ಫಿಟ್ ಇಂಡಿಯಾ ಅಭಿಯಾನಕ್ಕೆ ಬಲ: ವಿಶ್ವ ಸೈಕಲ್ ದಿನದಂದು ಮಂಗಳೂರಿನಲ್ಲಿ ನೂರಾರು ಸೈಕ್ಲಿಸ್ಟ್‌ಗಳ ಭಾಗವಹಿಸುವಿಕೆ

ಮಂಗಳೂರು, ಜೂನ್ 7: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ (MY Bharat), ದಕ್ಷಿಣ ಕನ್ನಡ ವತಿಯಿಂದ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಭಾನುವಾರ ಯಶಸ್ವಿಯಾಗಿ ಆಯೋಜಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್…

Read More

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ, ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ ಸೂರಿಂಜೆ- ಪುಚ್ಚಾಡಿ ರಸ್ತೆಯು ಕಳೆದ ಹದಿನೈದು ವರ್ಷಗಳಿಂದ ಯಾವುದೇ ಡಾಮರೀಕರಣ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯ ತುಂಬಾ ಹೊಂಡ-ಗುಂಡಿಗಳು…

Read More

ಹಸಿವು,ಬಡತನ, ದಾರಿದ್ರ್ಯ, ನಿರುದ್ಯೋಗ ಮುಕ್ತ ಸಮಾಜದ ನಿರ್ಮಾಣ ಕಮ್ಯುನಿಸ್ಟ್ ಸಿದ್ದಾಂತದಿಂದ ಮಾತ್ರ ಸಾಧ್ಯ – ಕೃಷ್ಣಪ್ಪ ಸಾಲ್ಯಾನ್

ಸಮಾಜವಾದಿ ವ್ಯವಸ್ಥೆಯಡಿಯಲ್ಲಿ ಕಳೆದ 8 ದಶಕಗಳಿಂದ ಮುನ್ನಡೆಯುತ್ತಿರುವ ಚೈನಾ ದೇಶವು ಆರ್ಥಿಕ, ಸಾಮಾಜಿಕ ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಜಗತ್ತಿಗೆ ತಾನೇ ದೊಡ್ಡಣ್ಣನಂತೆ ವರ್ತಿಸುವ ಅಮೇರಿಕಾವನ್ನೂ ಮೀರಿ ಅಭಿವೃದ್ಧಿಯ ನಾಗಾಲೋಟದಲ್ಲಿ ಸಾಗುತ್ತಿದೆ. ಸಮಾಜವಾದಿ ಪುಟ್ಟ ರಾಷ್ಟ್ರ ಕ್ಯೂಬಾ ಕೊರೋನಾ ಸಂದರ್ಭದಲ್ಲಿ ಅಮೇರಿಕಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ವೈದ್ಯರನ್ನು ಕಳುಹಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ಮಾಡಿದೆ.ಇತರ ಸಮಾಜವಾದಿ ರಾಷ್ಟ್ರಗಳಾದ ವಿಯೆಟ್ನಾಂ, ಉತ್ತರ ಕೊರಿಯಾ ಲಾವೋಸ್ ದೇಶಗಳು ಉತ್ತಮ ಆರ್ಥಿಕತೆಯನ್ನು ಸಾಧಿಸುವ ಮೂಲಕ…

Read More

ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ: ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ

ಮಂಗಳೂರು, ಜೂನ್ 7: ಕಾರ್ಮಿಕರ ಸಮಸ್ಯೆಗಳ ಪರಿಣಾಮಕಾರಿ ಪರಿಹಾರ, ಸಂಘಟನೆಯ ವಿಸ್ತರಣೆ, ಯೂನಿಯನ್‌ಗಳ ಸಬಲೀಕರಣ ಹಾಗೂ ಹೊಸ ಕ್ಷೇತ್ರಗಳ ಕಾರ್ಮಿಕರನ್ನು ಸಂಘಟಿಸುವ ಸಮಗ್ರ ಕಾರ್ಯಯೋಜನೆಯೊಂದಿಗೆ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ವಿ. ರಾಧಾಕೃಷ್ಣನ್ ವೇಲು ಮಾತನಾಡಿ, ಕಾರ್ಮಿಕ ಸಂಘಟನೆಗಳು ಬಲಿಷ್ಠವಾಗಬೇಕಾದರೆ ಆಡಳಿತಾತ್ಮಕ ಶಿಸ್ತು,…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಹೆಸರಿನ ಕೇರಳ- ಕರ್ನಾಟಕ ಸರಕಾರದ ಜಂಟಿ ಟ್ರಸ್ಟ್ ಸಮಿತಿ ಪುನರ್ ರಚಿಸಲು ಆಗ್ರಹ

ರಾಷ್ಟ್ರ ಮರೆತಿರುವ ರಾಷ್ಟ್ರ ಕವಿಯ ಸ್ಮಾರಕ – ಎಲ್. ಜಿ ಜ್ಯೋತೀಶ್ವರ ಕನ್ನಡದ ಪ್ರಥಮ ರಾಷ್ಟ್ರಕವಿ ಎಂದೇ ಪ್ರಸಿದ್ಧರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ಹುಟ್ಟೂರು ಸದ್ಯ ಕೇರಳದಲ್ಲಿರುವ ಮಂಜೇಶ್ವರದ “ರಾಷ್ಟ್ರಕವಿ ನಿವಾಸ”ಕ್ಕೆ,ಅಂತರರಾಷ್ಟ್ರೀಯ ಬಹುಭಾಷಾ ವಿದ್ವಾಂಸ, ಸಾಂಸ್ಕೃತಿಕ ರಾಯಭಾರಿ, ಕೇಂದ್ರ,ರಾಜ್ಯ ಸರ್ಕಾರಕ್ಕೆ ಸಂಬಂಧ ಪಟ್ಟ ಕನ್ನಡ, ಹಿಂದಿ, ಇಂಗ್ಲಿಷ್, ಭಾಷೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಸಾಕ್ಷ್ಯ ಚಿತ್ರಗಳನ್ನು, ನುಡಿ ಚಿತ್ರಗಳನ್ನು, ಜಾಹೀರಾತುಗಳಿಗೆ ನಿರೂಪಣ ಸಾಹಿತ್ಯವನ್ನು ರಚಿಸಿರುವ ಎಲ್. ಜಿ.ಜ್ಯೋತೀಶ್ವರ ಬೆಂಗಳೂರು ಅವರು ಕಾಸರಗೋಡು, ದಕ್ಷಿಣ ಕನ್ನಡ,…

Read More

ಕಳ್ಳತನ ಮತ್ತು ಪರಾರಿ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು:ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣಾ 96/2006 ಕಲಂ: 457, 380 ಐ.ಪಿ.ಸಿ ಹಾಗೂ 103/2018 ಕಲಂ:224 ಐ.ಪಿ.ಸಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎ ಎಮ್ ಅಜೀಜ್ ಎಂಬಾತನ ವಿರುದ್ದ ಎಸ್ ಸಿ ಜೆ ಮತ್ತು ಜೆ ಎಮ್‌ಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾದೀಶರು ಆರೋಪಿ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಗೃಹ ವಾಸ…

Read More

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ತನೀಶಾ ಕಾರ್ತಿಕ್ ರಾಜ್ಯ ಪ್ರಥಮ, ಕರಾವಳಿ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ

ಬೆಂಗಳೂರು, ಜೂ. 6: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಶುಕ್ರವಾರ ಪ್ರಕಟಿಸಿದರು. ಈ ಬಾರಿ ಸಿಇಟಿಗೆ 3,30,646 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 3,09,014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ತನೀಶಾ ಕಾರ್ತಿಕ್ 99.44 ಶೇಕಡಾ…

Read More

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದರು. ಈ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿರುತ್ತಾರೆ. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಎ,ಜುಬೈರ್, ಮುಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುದಾಗಿ…

Read More

ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಿ.ಎ. ವಿವೇಕ ರೈ

ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.ಯುವಜನತೆ ಫೇಸ್‌ಬುಕ್‌ಗಳಂತಹ…

Read More

ಪದವಿನಂಗಡಿಯಲ್ಲಿ ₹6 ಲಕ್ಷ ಮೌಲ್ಯದ ಎಂಡಿಎಂಎ ವಶ: ಸಿಸಿಬಿ ಕಾರ್ಯಾಚರಣೆಯಲ್ಲಿ ಆರೋಪಿಯ ಬಂಧನ

ಮಂಗಳೂರು, ಜೂನ್ 6:ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಮಾದಕವಸ್ತು, ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ…

Read More
error: Content is protected !!