ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ

ಬಂಟ್ವಾಳ:ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ ಹಾಕಲಾದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡು ಹೋಗಲು ಸಾಧ್ಯವಾಗದೆ ಒದ್ದಾಡುತ್ತಿದ್ದ ಚಿರತೆಯ ನೋಡಿದ ಗ್ರಾಮಸ್ಥರು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು ಪಿಲಿಕುಲದ ವೈದ್ಯಾಧಿಕಾರಿ ಯಶಸ್ವಿ ನಾರವಿ ಅವರು ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದು, ಬಳಿಕ…

Read More

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು … !

ಮಂಗಳೂರು:ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ಹಸ್ತಾಂತರವನ್ನು ಮಾಡಲಾಯಿತ್ತು . ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮೂಲಕ ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಸಿ.ವಿ.ಎಸ್‌. ಚಂದ್ರಶೇಖ‌ರ್ ಅವರು ಈ ಚೆಕ್ ಅನ್ನು ಹರೀಶ್ ಕುಟುಂಬಕ್ಕೆ…

Read More

ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ…. !

ಮಂಗಳೂರು:ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ವಂಚನೆಗೊಳಗಾದ ಸಂತ್ರಸ್ತರ ಲಕ್ಕಿ ಸ್ಕೀಮ್ ಸಂತ್ರಸ್ತರ ವೇದಿಕೆ ಮಂಗಳೂರು ವತಿಯಿಂದ ನ್ಯಾಯಕ್ಕಾಗಿ ಪ್ರತಿಭಟನೆ ನಗರದ ಕ್ಲಾಕ್ ಟವರ್ ಬಳಿ ಇಂದು ನಡೆಯಿತು . ಈ ಸಂದರ್ಭದಲ್ಲಿ ಸಂತ್ರಸ್ತರು ಪ್ಲಕಾರ್ಡ್‌ಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು . ನಗರದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಡ್ ಕಂಪೆನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿದರು . ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ , ಸಿಪಿಐಎಂ…

Read More

ಹಸಿರು ಕ್ಯಾಂಪಸ್ ಮತ್ತು ಪರಿಸರ ಸುಸ್ಥಿರತೆಯಲ್ಲಿ ಮಂಗಳೂರು ವಿವಿಗೆ ಭಾರತದಲ್ಲೇ 3ನೇ ಸ್ಥಾನ …. !

ಮಂಗಳೂರು:ಗ್ರೀನ್ ಮೆಟ್ರಿಕ್ ಶ್ರೇಯಾಂಕವು ಹಸಿರು ಕ್ಯಾಂಪಸ್ ಮತ್ತು ಪರಿಸರ ಸುಸ್ಥಿರತೆಯನ್ನು ಆಧರಿಸಿ ಇಂಡೋನೇಷ್ಯಾ ವಿವಿ ಬಿಡುಗಡೆ ಮಾಡಿದ ಯುಐ ಗ್ರೀನ್ ಮೆಟ್ರಿಕ್ ವರ್ಲ್ಡ್ ಯುನಿವರ್ಸಿಟಿ ರಾಂಕ್ ನಲ್ಲಿ ಮಂಗಳೂರು ವಿ. ವಿ 2025 ನೇ ಸಾಲಿನಲ್ಲಿ ದೇಶದಲ್ಲೇ 3ನೇ ಅತ್ಯಂತ ಸುಸ್ಥಿರ ವಿಶ್ವವಿದ್ಯಾನಿಲಯ ಸ್ಥಾನ ಹಾಗೂ ಜಗತ್ತಿನಲ್ಲಿ 127ನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಮನ್ನಣೆಯನ್ನು ಪಡೆದಿದೆ . ಭಾರತದ 100 ವಿಶ್ವವಿದ್ಯಾನಿಲಯಗಳು ವಿಶ್ವಾದ್ಯಂತ 105 ದೇಶಗಳಲ್ಲಿ 1745 ಸಂಸ್ಥೆಗಳು ಈ ಶ್ರೇಯಾಂಕದಲ್ಲಿ ಭಾಗವಹಿಸಿದ್ದವು.ಮಂಗಳೂರು ವಿಶ್ವವಿದ್ಯಾನಿಲಯವು ವ್ಯವಸ್ಥೆ…

Read More

ಜನವರಿ 18ರಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವ 2026 ಸಮಾರಂಭ… !

ಮಂಗಳೂರು:ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವ 2026 ಸಮಾರಂಭವು ಜನವರಿ 18ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ತಿಳಿಸಿದರು .ಅವರು ನಗರದ ಖಾಸಗಿ ಹೋಟೆಲ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಮಾರ್ಗದರ್ಶನದಲ್ಲಿ 1912 ರಲ್ಲಿ ಕುದ್ರೋಳಿಯಲ್ಲಿ ಸ್ಥಾಪಿತವಾದ ಬಿಲ್ಲವರ ಹಿರಿತನದ ಮಾತೃ ಸಂಸ್ಥೆಯಾಗಿದೆ. ಪ್ರಸ್ತುತ ಯುವ ಸಮುದಾಯವನ್ನು ಸಂಘಟಿಸುವ ದ್ಯೇಯದೊಂದಿಗೆ ಪ್ರಪಥಮ ಜಾಗತಿಕ…

Read More

ಜನವರಿ 22ರಿಂದ ಫೆಬ್ರವರಿ 8ರವರೆಗೆ ಸುರತ್ಕಲ್ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮದ ಧರ್ಮ ಜಾಗೃತೆಯ ಸಮಾವೇಶ …. !

ಮಂಗಳೂರು:ಸುರತ್ಕಲ್ ನಗರದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ ಜನವರಿ 22ರಿಂದ ಫೆಬ್ರವರಿ 8ರವರೆಗೆ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಮಿತಿ ಅಧ್ಯಕ್ಷ ಲಕ್ಷ್ಮಣ್ ಅಮೀನ್ ಕೋಡಿಕಲ್ ತಿಳಿಸಿದರು .ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್ ನಗರದ ಏಳು ಸ್ಥಳಗಳಾದ ತಣ್ಣೀರುಬಾವಿ ದೋಸ್ ಕ್ಲಬ್ ಮೈದಾನ ಬಾಕಿಮಾರು ಗದ್ದೆ, ಹಳೆ ಮಾರಿಗುಡಿ , ಬಂಟರ್ ಭವನ ಪಾರ್ಕಿಂಗ್ ಮೈದಾನ , ಇಡ್ಯಾ ದೇವಸ್ಥಾನದ ಹಿಂಬದಿ ,ಕುಳಾಯಿ ಮಹಿಳಾ ಮಂಡಳಿ ಹಿಂಬದಿ ಜಾಗದಲ್ಲಿ…

Read More

ನಂತೂರು ಕೊರಗಜ್ಜ ಗುಡಿಯ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಭವನ ಸಭಾಂಗಣ ಉದ್ಘಾಟನೆ

ಮ.ನ.ಪಾ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ನಂತೂರು ಕೊರಗಜ್ಜ ಗುಡಿಯ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವು ಶಾಸಕ ವೇದವ್ಯಾಸ್ ಕಾಮತ್‌ರವರ ಉಪಸ್ಥಿತಿಯಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಪ್ರದೇಶಕ್ಕೊಂದು ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಬೇಕೆಂದು ಇಲ್ಲಿನ ನಿಕಟ ಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಶಕೀಲಾ ಕಾವ ರವರು ಹಲವು ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅದರಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 25 ಲಕ್ಷ ಅನುದಾನವನ್ನು ಹೊಂದಿಸಿಕೊಂಡು…

Read More

ಕರಾವಳಿ ಉತ್ಸವದ ಅಂಗವಾಗಿ ಜ.19–21ರವರೆಗೆ ಕರಾವಳಿ ಚಲನಚಿತ್ರೋತ್ಸವ, ಜ.25ರಂದು ಕುಡ್ಲ ಶ್ವಾನ ಪ್ರದರ್ಶನ

ಮಂಗಳೂರು:ಹಲವು ವಿಶೇಷತೆಗಳೊಂದಿಗೆ ಪ್ರಶಕ್ತ ಸಾಲಿನ ಕರಾವಳಿ ಉತ್ಸವ ಜನಮನ್ನಣೆ ಗಳಿಸುತ್ತಿರುವ ಬೆನ್ನಲ್ಲೇ ಜಿಲ್ಲಾಡಳಿತವು ಈ ಬಾರಿ ತುಳು, ಕನ್ನಡ, ಕೊಂಕಣಿ ಹಾಗೂ ಬ್ಯಾರಿ ಭಾಷೆಗಳ ಕರಾವಳಿ ಚಲನಚಿತ್ರ ಉತ್ಸವವನ್ನು ಜ.19ರಿಂದ 21ರವರೆಗೆ ಆಯೋಜಿಸಲಾಗಿದ್ದು , ಭಾರತ್‌ ಸಿನೆಮಾಸ್‌ ಒಂದರಲ್ಲಿ ಒಟ್ಟು 18 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ತುಳು ಭಾಷೆಯ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿ 11 ತುಳು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಅವರು ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ…

Read More

ಬಾಂಗ್ಲಾದೇಶಿ ಎಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಕೊಲೆಯತ್ನ: ಕಾವೂರು ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ

ಮಂಗಳೂರಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿತನನ್ನು ಕೂಳೂರಿನ ಮೋಹನ್ (37) ಎಂದು ಗುರುತಿಸಲಾಗಿದೆ. ಈ‌ ಮುಂಚೆ ಕೂಳೂರಿನ ರತೀಶ್ ದಾಸ್ (32), ಧನುಷ್ (24), ಸಾಗರ್ (24) ಎಂಬವರನ್ನು ಬಂಧಿಸಲಾಗಿತ್ತು. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ.ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ…

Read More

ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನಗಳು ಮೂಡುತ್ತಿದ್ದು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್, ನಾಪತ್ತೆಯಾಗಿ ಮೃತಪಟ್ಟ ಬಾಲಕ. ನಾಳ ದೇವಸ್ಥಾನಕ್ಕೆ…

Read More
error: Content is protected !!