ಐವನ್ ಡಿ’ಸೋಜಾರಿಂದ ಪಂಪ್‌ವೆಲ್–ಕಂಕನಾಡಿ ರಸ್ತೆ ಕಾಮಗಾರಿ ಪರಿಶೀಲನೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರು ಮಂಗಳೂರು ನಗರದ ಪಂಪ್‌ವೆಲ್–ಕಂಕನಾಡಿ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಚಾರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಈ ರಸ್ತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ವಿಳಂಬವಿಲ್ಲದೆ, ಉನ್ನತ ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ…

Read More

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ತಪ್ಪಿದ ದುರಂತ

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ.ಘಟನೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಸಂಭವನೀಯ ದುರಂತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಫೆ. 22 ರಂದು ಜಪ್ಪುಗುಡ್ಡೆಚಾವಡಿ ಗೃಹ ಪ್ರವೇಶ ಮತ್ತು ಪಂಚದಿನಗಳ ಧಾರ್ಮಿಕ ಉತ್ಸವ … !

ಮಂಗಳೂರು ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಜಪ್ಪುಗುಡ್ಡೆಚಾವಡಿಯ ಪುನರ್ನವೀಕರಣಗೊಂಡ ಮನೆಯ ಪ್ರವೇಶೋತ್ಸವ ಮತ್ತು ಧರ್ಮನೇಮವು ಫೆಬ್ರವರಿ 20 ರಿಂದ 25ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ತಿಳಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಿಯಾಲಗುತ್ತು, ಜಪ್ಪುಗುಡ್ಡೆಗುತ್ತು ಮತ್ತು ಬಡಿಲಗುತ್ತು ಮನೆತನಗಳು ತುಳುನಾಡಿನ ಕಟ್ಟು ಕಟ್ಟಳೆಗಳನ್ನು ಮತ್ತು ದೈವದೇವರ ಆರಾಧನಾ ಕ್ಷೇತ್ರಗಳ ಸೇವೆಗಳನ್ನು ಸತ್ಯ-ಧರ್ಮದ ಹಾದಿಯಲ್ಲಿ ನಡೆಸಿಕೊಂಡು ಬರುತ್ತಿರುವ ಜವಾಬ್ದಾರಿಯುತ ಮನೆತನಗಳಾಗಿವೆ ಎಂದು ಹೇಳಿದರು….

Read More

‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಮೊದಲ ಹಾಡು ಬಿಡುಗಡೆ

ವೈಲ್ಡ್ ಟೈಗರ್ ಸಫಾರಿ ಚಿತ್ರದ ತಂಡವು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿರುವುದನ್ನು ಸಂತೋಷದಿಂದ ಪ್ರಕಟಿಸುತ್ತದೆ.ಚಿತ್ರದ ಟೀಸರ್‌ಗೆ ಕನ್ನಡ ಮತ್ತು ಹಿಂದಿ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ಲಭಿಸಿದ ಬಳಿಕ ಚಿತ್ರದ ಬಗ್ಗೆ ನಿರೀಕ್ಷೆಗಳು ಇನ್ನಷ್ಟು ಹೆಚ್ಚಾಗಿವೆ. ದೊರೆತ ಅಪಾರ ಮೆಚ್ಚುಗೆಯು ವೈಲ್ಡ್ ಟೈಗರ್ ಸಫಾರಿ ಸಾಮಾನ್ಯ ಪ್ರೇಕ್ಷಕರ ಹೃದಯವನ್ನು ಸ್ಪರ್ಶಿಸುವ ಚಿತ್ರವಾಗಲಿದೆ ಎಂಬ ನಮ್ಮ ನಂಬಿಕೆಯನ್ನು ಬಲಪಡಿಸಿದೆ.ವಿ.ಕೆ. ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿನೋದ್ ಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಕೆಜಿಎಫ್ ಚಿತ್ರದ ಲೇಖಕರಾಗಿ ಪ್ರಸಿದ್ಧರಾದ ಎಂ. ಚಂದ್ರಮೌಳಿ ನಿರ್ದೇಶಿಸಿದ್ದಾರೆ….

Read More

ಮಂಗಳೂರಿನಲ್ಲಿ ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಠಿಣ ಕ್ರಮ: ₹10,000 ದಂಡ, ಜಾಗೃತಿ ಅಭಿಯಾನ ಆರಂಭ

ಮಂಗಳೂರು : ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆ ನಿಷೇದ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿದೆ.ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆಮಾಡಿದಲ್ಲಿ 10 ,000 ದಂಡ ವಿಧಿಸಲಾಗುತ್ತದೆ.ಹಸಿಕಸ-ಒಣಕಸವನ್ನು ವಿಂಗಡಿಸಿ ಕೊಡುವ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.ಅಂಗಡಿ ,ಫ್ಲಾಟ್ ,ಸಾರ್ವಜನಿಕರಿಗೆ sticker ನೀಡಿ ಮಾಹಿತಿ ಪ್ರಸಾರದ ಕಾರ್ಯ ನಡೆಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ವಿರುದ್ಧ ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಲಯ ಆಯುಕ್ತರಾದ ರೇಖಾ ಶೆಟ್ಟಿ ತಿಳಿಸಿದ್ದಾರೆ.ನಗರದಲ್ಲಿ ಬಹುತೇಕ…

Read More

ಫೆ.14 ರಂದು ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 … !

ಮಂಗಳೂರು:ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಫೆ.14 ರಂದು ಬೆಳಗ್ಗೆ 10 ಗಂಟೆಗೆ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕರಾದ ಡಾ|ಗೀತಾ ಬಿ.ವಿ. ತಿಳಿಸಿದರು. ಅವರು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭ ಧನಂಜಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಚಾರ ಸಂಕಿರಣವನ್ನು ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ|ಬೋಳಾರ ಶಿವರಾಮ ಶೆಟ್ಟಿಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More

ಫೆ.21ರಂದು ಕುದ್ರೋಳಿ ತೀರ್ಥಾಟನೆ ‘ ನಡಿಗೆ ದೇವರ ಕಡೆಗೆ … !

ಮಂಗಳೂರು:ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಟಾಪನೆ ಮಾಡಿದ ಸವಿ ನೆನಪಿಗಾಗಿ ಫೆ. 21ರಂದು ಕ್ಷೇತ್ರದ ವತಿಯಿಂದ ‘ಕುದ್ರೋಳಿ ತೀರ್ಥಾಟನೆ’ ನಡಿಗೆಯನ್ನು ಆಯೋಜಿಸಲಾಗಿದ್ದು ಬೆಳಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11. 30 ಕ್ಕೆ ಶ್ರೀ ಸನ್ನಿಧಿಯನ್ನು ತಲುಪಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ ಬಗ್ಗೆ ಹೆಚ್ಚಿನ…

Read More

ಡಾ. ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವ …. !

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿವರ್ಯರ ಮಾರ್ಗದರ್ಶನದಲ್ಲಿ , ಡಾ . ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಹೇಮಂತ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ದೇವಾಲಯದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕ್ರಾಯಕ್ರಮಗಳೊಂದಿಗೆ…

Read More

ಪುತ್ತೂರಿನಲ್ಲಿ ‘ಅಬ್ಬಕ್ಕ @500’ ರಾಷ್ಟ್ರೀಯ ವಿಚಾರ ಸಂಕಿರಣ: 21 ಸಾಧಕ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ

ಪುತ್ತೂರು: ಅಖಿಲ ಭಾರತೀಯ ರಾಷ್ಟಿçÃಯ ಶೈಕ್ಷಿಕ್ ಮಹಾಸಂಘ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು ಇದರ ಇತಿಹಾಸ ವಿಭಾಗ, ಐಕ್ಯೂಎಸಿ ಸಹಯೋಗದೊಂದಿಗೆ ರಾಣಿ ಅಬ್ಬಕ್ಕಳ ಸಾಧನೆಗಳನ್ನು ರಾಷ್ಟ್ರ ವ್ಯಾಪ್ತಿಗೊಳಿಸುವ ನಿಟ್ಟಿನಲ್ಲಿ `ಅಬ್ಬಕ್ಕ @೫೦೦’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಫೆ.೧೬ರಂದು ವಿವೇಕಾನಂದ ಎಂಜಿನಿಯರಿAಗ್ ಕಾಲೇಜಿನ ಸಾವರ್ಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ತಿಳಿಸಿದ್ದಾರೆ….

Read More

ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮ: ಫೆ.14–15 ರಂದು

ಪುತ್ತೂರು: ಒಳಮೊಗ್ರು ಗ್ರಾಮದ ಹೃದಯಭಾಗದಲ್ಲಿರುವ ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಶತಮಾನೋತ್ಸವ ಸಮಾರಂಭವು ಫೆ.14 ಮತ್ತು 15ರಂದು ನಡೆಯಲಿದ್ದು, ಈ ಸಂದರ್ಭ ನೂತನ ಸಾಂಸ್ಕೃತಿಕ ಸಭಾಭವನ. ವೇದಿಕೆ, ರಂಗಮಂದಿರದ ಉದ್ಘಾಟನೆ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ…

Read More
error: Content is protected !!