ಛಲವಾದಿ ಟಿ.ನಾರಾಯಣಸ್ವಾಮಿ ವಿರುದ್ಧ ಅವಹೇಳನ ಆರೋಪ.ಶಾಸಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹ.
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಕರ್ನಾಟಕ ಸರಕಾರದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣ ಸ್ವಾಮಿ ಅವರ ಬಗ್ಗೆ ಅವಹೇಳನ ಪದ ಬಳಕೆ ಮಾಡುವ ಮೂಲಕ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಮಾಡಿರುವ ಅವಮಾನ. ಈ ಕುರಿತು ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಶಿಷ್ಟ ಜಾತಿ ಸಮುದಾಯವನ್ನು ಸೇರಿಸಿ ಪ್ರತಿಭಟನೆ ಮಾಡುವ ಸ್ಥಿತಿ ತಲುಪಬಹುದು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಮೂರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ…