ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ವಶಕ್ಕೆ
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಹಮ್ಮದ್ ಶಫೀಕ್, ಎಂಬತನನ್ನು ಬಂಧಿಸಲಾಗಿದೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು ಮಾರ್ಚ್ 2ರ ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದರು. ಆಗ ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ಯುವಕನೊಬ್ಬ ಹಕೀಂ ಅವರ ಕಡೆಗೆ…