ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ – ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ ಅವರ ದ್ವೇಷದ ರಾಜಕಾರಣವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಉಗ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿನಿಯರ ಹಿತಾಸಕ್ತಿಗೆ ಸ್ಪಂದಿಸಿದ ಪ್ರಾಮಾಣಿಕ ಅಧಿಕಾರಿಯನ್ನು ಬಲಿಪಶು ಮಾಡುವ ಬದಲು, ನಿಯಮ…

Read More

ದೇರಳಕಟ್ಟೆ ಯಲ್ಲಿ ಶೇಖರಣೆ ಗೊಂಡ ತ್ಯಾಜ್ಯ ನೀರು: ಪ್ರತಿಭಟನೆ

ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕ ಘಟಕದ ಆಶ್ರಯದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಆಡುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸಿ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಸಭೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಬಳಿ ಇರುವ ರಿಕ್ಷಾ ಪಾರ್ಕ್ ನಲ್ಲಿ ನಡೆಯಿತು. ತುಳು ನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ದೇರಳಕಟ್ಟೆ ಪರಿಸರ ದಲ್ಲಿ ನಿರ್ಮಾಣ ಆಗಿರುವ ಬಹು ಮಹಡಿ ಕಟ್ಟಡ ಗಳ…

Read More

ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಶುದ್ಧ ಸುಳ್ಳು ,ಸರಕಾರ ನೀಡಿದ ಅನುದಾನದ ದಾಖಲೆ ನನ್ನ ಬಳಿ ಇದೆ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸುತ್ತಾರೆ ಆದರೆ ಶಾಸಕರು ನಡೆಸುತ್ತಿರುವ ಗುದ್ದಲ್ಲಿ ಪೂಜೆಗೆ ಅನುದಾನ ಎಲ್ಲಿಂದ ಬರುತ್ತದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪ್ರಶ್ನಿಸಿದ್ದಾರೆ. ನಗರದ ಮಹಾನಗರ ಪಾಲಿಕೆಯಲ್ಲಿರುವ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಮಂಗಳೂರಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ 2ರಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2024-27ನೇ ಸಾಲಿಗೆ 165ಕೋಟಿ ಅನುದಾನ ಹಂಚಿಕೆಯಾಗಿದೆ. ವೆಟ್‌ವೆಲ್…

Read More

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ ದ.ಕ. ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ,ವಾಹನ ಚಾಲಕರ ಮತ್ತು ಗ್ರೂಪ್ ಡಿ‌.ನೌಕರರ ಸಂಘ (ರಿ.) ಬೆಂಗಳೂರು ಇದರ ದ.ಕ.ಜಿಲ್ಲೆಯ 2025 -2029 ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ನಿವೃತ್ತ ಬೊಧಕೇತರ ನೌಕರರಿಗೆ ಗೌರವಾಭಿನಂದನೆ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಹಾಲ್ ನಲ್ಲಿ ನಡೆಯಿತು. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ನವೀನ್…

Read More

ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಸಾಮೂಹಿಕ ಧರಣಿ

ಬಂಟ್ವಾಳ: ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30 ರವರೆಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ತಿಳಿಸಿದರು.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ…

Read More

ಮಾ. 4 ರಿಂದ 8ರ ವರೆಗೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ … .. ! ಗಂಗಾರತಿಗೆ ಸಾಕ್ಷಿಯಾಗಲಿದೆ ಕಡಲ ಕಿನಾರೆ ..!

ಮಂಗಳೂರು:ಕಡಲ ಕಿನಾರೆಯಲ್ಲಿ ನೆಲೆಯಾದ ಪುರಾಣ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ಅಮ್ಮನವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವವು ಇದೇ ಬರುವ ಮಾ. 4 ರಿಂದ 8ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಮಾಜಿ ಸಂಸದರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದರು . ಅವರು ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಶ್ರೀ ಭಗವತಿ ಮಾತೆಯು ಅನೇಕ ಕಾರಣಿಕ ಶಕ್ತಿಯನ್ನು ಈ ಮಣ್ಣಿನಲ್ಲಿ ಅವತರಿಸಿದ ಐತಿಹ್ಯ ಈ ಮಣ್ಣಿಗಿದೆ . ವಿದ್ವಾನ್ ವೇದಮೂರ್ತಿ…

Read More

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ DYFI ಜಂಟಿ ನೇತ್ರತ್ವದಲ್ಲಿ ಇಂದು ದಕ್ಕೆ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. 300ಕ್ಕೂ ಮಿಕ್ಕಿದ…

Read More

ಕದ್ರಿ–ಶಕ್ತಿನಗರ ಪ್ರದೇಶಗಳಲ್ಲಿ ಚಿರತೆ ಸಂಚಾರ: ಶಾಸಕರ ಸಭೆ, ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮ

ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ…

Read More

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್

ಮಂಗಳೂರು:ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

Read More

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

ಮಂಗಳೂರು:ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ. ಉದ್ಘಾಟಿಸಿದರು. ಮೈ ಭಾರತ್ ದಕ್ಷಿಣ ಕನ್ನಡ…

Read More
error: Content is protected !!