ

ಮಂಗಳೂರಿನ ಅತ್ತಾವರದಲ್ಲಿರುವ ಐತಿಹಾಸಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಅಯ್ಯಪ್ಪ ಸಮಿತಿಯ ಅಧ್ಯಕ್ಷರಾದ ಸೂರಜ್ ರಾಘವನ್ ತಿಳಿಸಿದರು . ಅವರು ನಗರದ ಪತ್ರಿಕಾಭವದನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಉತ್ಸವದ ಅಂಗವಾಗಿ ಏಪ್ರಿಲ್ 19ರಂದು ಮಂಗಳಾ ದೇವಿ ದೇವಸ್ಥಾನದಿಂದ ಹೊರಕಾಣಿಕೆ ಮೆರವಣಿಗೆ ಹೊರಡಲಿದ್ದು , ಅದು ಅತ್ತಾವರದ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ತಲುಪಲಿದೆ. ಐದು ದಿನಗಳ ಕಾಲ…

Read More

ಮಕ್ಕಳೇ ಫನ್ ಸೈಕಲ್ ರೈಡ್ಗೆ ರೆಡಿಯಾಗಿ ಮಕ್ಕಳೇ …..! ಬರ್ತಿದ್ದೆ ಏಪ್ರಿಲ್ 6 ರಂದು ಪಿಲಿಕುಳ ಹೆರಿಟೇಜ್ ಹೌಸ್‌ನಲ್ಲಿ ಫನ್ ಸೈಕಲ್ ರೈಡ್ !

ಮಂಗಳೂರು: ಇಂದಿನ ಜನಾಂಗದ ಮಕ್ಕಳು ಹೆಚ್ಚಾಗಿ ಮೊಬೈಲ್ ಗುಂಗಲ್ಲೇ ಕಳೆಯುತ್ತಾರೆ ಅವರಿಗೆ ದೈಹಿಕ ಕ್ಷಮತೆ ಕಡಿಮೆ ಇರುತ್ತದೆ . ಮಕ್ಕಳಲ್ಲಿ ದೈಹಿಕ ಸಾಮರ್ಥ್ಯ ಅಧಿಕವಾಗಬೇಕು ಎನ್ನುವ ನಿಟ್ಟಿನಲ್ಲಿ ಯುರೋಕಿಡ್ಸ್ ಕೊಡಿಯಾಲ್ ಬೈಲ್ ಸಂಸ್ಥೆ, ಮಂಗಳೂರು ಸೈಕಲ್ ಕೋ ಹಾಗೂ ಇನ್‌ಸ್ಟಾಗ್ರಾಂ ಸೈಕ್ಲಿಂಗ್ ಇನ್‌ಫ್ಲೂಯೆನ್ಸರ್ ಭಟ್ರು ಅವರ ಸಹಯೋಗದಲ್ಲಿ ಏಪ್ರಿಲ್ 6 ರಂದು ಬೆಳಿಗ್ಗೆ 9.00 ರಿಂದ 11.00 ಗಂಟೆಯವರೆಗೆ ಪಿಲಿಕುಳ ಹೆರಿಟೇಜ್ ಹೌಸ್‌ನಲ್ಲಿ ಫನ್ ಸೈಕಲ್ ರೈಡ್ ಕಾರ್ಯಕ್ರಮವನ್ನು 2 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಆಯೋಜಿಸಲಾಗಿದೆ…

Read More
error: Content is protected !!