ಡಿ.ಎಸ್‌.ಐ.ಎ ಮಹಿಳಾ ವಿಭಾಗದಿಂದ ಸರಳ ಹೇರ್ ಬನ್ ಹಾಗೂ ಹೇರ್ ಸ್ಟೈಲ್ ಕಾರ್ಯಾಗಾರ

ಮಂಗಳೂರು: ಮಂಗಳೂರು ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (DSIA) ಮಹಿಳಾ ವಿಭಾಗದ ವತಿಯಿಂದ ಸರಳ ಹೇರ್ ಬನ್ ಮತ್ತು ಹೇರ್ ಸ್ಟೈಲ್ ಕುರಿತ ಕಾರ್ಯಾಗಾರವನ್ನು ಜೂನ್ 3ರಂದು ಬೆಳಿಗ್ಗೆ 10.30 ಗಂಟೆಗೆ ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಡಿ.ಎಸ್‌.ಐ.ಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಾಗಾರವನ್ನು ಅನುಭವಸಂಪನ್ನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಗೀತಾ ರಾಜಾರಾಮ ನಡೆಸಿಕೊಡಲಿದ್ದು, ಕೂದಲು ತಯಾರಿ, ಕ್ರಿಂಪಿಂಗ್ ತಂತ್ರಗಳು, ಬ್ಯಾಕ್-ಕಾಂಬಿಂಗ್ ವಿಧಾನಗಳು ಹಾಗೂ ಸರಳ ಮತ್ತು ಆಕರ್ಷಕ ಹೇರ್ ಸ್ಟೈಲ್‌ಗಳ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಿದ್ದಾರೆ. ಸೌಂದರ್ಯ ಮತ್ತು…

Read More

ಜೂನ್ 3ರಂದು ಫಾದರ್ ಮುಲ್ಲರ್‌ನಿಂದ ಬೃಹತ್ ಮಾದಕವಸ್ತು ವಿರೋಧಿ ಜಾಗೃತಿ ರ‍್ಯಾಲಿ

ಮಂಗಳೂರು: ಮಾದಕವಸ್ತು ಸೇವನೆ ಹಾಗೂ ವ್ಯಸನದ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಂಕನಾಡಿಯ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ವತಿಯಿಂದ ಜೂನ್ 3ರಂದು ಬೆಳಿಗ್ಗೆ 7 ಗಂಟೆಗೆ ಬೃಹತ್ ಮಾದಕವಸ್ತು ವಿರೋಧಿ ಜಾಗೃತಿ ರ‍್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಡಾ. ಮೈಕಲ್ ಸಾಂತೂ ಮಯರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ನರ್ಸಿಂಗ್ ಶಾಲೆ, ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಹಾಗೂ ಸ್ಪೀಚ್ ಆ್ಯಂಡ್ ಹಿಯರಿಂಗ್ ಕಾಲೇಜಿನ…

Read More

ಜಮೀರ್ ಮತ್ತು ನನ್ನ ನಡುವೆ ಸಚಿವ ಸ್ಥಾನಕ್ಕೆ ಪೈಪೋಟಿ ಇಲ್ಲ: ಯು.ಟಿ. ಖಾದರ್

ಮಂಗಳೂರು, ಜೂನ್ 2: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ತಮ್ಮ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ನಡುವೆ ಯಾವುದೇ ರೀತಿಯ ಸಚಿವ ಸ್ಥಾನ ಪೈಪೋಟಿ ಇಲ್ಲ ಎಂದು ವಿಧಾನಸಭಾಧ್ಯಕ್ಷ U. T. Khader ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಡಿಸಿಎಂ ಸ್ಥಾನ ಸಿಗುವ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿ, “ನಾನು ಅದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಎಂದರು….

Read More

ಏ ಐ ಕೆಮೆರಾ ನಿರ್ವಹಣೆ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ-ಯು ಟಿ ಖಾದರ್ ನಿಲುವಿಗೆ ಸಿಪಿಐಎಂ ವಿರೋಧ

ವಾಹನ ಸವಾರರ ನಿಯಮ ಉಲ್ಲಂಘನೆ, ಕ್ರಿಮಿನಲ್ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಕಣ್ಣಿಡಲು ಉಳ್ಳಾಲ‌ ತಾಲೂಕು ವ್ಯಾಪ್ತಿಯಲ್ಲಿ ಏಐ ಕೆಮೆರಾ ಅಳವಡಿಸಲು ರಾಜ್ಯ ಸರಕಾರ 20 ಕೋಟಿ ರೂಪಾಯಿ ಅನುದಾನ ಒದಗಿಸಿರುವುದು ಸ್ವಾಗತಾರ್ಹ. ಆದರೆ, ಕೆಮೆರಾಗಳ ನಿರ್ವಹಣೆಯ ಜವಾಬ್ದಾರಿಯನ್ನು ದೇರಳಕಟ್ಟೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ವಹಿಸಲು ಕ್ಷೇತ್ರದ ಶಾಸಕ ಯು ಟಿ ಖಾದರ್ ಮುಂದಾಗಿರುವುದು ಖಂಡನಾರ್ಹ. ಖಾಸಗಿ ಮೆಡಿಕಲ್ ಕಾಲೇಜು ಮಾಲಕರ ಮೇಲೆ ಖಾದರ್ ಅವರ ಅತಿ ಪ್ರೀತಿಯನ್ನು ಇದು ಎತ್ತಿ ತೋರಿಸುತ್ತದೆ. ಇದು ಆಡಳಿತದ…

Read More

ಮಳೆಗಾಲಕ್ಕೂ ಮುನ್ನ ಶಾಲೆ-ಅಂಗನವಾಡಿ ದುರಸ್ತಿಗೆ ಕೋಟ್ಯಂತರ ರೂ. ಅನುದಾನ

ಮಂಗಳೂರು:ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ 91 ಶಾಲೆ ಗಳು, 137 ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಈ ಮಾಹಿತಿ ನೀಡಿರುವ ಅವರು, ಅಂಗನವಾಡಿಗಳಿಗೆ 2.5 ಕೋಟಿ ರೂ. ಹಾಗೂ ಶಾಲೆಗಳನ್ನು 1.5 ಕೋಟಿ ರೂ. ವೆಚ್ಚದಲ್ಲಿ ತುರ್ತಾಗಿ ದುರಸ್ತಿ‌ ಮಾಡಲು ಅನುಮೋದನೆ…

Read More

ತಲೆಯ ನೋವಿನಿಂದ ಬಳಲುತ್ತಿದ್ದ ವೃದ್ಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ವೃದ್ಧರೊಬ್ಬರು ಗನ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ರಾಮಚಂದ್ರ ರಾವ್ ಅವರು ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್ ಬಳಸಿ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡಿದ್ದು, ಪರಿಣಾಮ ತಲೆಯ ಭಾಗ ತೀವ್ರವಾಗಿ ಛಿದ್ರಗೊಂಡಿದೆ ಎಂದು…

Read More

ಕೂಟೇಲಿನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ, ಜೂನ್ 2: ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಪ್ರದೇಶದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ನಿವಾಸಿಗಳಾದ ಕುಟುಂಬ ಸದಸ್ಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವ್ಯಾಗನರ್ ಕಾರಿನಲ್ಲಿ ಯಾತ್ರೆ ಕೈಗೊಂಡಿದ್ದರು. ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಕಾರಿನ ಚಾಲಕ ದೀಪಕ್ ಹಾಗೂ ಯಾತ್ರಾರ್ಥಿಗಳಾದ ಗುರುರಾಜ್, ಧನುಷ್, ಭಾರತಿ ಮತ್ತು ಗೀತಾ…

Read More

ರೌಡಿ ಗಣೇಶ್ ವಿರುದ್ಧ ಗೂಂಡಾ ಕಾಯ್ದೆ ಜಾರಿ; ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ರವಾನೆ

ಮಣಿಪಾಲ: ರೌಡಿ ಗಣೇಶ್‌ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ. ಬಡಗಬೆಟ್ಟು ಗ್ರಾಮದ ನೇತಾಜಿನಗರ 4ನೇ ಅಡ್ಡರಸ್ತೆ ನಿವಾಸಿಯಾಗಿರುವ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಕಳ್ಳತನ ಸೇರಿದಂತೆ ಒಟ್ಟು ಒಂಭತ್ತು ಪ್ರಕರಣಗಳು ದಾಖಲಾಗಿವೆ.ಈ…

Read More

ಸಚಿವ ಸ್ಥಾನದ ಪೈಪೋಟಿ ಪ್ರಶ್ನೆಯೇ ಇಲ್ಲ: ಯು.ಟಿ. ಖಾದರ್ ಸ್ಪಷ್ಟನೆ

ಮಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಸಚಿವ ಸಂಪುಟ ರಚನೆ ಕುರಿತ ರಾಜಕೀಯ ಚರ್ಚೆಗಳು ಜೋರಾಗಿರುವ ನಡುವೆಯೇ, ಸಚಿವ ಸ್ಥಾನದ ಆಕಾಂಕ್ಷೆ ಮತ್ತು ಜಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾದ ವೈರಲ್ ಆಡಿಯೋ ಕುರಿತು ಕೇಳಲಾದ ಪ್ರಶ್ನೆಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಪೈಪೋಟಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ಪೈಪೋಟಿ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ…

Read More

ಹೆಬ್ರಿಯ ಉದ್ಯಮಿ ಮನೆಯಲ್ಲಿ ಕಳ್ಳತನ- ಮೂವರು‌ ಆರೋಪಿಗಳ ಬಂಧನ

ಉಡುಪಿ: ಹೆಬ್ರಿಯ ಅನಂತನಗರದಲ್ಲಿರುವ ಉದ್ಯಮಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ತಮಿಳುನಾಡು ಮೂಲದ, ಪ್ರಸ್ತುತ ಕೇರಳದಲ್ಲಿ ವಾಸವಾಗಿರುವ ಸಲೀಂ, ಮೂಡುಬಿದಿರೆಯ ಮಿಜಾರು ನಿವಾಸಿ ಹರೀಶ್ ಶೆಟ್ಟಿ ಹಾಗೂ ಕೇರಳದ ಕಾಸರಗೋಡು ಮೂಲದ ಮಹಮ್ಮದ್ ಸಫ್ಘಾನ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಕೀರ್ತನ್ ಪ್ರಭು ಅವರ ಮನೆಗೆ ನುಗ್ಗಿದ್ದ ಕಳ್ಳರು…

Read More
error: Content is protected !!