ಕಾನಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕದಲ್ಲಿರುವ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸುಮಾರು 25 ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಈ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಗತ್ಯ ಅನುದಾನವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಆದರೆ ಬಳಿಕ ಅನುದಾನ…

Read More

ತುಳು ಮಕ್ಕಳ ಗೀತೆ, ಕಥೆಗಳಿಗೆ ಆಹ್ವಾನ

ಮಂಗಳೂರು: ತುಳು ಭಾಷೆ ಹಾಗೂ ಸಂಸ್ಕೃತಿಯ ಉತ್ತೇಜನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ತುಲುವೆರೆ ಕಲ ಟ್ರಸ್ಟ್ (ರಿ.) ಮಂಗಳೂರು ತನ್ನ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕರಿಂದ ತುಳು ಮಕ್ಕಳ ಗೀತೆ ಹಾಗೂ ಮಕ್ಕಳ ಕಥೆಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅತ್ಯುತ್ತಮ ಮೂರು ಗೀತೆ ಹಾಗೂ ಮೂರು ಕತೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ ಮೇ ತಿಂಗಳಲ್ಲಿ ನಡೆಯುವ ಟ್ರಸ್ಟ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿಜೇತರನ್ನು ಗೌರವಿಸಲಾಗುತ್ತದೆ. ಆಯ್ಕೆಯಾದ ಬರಹಗಳನ್ನು ನಂತರ ಪುಸ್ತಕ ರೂಪದಲ್ಲಿಯೂ ಪ್ರಕಟಿಸಲಾಗುವುದು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ…

Read More

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್…

Read More

ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಚಾಲನೆ ….!

ಮಂಗಳೂರು – ತಿರುನಲ್ವೇಲಿ ಎಕ್ಸ್‌ಪ್ರೆಸ್ (16707/16708): ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ. ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ. ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ. ಇದು ಕೋವಿಲ್‌ಪಟ್ಟಿ, ಸತ್ತೂರು,…

Read More

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ. 31 ರಿಂದ ಎ. 2 ರವರೆಗೆ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಮಾರಂಭ … !

ಮಂಗಳೂರು: ಹಿಂದೂ ಬಾಂಧವರ ಐಕ್ಯತೆ ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು. ಅವರು ನಗರದ ಪತ್ರಿಕಾ ಭವನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸುಮಾರು 11 ವರ್ಷಗಳಿಂದ ಧಾರ್ಮಿಕ,…

Read More

ಮೂತ್ರಪಿಂಡ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ : ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್

ಮಂಗಳೂರು: ವಿಶ್ವ ಕಿಡ್ನಿ ದಿನವನ್ನು ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತದೆ . ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರು ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಕಿಡ್ನಿ ಆರೈಕೆಯನ್ನು ನೆಫ್ರಾಲಜಿ ವಿಭಾಗವು ದಿನದ 24 ಗಂಟೆಯೂ ನೀಡುತ್ತಾ ಬಂದಿದೆ ಎಂದು ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್ ತಿಳಿಸಿದರು . ಅವರು ನಗರದ…

Read More

ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ–ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿತು. ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಭೂಮಿಪೂಜೆ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಅಗತ್ಯವಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕಾಮಗಾರಿಗೆ ಅನುದಾನ ಮಂಜೂರಾಗಿತ್ತು ಎಂದು ಹೇಳಿದರು….

Read More

ಮುಂಡೋಳಿ ನಿವಾಸಿ ಕೃಷಿಕ ಬೈಕ್ ಅಪಘಾತದಲ್ಲಿ ದಾರುಣ ಸಾವು

ಉಳ್ಳಾಲ: ಕುತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಪಾದಚಾರಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟವರು. ಅವರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ದಿನೇಶ್ ಗಟ್ಟಿ ಅವರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್…

Read More

ಸರಕಾರಿ ಅಧಿಕಾರಿಗಳ ಕೇಸರಿ ನಡಿಗೆ ಸಂವಿಧಾನ ವಿರೋಧಿ: ಎಸ್‌ಡಿಪಿಐ ಆಕ್ರೋಶ”

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರು ಸಂಘದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ಭಾಗವಹಿಸಿರುವುದನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸರಕಾರಿ ಅಧಿಕಾರಿಗಳು ಸಂವಿಧಾನಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು, ನಿರ್ದಿಷ್ಟ ಸಿದ್ಧಾಂತದ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ…

Read More

ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಶವವಾಗಿ ಪತ್ತೆ: ಸೋಮೇಶ್ವರದ ಗದಾತೀರ್ಥ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ

ಉಳ್ಳಾಲ: ಮಾ.11ಕಳೆದ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೊಬ್ಬನ ಶವವು ಇಂದು ಬೆಳಿಗ್ಗೆ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಛೇದನಗೊಂಡಿದ್ದ ಖಿನ್ನತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕನಾಗಿದ್ದಾನೆ. ಮಂಗಳೂರಿನ ಕದ್ರಿಯ ವೇದ ಮೋಟಾರ್ಸ್‌ನಲ್ಲಿ ಉದ್ಯೋಗದಲ್ಲಿದ್ದ ವಿವೇಕ್ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ…

Read More
error: Content is protected !!