ಕನ್ನಡ ಕಲಿತವರಿಗೆ ಉದ್ಯೋಗ ಸಿಕ್ಕರೆ ಮಾತ್ರ ಭಾಷಾಭಿಮಾನ ಬೆಳೆಯಲಿದೆ

ಮಂಗಳೂರು: ಕನ್ನಡದಲ್ಲಿ ಶಿಕ್ಷಣ ಪಡೆದರೆ ಉದ್ಯೋಗ ಸಿಗುವುದಿಲ್ಲ ಎಂಬ ಧಾರಣೆ ಹೆಚ್ಚುತ್ತಿರುವ ಹಿನ್ನೆಲೆ ಇಂಗ್ಲಿಷ್‌ನಲ್ಲಿ ಕಲಿಯುವ ಅನಿವಾರ್ಯತೆ ನಿರ್ಮಾಣವಾಗಿದೆ. ಕನ್ನಡದಲ್ಲಿ ಕಲಿತವರಿಗೆ ಉದ್ಯೋಗಾವಕಾಶದ ಭರವಸೆ ದೊರಕಿದಾಗ ಮಾತ್ರ ಭಾಷೆಯ ಬಗ್ಗೆ ಅಭಿಮಾನ ಬೆಳೆಯಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ…

Read More

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿಗೆ ಪತ್ರಿಕಾಭವದಿಂದ ಗೌರವಾರ್ಪಣೆ ….. !

ಮಂಗಳೂರು:ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಇವರಿಗೆ ಮಂಗಳೂರು ಪ್ರೆಸ್ ಕ್ಲಬ್ , , ದ.ಕ.ಜಿಲ್ಲಾ ಕಾರ್ಯನಿರತ. ಪತ್ರಕರ್ತರ ಸಂಘ , ಪತ್ರಿಕಾ ಭವನ ಟ್ರಸ್ಟ್‌ ಜಂಟಿಯಾಗಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು . ಗೌರವಾರ್ಪಣೆಯನ್ನು ಹಿರಿಯ ಪತ್ರಕರ್ತರಾದ ಕೆ.ಆನಂದ ಶೆಟ್ಟಿ ನೆರವೇರಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ…

Read More

ಸಹಕಾರ ರತ್ನ , ಸಹಕಾರ ಕ್ಷೇತ್ರದ ಭೀಷ್ಮ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಒಲಿದ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿ …

ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ತನ್ನ 27 ನೇ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ – 2025 ಪ್ರಧಾನ ಕಾರ್ಯಕ್ರಮವು ಮಾರ್ಚ್ 28 ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6:00 ರಿಂದ ನಡೆಯಲಿದ್ದು, ಪ್ರಶಸ್ತಿಯನ್ನು ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ನೀಡಿ ಗೌರವಿಸಲಾಗುವುದೆಂದು ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಎಡ್ವರ್ಡ್ ಜೆ ಕೊಯೆಲ್ಹೋ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಕೊಣಾಜೆಯಲ್ಲಿ ಬ್ಯಾರಿ ಜನಪದ–ವಚನ ಸಾಹಿತ್ಯ ಪ್ರಚಾರೋಪನ್ಯಾಸ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ, ನಡುಪದವಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ‘ಬ್ಯಾರಿ ಜನಪದ ಮತ್ತು ವಚನ ಸಾಹಿತ್ಯ’ ಕುರಿತ ಪ್ರಚಾರೋಪನ್ಯಾಸ ಕಾರ್ಯಕ್ರಮ ಪೇಸ್ ನಾಲೆಜ್ ಸಿಟಿಯ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಡಾ. ಧನಂಜಯ ಕುಂಬ್ಳೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾಷೆ, ಸಂಸ್ಕೃತಿ ಮತ್ತು ಜನಾಂಗದ ಕುರಿತ ಸಂಶೋಧನೆಗಳು ನಿರಂತರವಾಗಿರಬೇಕು. ಸಂಶೋಧನೆಗಳು ಏಕಮುಖವಾಗದೆ, ಪ್ರಶ್ನೆ–ಉಪಪ್ರಶ್ನೆಗಳ ಮೂಲಕ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಸಹಾಯಕ ಪ್ರಾಧ್ಯಾಪಕ…

Read More

ನಂದಿಗುಡ್ಡೆಯ ‘ಹಲಸಿನ ಹಣ್ಣಿನ ಸರದಾರ’: ರೊನಾಲ್ಡ್ ಅವರ ಯಶೋಗಾಥೆ

ಮಂಗಳೂರು: ಪ್ರಕೃತಿಯ ಅಮೂಲ್ಯ ಕೊಡುಗೆಯಾದ ಹಲಸಿನ ಹಣ್ಣು ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಮಾತ್ರ ಲಭ್ಯವಾಗುತ್ತದೆ. ಆದರೆ ಮಂಗಳೂರಿನ ನಂದಿಗುಡ್ಡೆ–ಮಾರ್ನಮಿಕಟ್ಟೆ ರಸ್ತೆ ಬದಿಯಲ್ಲಿ ವರ್ಷಪೂರ್ತಿ ಸವಿಯಾದ ಹಲಸಿನ ಹಣ್ಣುಗಳನ್ನು ಒದಗಿಸುವ ಮೂಲಕ ಮುಡಿಪು ನಿವಾಸಿ ರೊನಾಲ್ಡ್ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ವಿರಾಮವಿಲ್ಲದೆ ವ್ಯಾಪಾರ ನಡೆಸುತ್ತಿರುವ ರೊನಾಲ್ಡ್, ಹಲಸಿನ ಹಣ್ಣಿನ ಸೀಸನ್ ಮುಗಿದರೂ ಗ್ರಾಹಕರಿಗೆ ನಿರಂತರವಾಗಿ ಹಣ್ಣುಗಳನ್ನು ಒದಗಿಸುತ್ತಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಪ್ರದೇಶಗಳಿಂದ ಹಣ್ಣುಗಳನ್ನು ತರಿಸಿ ಮಾರಾಟ ಮಾಡುವುದು…

Read More

ಮಂಗಳೂರು ವಿ.ವಿ. ವಾರ್ಷಿಕ ಘಟಿಕೋತ್ಸವ ಮಾ. 28ರಂದು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

Read More

ಮಂಗಳೂರು ನಗರದಲ್ಲಿ ಸಿಟಿ ಬಸ್ ಸಮಸ್ಯೆ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಅನೇಕ ಸಿಟಿ ಬಸ್‌ಗಳು ನಿಗದಿತ ಮಾರ್ಗಗಳಿಗೆ ಸಂಚರಿಸದಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ನಗರದ ಕೆಲವು ಖಾಸಗಿ ಸಿಟಿ ಬಸ್‌ಗಳು ಆರ್ಥಿಕ ಕಾರಣಗಳನ್ನು ಉಲ್ಲೇಖಿಸಿ ಕೆಲ ಪ್ರದೇಶಗಳಿಗೆ ಸೇವೆಯನ್ನು ಕಡಿತಗೊಳಿಸಿರುವುದು, ಟ್ರಿಪ್‌ಗಳನ್ನು ರದ್ದುಪಡಿಸಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಬಸ್‌ಗಳನ್ನು ನಿಯೋಜಿಸಲಾಗಿದ್ದರೂ, ಅವುಗಳ ಸೇವೆಯೂ ನಂತರ ಸ್ಥಗಿತಗೊಂಡಿದೆ ಎಂದು ಅವರು ಆರೋಪಿಸಿದರು. ಈ ಪರಿಣಾಮವಾಗಿ ಶಕ್ತಿನಗರ, ಬಜಾಲ್-ಪಡ್ಪು-ಕೊಟ್ಟಾರ, ಪಡೀಲ್-ಕಣ್ಣಗುಡ್ಡೆ,…

Read More

ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್…

Read More

ಕದ್ರಿ ಮೈದಾನದಲ್ಲಿ ಮಾ.26ರಿಂದ 29ರ ತನಕ ರಜತ ಮಹೋತ್ಸವ ಶ್ರೀ ರಾಮೋತ್ಸವ … !

ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು . ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ…

Read More

ಮಾ. 26 ರಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ 14 ಮಹಿಳಾ ಸಾಧಕಿಯರಿಗೆ ಸನ್ಮಾನ ….!

ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 26ರಂದು ನಗರದ ಬಿಜೈನ ಮೆಸ್ಕಾಂ ಕಚೇರಿ ಬಳಿಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ‘ವಿಶೇಷ ಮಹಿಳಾ ದಿನಾಚರಣೆ’ ಮತ್ತು ಸಾಧಕಿಯರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ, ಹಿರಿಯ ಪತ್ರಕರ್ತರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು…

Read More
error: Content is protected !!