ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜು.27ರಂದು ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು, ಜು.22: ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಆಗ್ರಹಿಸಿ, ‘ಗೋಮಾತೆಯ ಗೌರವದ ಅಭಿಯಾನ’ದ ಅಂಗವಾಗಿ ಜುಲೈ 27ರಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀಸಾಯಿ ಈಶ್ವರ್ ಗುರೂಜಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾತೆಗೆ ರಾಷ್ಟ್ರ ತಾಯಿ, ರಾಷ್ಟ್ರೀಯ ದೇವರು ಹಾಗೂ ರಾಷ್ಟ್ರೀಯ ಪರಂಪರೆ ಎಂಬ ಗೌರವದ ಮಾನ್ಯತೆ ನೀಡಬೇಕೆಂಬ ಉದ್ದೇಶದಿಂದ…
