ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿದೆ – ಮೀನಾಕ್ಷಿ ಸುಂದರಂ
ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ.ಈ ಹಿನ್ನೆಲೆಯಲ್ಲಿ ಜಾರಿಗೊಂಡ 4 ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು.ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು ಇಂದು ಮಂಗಳೂರಿನ…