ರಾಮಕೃಷ್ಣ ಮಿಷನ್‌ನಿಂದ ಧಾರ್ಮಿಕ ವಸ್ತುಗಳ ಗೌರವಯುತ ವಿಲೇವಾರಿಗೆ ‘ವಿಸರ್ಜನೆ’ ಅಭಿಯಾನಕ್ಕೆ ಚಾಲನೆ

ಮಂಗಳೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿರುವ ರಾಮಕೃಷ್ಣ ಮಿಷನ್ ‘ಸ್ವಚ್ಛ ಮಂಗಳೂರು’ ಅಭಿಯಾನದ ಅಡಿಯಲ್ಲಿ ಧಾರ್ಮಿಕ ತ್ಯಾಜ್ಯಗಳ ಸಮರ್ಪಕ ಹಾಗೂ ಗೌರವಯುತ ವಿಲೇವಾರಿಗಾಗಿ ‘ವಿಸರ್ಜನೆ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ಅಭಿಯಾನವು ಮಾರ್ಚ್ 16 ರಿಂದ 26 ರವರೆಗೆ ಮಂಗಳೂರಿನ ಆಯ್ದ ಆರು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ತಿಳಿಸಿದರು . ನಗರದ ರಾಮಕೃಷ್ಣ ಮಠದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ‘ವಿಸರ್ಜನೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು, ನಮ್ಮ ಜೀವನ ಶೈಲಿಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ವಿವರಿಸಿ, ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಇವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯವನ್ನು ಕಾಪಾಡಲು ಬಹಳ ಸಹಾಯಕವಾಗುತ್ತವೆ ಎಂದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಒಕ್ಕೂಟದ…

Read More

ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯಕ್ಷ ಶಿಕ್ಷಣ ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು…

Read More

ಮಂಗಳೂರಿನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಮಂಗಳೂರು: ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗಳ ಸಹಯೋಗದಲ್ಲಿ ೨೦೨೫ ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ , ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರಗಳ ವಿತರಣೆಯು ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು . ಕಾರ್ಯವನ್ನು ಉದ್ಘಾಟನೆ ಮಾಡಿ ಮಾತನಾಡಿದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ,…

Read More

ಮಗಳ ಹುಟ್ಟುಹಬ್ಬದ ಮುನ್ನವೇ ತಂದೆ ಸಾವಿಗೆ ಬಲಿ – ಬಂಟ್ವಾಳದಲ್ಲಿ ದುರ್ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ರಾತ್ರಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮ*ಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃ*ಪಟ್ಟ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ವಲಯದ ಛಾಯಾಗ್ರಾಹಕ ಸಂಘದ ಸಕ್ರಿಯ ಸದಸ್ಯರಾಗಿದ್ದ ರಕ್ಷಿತ್ ಶೆಟ್ಟಿ ಅವರು ವೃತ್ತಿಯಲ್ಲಿ ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು. ಇಡೀ ಘಟನೆಯಲ್ಲಿ ಅತ್ಯಂತ ನೋವಿನ ಸಂಗತಿಯೆಂದರೆ,…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆ

ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಹಲವಾರು ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ದಾರಕ್ಕೆ, ಅಭಿವೃದ್ಧಿಗೆ ಹೆಗಲು ಕೊಡುವ ಯೋಗ ಲಭಿಸಿರುವುದು ನನ್ನ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ಶೀಘ್ರದಲ್ಲಿ ಇಲ್ಲಿನ ಮೇಲ್ಛಾವಣಿ ಕಾಮಗಾರಿಯು ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೋಹನ್ ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಲಲೇಶ್…

Read More

ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿದ ಲಾರಿ – ಬೇಕರಿ, ಮೊಬೈಲ್ ಅಂಗಡಿಗೆ ಡಿಕ್ಕಿ

ಗುರುಪುರ: ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಘಟನೆ ಇಂದು ಸಂಭವಿಸಿದೆ. ಲಾರಿ ನಿಯಂತ್ರಣ ತಪ್ಪಿ ಜಂಕ್ಷನ್ ಬಳಿ ಇರುವ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅಂಗಡಿಗಳ ಮುಂಭಾಗಕ್ಕೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಕರಿಸಿದರು.

Read More

ಮಂಗಳೂರು–ಶಾರ್ಜಾ ದೈನಂದಿನ ವಿಮಾನ ಹಾರಾಟ ಪುನರಾರಂಭ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಮತ್ತೆ ದೈನಂದಿನ ವಿಮಾನ ಸೇವೆ ಆರಂಭವಾಗುತ್ತಿದೆ. ಮಾರ್ಚ್ 16 ರಿಂದ 28ರವರೆಗೆ ಮಂಗಳೂರು–ಶಾರ್ಜಾ ಮಾರ್ಗದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆ ದೈನಂದಿನ ವಿಮಾನ ಹಾರಾಟ ನಡೆಸಲಿದೆ. ವಿಮಾನ ವೇಳಾಪಟ್ಟಿಯ ಪ್ರಕಾರ ಮಂಗಳೂರಿನಿಂದ ವಿಮಾನವು **ಮಧ್ಯಾಹ್ನ 1:25 (IST)**ಕ್ಕೆ ಹೊರಟು ಶಾರ್ಜಾ ಸಮಯದ ಪ್ರಕಾರ ಸಂಜೆ 4:05ಕ್ಕೆ ತಲುಪಲಿದೆ. ವಾಪಸಾಗಿ ಶಾರ್ಜಾದಿಂದ ಸಂಜೆ 5:05ಕ್ಕೆ ಹೊರಡುವ ವಿಮಾನವು **ರಾತ್ರಿ 10:30 (IST)**ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಈ…

Read More

ಅಮೆರಿಕಾ ನೀತಿಯಿಂದ ಜಾಗತಿಕ ಸಂಕಷ್ಟ: ಪ್ರಧಾನಿ ನಡೆ ಟೀಕಿಸಿದ ಹರೀಶ್ ಕುಮಾರ್

ಮಂಗಳೂರು: ಇರಾನ್–ಅಮೆರಿಕಾ–ಇಸ್ರೇಲ್ ನಡುವಿನ ಉದ್ವಿಗ್ನತೆ ಜಾಗತಿಕ ಮಟ್ಟದಲ್ಲಿ ಸಂಕಷ್ಟ ಉಂಟುಮಾಡುವ ಸಾಧ್ಯತೆ ಇದೆ. ಅಮೆರಿಕಾದ ಉದ್ದಟ ನೀತಿಯಿಂದ ವಿಶ್ವಕ್ಕೆ ದೊಡ್ಡ ಕಂಟಕ ಎದುರಾಗಿದ್ದು, ತೈಲ ರಾಷ್ಟ್ರಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಿಂದ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆ ಮೇಲೆ ಪರಿಣಾಮ ಬಿದ್ದು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ…

Read More
error: Content is protected !!