ಕಡಬದಲ್ಲಿ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ: ಶೀಘ್ರ ನ್ಯಾಯದಾನಕ್ಕೆ ನ್ಯಾಯಾಧೀಶ ಬಸವರಾಜ್ ಕರೆ
ತಾಲೂಕು ಮಟ್ಟದಲ್ಲಿ ನ್ಯಾಯಾಲಯ ಗಳನ್ನು ಪ್ರಾರಂಭಿಸಿ ಶೀಘ್ರ ನ್ಯಾಯದಾನ ನೀಡಬೇಕು ಎನ್ನುವುದು ನ್ಯಾಯಾಂಗ ವ್ಯವಸ್ಥೆಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಕಕ್ಷಿದಾರರಿಗೆ ಶೀಘ್ರ ನ್ಯಾಯ ದಾನ ಒದಗಿಸಲು ಎಲ್ಲ ವಕೀಲರು ಹಾಗೂ ನಾವು ಶ್ರಮಿಸುಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಬಸವರಾಜ್ ಹೇಳಿದರು. ಕಡಬ ಗಣೇಶ್ ಬಿಲ್ಡಿಂಗ್ನಲ್ಲಿ ಪ್ರಾರಂಭವಾದ ಪುತ್ತೂರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಡಬ ಸಂಚಾರಿ ನ್ಯಾಯಾಲಯವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮೀಣ ಪ್ರದೇಶವಾದ ಕಡಬ ದಿಂದ…
