KSTA ಮಂಗಳಾದೇವಿ ವಲಯ ಸಮಿತಿಯಿಂದ 27ನೇ ವರ್ಷದ ವಾರ್ಷಿಕೋತ್ಸವ. ಟೈಲರ್ ಭವನದಲ್ಲಿ ಸತ್ಯನಾರಾಯಣ ಪೂಜೆ

ಮಂಗಳೂರು : KSTA ಕರ್ನಾಟಕ ಟೈಲರ್ ಅಸೋಸಿಯೇಷನ್ (ರಿ) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ 27 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಟೈಲರ್ ಕುಟುಂಬಸ್ಥರಿಗೆ ಸುಖ ಶಾಂತಿ ನೆಲೆಸುವ ಅಂಗವಾಗಿ ಗೋರಿಗುಡ್ಡದಲ್ಲಿರುವ ಪ್ರಧಾನ ಕಚೇರಿ “ಟೈಲರ್ ಭವನ”ದಲ್ಲಿ ಸತ್ಯನಾರಾಯಣ ಪೂಜೆ ಭಕ್ತಿಭಾವದಿಂದ ನೆರವೇರಿತು. ಕರ್ನಾಟಕ ಟೈಲರ್ ಅಸೋಸಿಯೇಷನ್ಸ್ ನ ರಾಜ್ಯದ ಅಧ್ಯಕ್ಷರು, ಸ್ಥಾಪಕ ಸದಸ್ಯರೂ , ಹಾಗೂ ಜಿಲ್ಲೆಯ ಕ್ಷೇತ್ರ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಆಹ್ವಾನಿತರು ಭಾಗವಹಿಸಿ ಪೂಜೆಯಲ್ಲಿ ಪಾಲ್ಗೊಂಡು ….

Read More

ಕಾಪು ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ಐತಿಹಾಸಿಕ ಪಿಲಿಕೋಲ ವೈಭವ

ಉಡುಪಿ: ಕಾಪುವಿನ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದೈವಾರ್ಷಿಕವಾಗಿ ನಡೆಯುವ ಐತಿಹಾಸಿಕ ಪಿಲಿಕೋಲ ಶನಿವಾರ ಸಂಜೆ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು. ಸಂಪ್ರದಾಯದಂತೆ ಹುಲಿ ವೇಷ ಧರಿಸುವ ದೈವ ನರ್ತಕನಿಗೆ ಪೂರ್ವ ವಿಧಿವಿಧಾನಗಳೊಂದಿಗೆ ಸ್ನಾನ ಮಾಡಿಸಿ, ತೆಂಗಿನ ಗರಿಯಿಂದ ನಿರ್ಮಿಸಿದ ವಿಶೇಷ ಪಂಜರದೊಳಗೆ ಬಣ್ಣಗಾರಿಕೆಗಾಗಿ ಕಳುಹಿಸಲಾಯಿತು. ಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡ ಬಳಿಕ ಪಟೇಲರ ಅನುಮತಿ ಪಡೆದು, ಪಿಲಿಚಂಡಿ ಮನೆಯವರು ತೀರ್ಥ ಚಿಮುಕಿಸಿದ ನಂತರ ನರ್ತಕನು ಪಂಜರದಿಂದ ಹೊರಬಂದು ಪಿಲಿಕೋಲಕ್ಕೆ ಚಾಲನೆ ನೀಡಿದರು. ಪಿಲಿ ದೈವವು ಬ್ರಹ್ಮರಗುಂಡಕ್ಕೆ…

Read More

ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿಂ ಮಹಿಳೆಯರು ! ಇದು ನಮ್ಮ ಭಾರತ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿಯಲ್ಲಿ ಅಪರೂಪದ ಘಟನೆಗೆ ಸಾಕ್ಷಿ

ಉಡುಪಿ: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ. ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಮುಸ್ಲಿಂ ಮಹಿಳೆಯರು ನೆರವು ಯಾಚಿಸಿದ್ದು ಹಿಂದು – ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿ ಗಿರಿಜಾ ಶೆಟ್ಟಿಗಾರ್ ಎಂಬ ವಯಸ್ಕ ಮಹಿಳೆ…

Read More

ಮಂಗಳೂರಿನಲ್ಲಿ ‘ತರವಾಡ್’ ಬ್ಯಾರಿ ಕಾದಂಬರಿ ಅವಲೋಕನ ಕಾರ್ಯಕ್ರಮ

ಮಂಗಳೂರು:ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ರಿ) ಮಂಗಳೂರು ವತಿಯಿಂದ ಬ್ಯಾರಿ ಭಾಷಾ ವೈವಿಧ್ಯತೆ ಮತ್ತು ಪುರಾತನ ಬ್ಯಾರಿ ಸಂಸ್ಕೃತಿ ಸಂಪ್ರದಾಯಗಳ ಉಲ್ಲೇಖಗಳಿಗೆ ಸಾಕ್ಷಿಯಂತಿರುವ ಮರ್ಹೂಂ ಯು.ಎ. ಕಾಸೀಮ್ ಉಳ್ಳಾಲ್‌ರ ತರವಾಡ್ ಬ್ಯಾರಿ ಕಾದಂಬರಿಯ ಅವಲೋಕನ ಕಾರ್ಯಕ್ರಮ ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಿತು.ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ. ಫಾರೂಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾದಂಬರಿಯನ್ನು ಅವಲೋಕಿಸಿದ ಕತೆಗಾರ ಮುನವ್ವರ್ ಜೋಗಿಬೆಟ್ಟು ಮರ್ಹೂಂ ಯು.ಎ. ಕಾಸಿಮ್ ಉಳ್ಳಾಲ್ ತನ್ನ ಜೀವನಾನುಭವವನ್ನು…

Read More

ಚಿಲಿಂಬಿಗುಡ್ಡೆಯಲ್ಲಿ ಸಂತರ ಪಾದಯಾತ್ರೆ ಕಾರ್ಯಕ್ರಮ

ಮಂಗಳೂರು :ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲೆಯ ಧರ್ಮ ಪ್ರಸಾರ ಹಾಗೂ ಸಾಮಾಜಿಕ ಸಮರಸತಾ ವಿಭಾಗ ದ ವತಿಯಿಂದ ಚಿಲಿಂಬಿ ಗುಡ್ಡೆಯ ಉಪೇಕ್ಷಿತ ಬಂದುಗಳ ವಸತಿಯಲ್ಲಿ ಚಿತ್ರಾಪುರ ಶ್ರೀ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಗಳಿಂದ ಸಂತರ ಪಾದ ಯಾತ್ರೆ ಕಾರ್ಯಕ್ರಮ ರವಿವಾರ ನಡೆಯಿತು. ಶ್ರೀಪಾದರು ಹತ್ತಕ್ಕೂ ಹೆಚ್ಚು ಉಪೇಕ್ಷಿತ ಬಂಧುಗಳ ಮನೆಗೆ ತೆರಳಿ ಧರ್ಮ ಪಾಲನೆ ಮತ್ತು ರಕ್ಷಣೆಯ ಮಹತ್ವವನ್ನು ತಿಳಿಸಿದರು. ಚಿಲಿಂಬಿ ಗುಡ್ಡೆ ಶ್ರೀ ರಾಮಾಂಜನೆಯ ಭಜನಾ ಮಂದಿರದಲ್ಲಿ ಶ್ರೀಪಾದರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀ…

Read More

ಕುದುರೆಮುಖ ಪುನರ್ವಸತಿ ಯೋಜನೆ:2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ

ಮಂಗಳೂರು, ಮೇ 17: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ನಡೆದ ಗೇರುಮೇಳದಲ್ಲಿ, ಕೆಲವು ತಿಂಗಳ ಹಿಂದೆ ಆನೆ ದಾಳಿಗೆ ಇಬ್ಬರು ಮೃತಪಟ್ಟಿದ್ದ, ಕೆರೆಕಟ್ಟೆ ಪ್ರದೇಶ ಸೇರಿದಂತೆ ಕುದುರೆಮುಖ ಅರಣ್ಯದಿಂದ ಸ್ವಯಂ ಪ್ರೇರಿತರಾಗಿ ಹೊರಬರಲು ಅರ್ಜಿ ಸಲ್ಲಿಸಿದ್ದ 5 ಕುಟುಂಬಗಳಿಗೆ 2.38 ಕೋಟಿ ರೂ.ಚೆಕ್ ವಿತರಿಸಿ ಅವರು ಮಾತನಾಡಿದರು.ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದಾಗ, ಪುಂಡಾನೆಯನ್ನು…

Read More

ಕಾಟು ಮಾವಿನ ಮಿಡಿ ಕೊಯ್ಯದಂತೆ ಇಲಾಖೆಯಿಂದ ಆದೇಶ ಹೊರಡಿಸಿ: ಅರಣ್ಯ‌ಸಚಿವರಿಗೆ‌ಶಾಸಕ ಅಶೋಕ್ ರೈ ಮನವಿ

ಪುತ್ತೂರು: ರಸ್ತೆ ಬದಿ ಹಾಗೂ ಸರಕಾರಿ ಜಾಗದಲ್ಲಿರುವ ಕಾಟು ಮಾವಿನ ಮರದಿಂದ ಮಿಡಿ ಕೊಯ್ಯದಂತೆ ಅರಣ್ಯ ಇಲಾಖೆಯ ಮೂಲಕ ಸರಕಾರ ಆದೇಶ ಹೊರಡಿಸಬೇಕು ಎಂದು ಶಾಸಕ ಅಶೋಕ್ ರೈ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರಖಂಡ್ರೆಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಗೇರು ನಿಗಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಸರಕಾರಿ ಜಾಗ ಹಾಗೂ ರಸ್ತೆ ಬದಿಯಲ್ಲಿರುವ ಕಾಟು ಮಾವಿನ ಮರದಿಂದ ಯಾವುದೇ ಕಾರಣಕ್ಕೂ ಮಿಡಿ ಕೊಯ್ಯಬಾರದು. ಪ್ರತೀ ಬೇಸಿಗೆಯಲ್ಲಿ ಕೆಲವೊಂದು ಇಲಾಖೆಗಳು ಮಾವಿನ ಮರಗಳನ್ನು ಏಲಂ…

Read More

ಮಾನವೀಯ ಗುಣಗಳಿಂದಾಗಿ ಸೌಹಾರ್ದ ಭಾರತದ ನಿರ್ಮಾಣ ಸಾಧ್ಯ – ರೋಯ್ ಕ್ಯಾಸ್ಟಲಿನೋ

ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ ಮಾನವೀಯ ಗುಣಗಳನ್ನು ಬೆಳೆಸುವ ಮೂಲಕ ಸೌಹಾರ್ದತೆಯನ್ನು ಕಾಪಾಡಬೇಕಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ರವರು ಅಭಿಪ್ರಾಯ ಪಟ್ಟರು. ಅವರು ಕಳೆದ 6 ದಿನಗಳಿಂದ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಜರುಗಿದ ಚಿಣ್ಣರ ಕಲರವ –…

Read More

ಗೇರು ಬೆಳೆ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಸಚಿವ ಈಶ್ವರ್ ಖಂಡ್ರೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆ ಅಭಿವೃದ್ಧಿಗೆ ಅಪಾರ ಅವಕಾಶವಿದ್ದು, ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸಲು ಗೇರು ಅಭಿವೃದ್ಧಿ ನಿಗಮಕ್ಕೆ ₹1 ಕೋಟಿ ಅನುದಾನ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದ ಕದ್ರಿ ಉದ್ಯಾನವನದಲ್ಲಿ ರವಿವಾರ ಗೇರು ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಲಾದ ಗೇರು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು….

Read More

ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ

ಕಾರ್ಕಳ: ಮಹಿಳಾ ಸಬಲೀಕರಣ ಎಂದರೆ ಕೇವಲ ಹಕ್ಕುಗಳಿಗಾಗಿ ಸದ್ದು ಮಾಡುವುದಲ್ಲ. ಬದಲಿಗೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಯುತ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಮುನ್ನಡೆಯುವುದಾಗಿದೆ ಎಂದು ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುರಭಿ ಹೊಡಿಗೆರೆ ಪ್ರತಿಪಾದಿಸಿದರು. ಇಲ್ಲಿನ ಮಂಜುನಾಥ ಪೈ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ನಾರಿಶಕ್ತಿ ಸಾಧಕ ಮಹಿಳೆಯರ ಅಭಿನಂದನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು. ಆಧುನಿಕ ಸಮಾಜದಲ್ಲಿ ಮಹಿಳೆಗೆ ಕೇವಲ ಸುರಕ್ಷತೆ ಅಥವಾ ರಕ್ಷಣೆ ನೀಡಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಆಕೆಗೆ ಸ್ವತಂತ್ರವಾಗಿ…

Read More
error: Content is protected !!