ಗ್ಯಾಸ್ ಕೊರತೆ–ಬೆಲೆ ಏರಿಕೆ ಸಂಕಷ್ಟ: ರಿಕ್ಷಾ ಚಾಲಕರಿಗೆ ಪರಿಹಾರಕ್ಕೆ ಎಸ್‌ಡಿಟಿಯು ಒತ್ತಾಯ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಒತ್ತಾಯಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಟಿಯು ಜಿಲ್ಲಾ ಮಂಗಳೂರು ನಗರ ಅಧ್ಯಕ್ಷ ರಹಿಮಾನ್ ಬೋಳಿಯಾರ್, ಆಟೋ ಗ್ಯಾಸ್ ಕೊರತೆಯ ಜೊತೆಗೆ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಮೇಲೆ ಹೆಚ್ಚಿನ ಹೊರೆ…

Read More

ಮಂಗಳೂರು: ಜನಗಣತಿ 2027 ಕಾರ್ಯಕ್ಕೆ 909 ಗಣತಿ ಸಿಬ್ಬಂದಿ ನೇಮಕ – ಗೈರುಹಾಜರಿಗೆ ನೋಟಿಸ್

ಮಂಗಳೂರು: ಜನಗಣತಿ 2027 ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (ಎನ್ಯೂಮರೇಟರ್‌ಗಳು) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ, ಸ್ವಯಂ ಗಣತಿ (Self Enumeration) ಪ್ರಕ್ರಿಯೆ ಏಪ್ರಿಲ್ 1ರಿಂದ ಏಪ್ರಿಲ್ 15, 2026ರವರೆಗೆ ನಡೆಯಲಿದ್ದು, ನಾಗರಿಕರು ಸುರಕ್ಷಿತ ಆನ್‌ಲೈನ್ ಪೋರ್ಟಲ್ (www.sc.census.gov.in) ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಗಣತಿ ಸಿಬ್ಬಂದಿಗಳಿಗೆ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದರೂ, ಕೆಲವರು…

Read More

ಬಂಟ್ವಾಳ: ಆತ್ಮಿ ಶೆಟ್ಟಿಯ ಭರತನಾಟ್ಯ ರಂಗಪ್ರವೇಶ ಏಪ್ರಿಲ್ 4ರಂದು

ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ), ಕಲ್ಲಡ್ಕದ ಭರತನಾಟ್ಯ ವಿದ್ಯಾರ್ಥಿನಿ ಕುಮಾರಿ ಆತ್ಮಿ ಶೆಟ್ಟಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಏಪ್ರಿಲ್ 4ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವಿದ್ಯಾ ಮನೋಜ್ ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಿ ಶೆಟ್ಟಿ ಕಳೆದ 12 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಪ್ರಸ್ತುತ ವಿದ್ವತ್ ಅಂತಿಮ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು. ವಿವಿಧ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ…

Read More

ಸಂದೇಹಾಸ್ಪದ ಸಾವು: ಸುದೀಪ್ ರೈ ಪ್ರಕರಣದಲ್ಲಿ ವಿಷಪ್ರಾಶನ ಆರೋಪ – ನ್ಯಾಯಕ್ಕಾಗಿ ಕುಟುಂಬದ ಆಗ್ರಹ

ಮಂಗಳೂರು/ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸುದೀಪ್ ರೈ (31) ಅವರ ಸಂದೇಹಾಸ್ಪದ ಸಾವಿಗೆ ಸಂಬಂಧಿಸಿ ಕುಟುಂಬಸ್ಥರು ವಿಷಪ್ರಾಶನದ ಆರೋಪ ಮಾಡಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಮೃತರ ತಂದೆ ಬಿ. ದಾಮೋದರ, ಸುದೀಪ್ ರೈ ಅವರು ಮಾರ್ಚ್ 29ರಂದು ಮುಂಜಾನೆ ಮಂಗಳೂರಿನ ಕೊಡಿಯಾಲ್ ಬೈಲ್‌ನ ಯೆನೆಪೋಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ವೈದ್ಯರ ಪ್ರಾಥಮಿಕ ಅಭಿಪ್ರಾಯದಂತೆ, ಆಹಾರದಲ್ಲಿ ವಿಷ ಮಿಶ್ರಣವಾಗಿರುವ ಸಾಧ್ಯತೆ ಇರುವುದಾಗಿ ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಕೆ.ಎಸ್….

Read More

ಹಜ್ ಭವನ ನಿರ್ಮಾಣ ವಿಳಂಬಕ್ಕೆ ಎಸ್‌ಡಿಪಿಐ ಆಕ್ರೋಶ

ಹಜ್ ಭವನಕ್ಕೆ ಜಾಗವಿದ್ದರೂ, ಅನುದಾನವೂ ಲಭ್ಯವಿದ್ದರೂ ಕಾಮಗಾರಿ ವಿಳಂಬವಾಗುತ್ತಿರುವುದೇಕೆ ಎಂದು ಪ್ರಶ್ನಿಸಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್, ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಮರುಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಜ್ ಯಾತ್ರಿಕರು ಎದುರಿಸುತ್ತಿರುವ ಸಮಸ್ಯೆಗಳತ್ತ ಸರ್ಕಾರದ…

Read More

ಭಗವಾನ್ ಶ್ರೀ ಮಹಾವೀರರ 2625ನೇ ಜನ್ಮ ಕಲ್ಯಾಣೋತ್ಸವ ಭಕ್ತಿಭಾವದಿಂದ ಆಚರಣೆ

ಮಂಗಳೂರು:ಜೈನ ಧರ್ಮದ ಮಹಾನ್ ತೀರ್ಥಂಕರರಾದ ಭಗವಾನ್ ಶ್ರೀ ಮಹಾವೀರರ 2625ನೇ ಜನ್ಮ ಕಲ್ಯಾಣೋತ್ಸವವನ್ನು ಮಂಗಳೂರಿನ ಬಜಿಲಕೇರಿ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.ನಗರದ ಬಸ್ತಿ ಹಿತ್ಲು ಪ್ರದೇಶದಲ್ಲಿರುವ ಬಸದಿ ಮಂದಿರದಲ್ಲಿ ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಬಸದಿಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮ ಆಚರಣೆಯ ಭಾಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಶಾಂತಿನಾಥ ಸ್ವಾಮಿಗೆ ಕ್ಷೀರಾಭಿಷೇಕ, ಅಗ್ರೋದಕ ಮೆರವಣಿಗೆ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣ,…

Read More

ಮರೆಯಾಗದಿರಲಿ ತುಳುನಾಡಿನ ಮೂಲ ಸಂಪ್ರದಾಯ.ತುಳುವೆರೆ ಕಲ ಕಾರ್ಯಕ್ರಮದಲ್ಲಿ ಕೊಡೆತ್ತೂರು ಗುತ್ತಿನಾರ್ ನಿತಿನ್ ಶೆಟ್ಟಿ ಆಶಯ

ಕಿನ್ನಿಗೋಳಿ: ತುಳುನಾಡಿನ ನಂಬಿಕೆ ಅನನ್ಯ. ದೈವವನ್ನು ಪ್ರೀತಿಪೂರ್ವಕವಾಗಿ ನಂಬಿದರೆ ಅವು ನಮ್ಮನ್ನು ಅಷ್ಟೇ ಪ್ರೀತಿಯಿಂದ ಕೈ ಹಿಡಿಯುತ್ತದೆ. ಅದಕ್ಕೆ ಅನೇಕ ನಿದರ್ಶನಗಳಿವೆ. ಯಾವುದೇ ಕಾರಣಕ್ಕೂ ನಮ್ಮ ಮೂಲ ಸಂಪ್ರದಾಯವನ್ನು ಮರೆಯಬಾರದು ಎಂದು ಕೊಡೆತ್ತೂರು ಗಡಿ ಪ್ರಧಾನರಾದ ನಿತಿನ್ ಶೆಟ್ಟಿ ಹೇಳಿದರು.ತುಲುವೆರೆ ಕಲ(ರಿ.) ಮಂಗಳೂರು ವತಿಯಿಂದ ಭಾನುವಾರ ಗುತ್ತಿನ ಚಾವಡಿಯಲ್ಲಿ ನಡೆದ ‘ಗುತ್ತುಗೊಂಜಿ ಕಲೊತ ಸುತ್ತು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ ಸಂಸ್ಕೃತಿಯಲ್ಲಿ ಗುತ್ತುಗಳ ಪಾತ್ರ ಅಪಾರ. ದೇವಳಗಳಲ್ಲಿರುವ ಶಿಷ್ಟಾಚಾರ ಗುತ್ತಿನ ಮನೆಗಳಿಗೂ ಅನ್ವಯ. ವಿಶ್ವಾದ್ಯಂತ ಅನೇಕ ಖ್ಯಾತನಾಮರನ್ನು…

Read More

ಬಿಸಿರೋಡು : ವೈರಲ್ ವಿಡಿಯೋ ಮೂಲಕ ಹೊರಬಂದ ರಸ್ತೆ ಅವ್ಯವಸ್ಥೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆ ಮಧ್ಯೆ ಬಿಸಿರೋಡು ಜಂಕ್ಷನ್ ನಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆಯಾಗುತ್ತಿದೆ ಎಂಬುದರ ಕುರಿತು ವ್ಯಕ್ತಿಯೋರ್ವರು ಮಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದ ಮ‌ೂಲಕ ವೈರಲ್ ಆಗಿದೆ.ಖಾಲಿದ್ ನಂದಾವರ ಎಂಬವರು ಕಾರಿನಲ್ಲಿ ಸಂಚರಿಸುವ ವೇಳೆ ರಸ್ತೆಯ ಮೇಲೆ ನಿಲ್ಲಿಸಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಕಾರಣವಾಗಿದ್ದ ವಾಹನಗಳ ವಿಡಿಯೋ ಮಾಡಿದ್ದಲ್ಲದೆ, ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ್ದಾರೆ. ಬಿಸಿರೋಡಿನಲ್ಲಿ ಇತ್ತೀಚಿಗೆ ನಿರ್ಮಾಣವಾದ ಬಾವ ಬಿಲ್ಡರ್ ನವರ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ಮುಂಭಾಗದಿಂದ…

Read More

ಬಂಟ್ವಾಳದಲ್ಲಿ ಮಾ.30ರಿಂದ ಎ.4ರವರೆಗೆ ಬ್ರಹ್ಮಕಲಶೋತ್ಸವ ಮಹೋತ್ಸವ

ಬಂಟ್ವಾಳ: ಶ್ರೀ ಜಗದಂಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ಸೇವಾ ಸಮಿತಿ ( ರಿ.) ದೇವಿನಗರ – ದಡ್ಡಲಕಾಡು ಇಲ್ಲಿ ಮಾ.30 ರಿಂದ ಎ.4 ರ ವರೆಗೆ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,ಶ್ರೀ ಚಂಡಿಕಾಯಾಗ ಹಾಗೂ ಸಹಪರಿವಾರ ದೇವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮದಾಸ್ ಬಂಟ್ವಾಳ ತಿಳಿಸಿದರು.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‌‌‌‌ ಸತ್ಯನಾರಾಯಣ ಭಟ್ ಶಿವಕ್ಷೇತ್ರ, ಇಜ್ಜ ಇವರ ನೇತ್ರತ್ವದಲ್ಲಿ, ವೇದಮೂರ್ತಿ…

Read More

ಏಪ್ರಿಲ್ 26ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ:ಮೂವರಿಗೆ ಗೌರವ

ಮಂಗಳೂರು:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಘೋಷಿಸಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ಸಾಹಿತಿ ರೋನ್ ರೋಚ್ ಕಾಸ್ಸಿಯಾ, ಕಲಾ ಕ್ಷೇತ್ರದಲ್ಲಿ ರಾಮದಾಸ ದತ್ತಾತ್ರೇಯ ಗುಲ್ವಾಡಿ ಹಾಗೂ ಜಾನಪದ ಕ್ಷೇತ್ರದಲ್ಲಿ ಸೈರು (ಮುರಳೀಧರ) ಪುತ್ತು ನಾಯ್ಕ ಅವರು ಗೌರವ ಪ್ರಶಸ್ತಿಗೆ ಭಾಜನರಾಗಿದ್ದು ಕಾರ್ಯಕ್ರಮವು ಎ.26ರಂದು ಸಂಜೆ 5 ಗಂಟೆಗೆ ಉಡುಪಿ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸ್ಟ್ಯಾನಿ ಅಲ್ವಾರಿಸ್ ತಿಳಿಸಿದರು. ನಗರದ…

Read More
error: Content is protected !!