ಮಕ್ಕಳ ಹಕ್ಕುಗಳ ಆಯೋಗದ ನೇಮಕಾತಿ ರದ್ದುಪಡಿಸಲು ಆಗ್ರಹ: ಅರ್ಹತಾ ಮಾನದಂಡ ಉಲ್ಲಂಘನೆ ಆರೋಪ
ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲ. ಹೀಗಾಗಿ ಅವರ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ಕಾನೂನಿನ ಪ್ರಕಾರ ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಆಗ್ರಹಿಸಿವೆ. ನಗರದ ಪ್ರೆಸ್ಕ್ಲಬ್ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜಾ, ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯಲ್ಲಿ…