ಫಲ್ಗುಣಿ ನದಿ ಕಲುಷಿತಕ್ಕೆ ಕೈಗಾರಿಕೆ ಕಾರಣವಲ್ಲ: ಕೆನರಾ ಕೈಗಾರಿಕ ಸಂಘ ಸ್ಪಷ್ಟನೆ

ಮಂಗಳೂರು:ಫಲ್ಗುಣಿ ನದಿ ನೀರು ಕಲುಷಿತಗೊಳ್ಳಲು ಕೈಗಾರಿಕೆಗಳು ಕಾರಣ ಎನ್ನುವ ಆರೋಪವನ್ನು ಕೆನರಾ ಕೈಗಾರಿಕ ಸಂಘ ತಳ್ಳಿ ಹಾಕಿದ್ದು, ಕೈಗಾರಿಕ ಪ್ರದೇಶದ ಹಾಗೂ ಪಕ್ಕದ ಪುನರ್ವಸತಿ ಪ್ರದೇಶದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನದಿ ಸೇರುತ್ತಿದೆ ಹೊರತು ಕೈಗಾರಿಕೆಗಳ ಸಂಸ್ಕರಿಸದ ತ್ಯಾಜ್ಯ ನೀರು ಅಲ್ಲ ಎಂದು ಕೈಗಾರಿಕ ಪ್ರತಿನಿಧಿಗಳು ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆನರಾ ಕೈಗಾರಿಕ ಸಂಘದ ಉಪಾಧ್ಯಕ್ಷ ಬಿ.ಎ. ಇಕ್ಬಾಲ್ ಅವರು, ಕೈಗಾರಿಕ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಆದರೆ ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿ…

Read More

ಕಳವಾರು ಪೇಜಾವರ ಚರ್ಚಿನಲ್ಲಿ ಮಾ.31ರಂದು ಶಿಲುಬೆಯ ಯಾತ್ರೆ

ಮಂಗಳೂರು:ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ| ಫಾ| ರೂಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ…

Read More

ಮಂಗಳೂರಿನಿಂದ ದಿವ್ಯ ದ್ವಾರಕಾ–ಸೋಮನಾಥ ಯಾತ್ರೆ: ಐಆರ್‌ಸಿಟಿಸಿ ವಿಶೇಷ ರೈಲು ಮೇ 10ರಿಂದ

ಮಂಗಳೂರು:ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌ ಲಿಮಿಟೆಡ್‌ (ಐಆರ್‌ಸಿಟಿಸಿ)ನಿಂದ ದಿವ್ಯ ದ್ವಾರಕಾಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಐಆರ್‌ಸಿಟಿಸಿಯ ಜಂಟಿ ಜನರಲ್‌ ಮ್ಯಾನೇಜರ್‌ ಸ್ಯಾಮ್‌ ಜೋಸೆಫ್‌ ಪಿ ತಿಳಿಸಿದರು.ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶೇಷ ರೈಲು ಯಾತ್ರೆಯು ಮೇ 10ರಂದು ಮಂಗಳೂರು ಮೂಲಕ ಹೊರಡಲಿದೆ ಎಂದರು. 10 ದಿನಗಳ ತೀರ್ಥ ಯಾತ್ರೆಯಲ್ಲಿ ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಸ್ಥಳಗಳು ಹಾಗೂ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…

Read More

ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯಿಂದ ಮಂಗಳೂರು ಉತ್ಸವಕ್ಕೆ ಸಜ್ಜು

ಮಂಗಳೂರು: ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಎ.4ರಿಂದ 12ರವರೆಗೆ ಮಂಗಳೂರು ಉತ್ಸವ ಎಂಬ ಮನರಂಜನಾ ಕಾರ್ಯಕ್ರಮ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದುಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯ ಮಂಜು ಸುವರ್ಣ ಸದಸ್ಯರಾದ ಮಂಜು ಸುವರ್ಣ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನೃತ್ಯ ಉತ್ಸವದ ಜತೆಗೆ ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಹಾಗೂ ಗಾಯನ ಸ್ಪರ್ಧೆ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಫುಡ್ ಫೆಸ್ಟಿವಲ್, ಸೆಲೆಬ್ರಿಟಿಗಳಿಂದ ಪ್ರದರ್ಶನ, ಐಸ್‌ಕ್ರೀಂ ಫೆಸ್ಟಿವಲ್, ಅಟೋ ಕಾನಿವಲ್, ಅಮ್ಯೂಸ್‌ಮೆಂಟ್…

Read More

ಮಂಗಳೂರಿಗೆ ‘ಅಪೋಲೊ ಓಷಿಯನ್’ ಎಲ್‌ಪಿಜಿ ಟ್ಯಾಂಕರ್ ಆಗಮನ – ಇಂಧನ ಭದ್ರತೆಗೆ ಬಲ

ಮಂಗಳೂರಿನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗುಜರಾತ್‌ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ ಬೃಹತ್ ಎಲ್‌ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ. ಈ ಹಡಗು ಸುಮಾರು 17,600 ಮೆಟ್ರಿಕ್ ಟನ್ ಎಲ್‌ಪಿಜಿ ಅನಿಲವನ್ನು ಹೊತ್ತು ತಂದಿದ್ದು, ಈ ಸರಕು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳಿಗೆ ಸೇರಿದ್ದಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇಂತಹ ಹಡಗುಗಳ ನಿರಂತರ…

Read More

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ

ಮಂಗಳೂರು ಸಮೀಪದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಇಂದು ಮುಂಜಾನೆ ಭೀಕರ ಹತ್ಯೆ ಘಟನೆ ನಡೆದಿದೆ. ಕಿನ್ಯ ಅಜ್ಜಿನಡ್ಕ ನಿವಾಸಿಯಾಗಿರುವ ಆರಿಫ್ ಎಂಬ ರೌಡಿಶೀಟರ್ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಆರಿಫ್, ಮುಂಜಾನೆ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ಬಳಿ ದುಷ್ಕರ್ಮಿಗಳು ಅವನನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಹಲ್ಲೆ ನಡೆಸಿದ ಪರಿಣಾಮ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರಿಫ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆ, ಈ ಹತ್ಯೆ ಹಳೆಯ ವೈಮನಸ್ಸಿನ ಪರಿಣಾಮವಾಗಿರಬಹುದೆಂದು…

Read More

ಬೆಂಗ್ರೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡ್‌ನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ವ್ಯಾಪ್ತಿಯ ಸ್ಯಾಂಡ್ ಪಿಟ್ ಬೆಂಗರೆ ಬಳಿ ವಿಶೇಷ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವ ವಹಿಸಿದ್ದರು. ಭೂಮಿ ಪೂಜೆ ಬಳಿಕ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಅನುದಾನವನ್ನು ಸಂಗ್ರಹಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ…

Read More

ಮಂಗಳೂರಿನಲ್ಲಿ ಚಿರತೆ ಸೆರೆ: ಸ್ಥಳೀಯರಲ್ಲಿ ಆತಂಕಕ್ಕೆ ತೆರೆ

ಮಂಗಳೂರು: ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂಚರಿಸುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕೆಲರಾಯ್ ಕ್ರಾಸ್‌ನ ನೆಕ್ಕರೆ ಪದವು ಪ್ರದೇಶದಲ್ಲಿ ಬೋನು ಅಳವಡಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆಯ ಸಂಚಾರದ ಬಗ್ಗೆ ಆತಂಕಗೊಂಡ ಸ್ಥಳೀಯರು ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಸ್ಪಂದಿಸಿ ಅರಣ್ಯ ಇಲಾಖೆಗೆ…

Read More

ಸಂವಿಧಾನ ಪೀಠಿಕೆ ಜಾಗೃತಿ: ಬ್ಯಾಂಕ್‌ಗಳು, ಸಹಕಾರ ಸಂಘಗಳಲ್ಲಿ ಬೋರ್ಡ್ ಅಳವಡಿಕೆ ಅಭಿಯಾನ

ಮಂಗಳೂರು: ನೇತಾಜಿ ಸುಭಾಸ್‌ಚಂದ್ರಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಮಂಗಳೂರು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ವ್ಯವಸ್ಥಾಪಕ ಸಂಗೊಳ್ಳಿ ಸೋಮಣ್ಣ ಮಾತನಾಡಿ, ಸಹಕಾರ ಇಲಾಖೆ ಅಡಿಯಲ್ಲಿ ಬರುವ ಖಾಸಗಿ ಬ್ಯಾಂಕ್‌ಗಳು, ಪತ್ತಿನ ಸಹಕಾರ ಸಂಘಗಳು, ಕೋಆಪರೇಟಿವ್ ಸಂಸ್ಥೆಗಳು ಹಾಗೂ ಕೆಎಂಎಫ್ ಡೈರಿ ಮತ್ತು ಹಾಲು ಉತ್ಪಾದಕರ ಸಂಘಗಳಲ್ಲಿ ಭಾರತದ ಸಂವಿಧಾನದ ಪೀಠಿಕೆ ಬೋರ್ಡ್ ಅಳವಡಿಸಲು ಅನುಮತಿ ದೊರೆತಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆ…

Read More
error: Content is protected !!