ಸಚಿವ ಸ್ಥಾನ ಚರ್ಚೆ ನಡುವೆಯೂ ಕ್ಷೇತ್ರದಲ್ಲೇ ಸಕ್ರಿಯರಾದ ಶಾಸಕ ಅಶೋಕ್ ರೈ

ಪುತ್ತೂರು: ಇನ್ನೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಯಾರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಕುತೂಹಲ ಮನೆಮಾಡಿದೆ. ಈ ನಡುವೆ ಬಹುತೇಕ ಕಾಂಗ್ರೆಸ್ ಶಾಸಕರು ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದು, ಕೆಲವರು ದೆಹಲಿಗೂ ಪಯಣ ಬೆಳೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಎಲ್ಲೆಡೆ ಲಾಬಿ ನಡೆಯುತ್ತಿದೆ.ಆದರೆ ಇದೆಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್ ರೈ ಯಾವುದೇ ಲಾಬಿಗೂ ಮುಂದಾಗದೆ ತಮ್ಮ ಕ್ಷೇತ್ರದ ಜನರ ಜೊತೆ ಬೆರೆತಿದ್ದಾರೆ. ಸೋಮವಾರ ಎಂದಿನಂತೆ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರದಲ್ಲಿ…

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಜೂನ್ – 1 ಶಾಲಾರಂಭ… ಬಣ್ಣದ ಕನಸುಗಳನ್ನು ಹೊತ್ತ ಪುಟಾಣಿಗಳ ಕಣ್ಣುಗಳಲ್ಲಿ ಏನೋ ಒಂದು ಆನಂದ.. ಉತ್ತಮ ಕಲಿಕೆ ಉಜ್ವಲ ಭವಿಷ್ಯವೆನ್ನುವ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯದ ಎಲ್ಲೆಡೆ ಶಾಲಾ ಶೈಕ್ಷಣಿಕ ವರ್ಷದ ಆರಂಭಕ್ಕೆ ಮುನ್ನುಡಿ ಬರೆಯಿತು. ಸಂಭ್ರಮದ ಕಲಿಕೆಗೆ ಸ್ವಾಗತಿಸಿದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಇಂದು ಮಕ್ಕಳದೇ ಕಲರವ. ಇಲ್ಲಿ ಆಯೋಜಿಸಲಾದ ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಮಾತನಾಡಿ, “ಮಕ್ಕಳ ಮನದಲ್ಲಿ ಬಿತ್ತಿದ ಉಜ್ವಲ…

Read More

ಪಂಚಾಯತ್ ರಾಜ್ ಉಳಿವಿಗಾಗಿ ಬಂಟ್ವಾಳದಲ್ಲಿ ನಡೆದ ಪ್ರತಿಭಟನೆ ಯಶಸ್ವಿ: ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ – ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ. ವತಿಯಿಂದ ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ, ಹಿರಿಯ ನಾಯಕರೂ ಮಾಜಿ ಸಚಿವರಾದ ಶ್ರೀ ಬಿ. ರಮನಾಥ ರೈ ಹಾಗೂ ಜಿಲ್ಲಾದ್ಯಕ್ಷರಾದ ಹರೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.ಪಂಚಾಯತ್ ರಾಜ್ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳು ಹಾಗೂ ವಿವಿಧ ವೈಫಲ್ಯಗಳನ್ನು ಖಂಡಿಸಿ ನಡೆದ…

Read More

‘ನನ್ನ ಮತ ನನ್ನ ಹಕ್ಕು’ ಅಭಿಯಾನದ ಅಂಗವಾಗಿ ಜನಜಾಗೃತಿ ಹೋರಾಟ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ‘ನನ್ನ ಮತ ನನ್ನ ಹಕ್ಕು’ ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ವಿನೋದ್ ಎಂ., ಎಸ್‌ಐಆರ್ ಪ್ರಕ್ರಿಯೆಯು ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗವು ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಅರ್ಹ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ವಂಚಿಸುತ್ತಿದ್ದು, ಇದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ…

Read More

134ನೇ ‘ಮನ್ ಕೀ ಬಾತ್’ ವೀಕ್ಷಣೆ: ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡದ ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿಯವರ 134 ನೇ ಮನ್ ಕೀ ಬಾತ್ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯು ಇಂದು ಸುಳ್ಯ ಶಾಸಕಿಯವರ ನಿವಾಸ ಮುರುಳ್ಯದಲ್ಲಿ ನಡೆಯಿತು. ಬಿಜೆಪಿ‌ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸತೀಶ್ ಕುಂಪಲ, ಸುಳ್ಯ ಮಂಡಲ ಕಳೆದ ಅವೃತಿಯ ಮನ್ ಕೀ ಬಾತ್ ಕಾರ್ಯಕ್ರಮ 100% ವೀಕ್ಷಣೆ ಮಾಡಿ ನಂ 1ಸ್ಥಾನವನ್ನು ಪಡೆದುಕೊಂಡಿತು. ಈ ಬಾರಿಯೂ ಅದೇ ಫಲಿತಾಂಶ ಬರಲಿ ಮತ್ತು ಜೂನ್ 5ರಿಂದ ಆರಂಭವಾಗುವ…

Read More

ಅಕ್ರಮ ಗೋವಧೆ ಆರೋಪ: ಕಡಬದಲ್ಲಿ ಮೂವರ ಬಂಧನ

ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ‌ ನಡೆದಿದೆ. ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ, ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ದಾಳಿ ನಡೆಸಿ ಮೂವರನ್ನು ಹಿಡಿದು ವಿಚಾರಿಸಲಾಯಿತು. ಬಂಧಿತರನ್ನು ಕೆ ಅಬ್ದುಲ್‌‌ ರಫೀಕ್‌‌(37), ಅದ್ರಾಮ ಮಂತೂರು(41) ಮತ್ತು ಅಬ್ದುಲ್‌…

Read More

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ದೇಶದ ಉಪರಾಷ್ಟ್ರಪತಿ ಪಿ.ರಾಧಾಕೃಷ್ಣನ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸಿದ ಉಪ ರಾಷ್ಟ್ರಪತಿ ಬಳಿಕ ಕ್ಷೇತ್ರದ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿದರು. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ ಉಪ ರಾಷ್ಟ್ರಪತಿ, ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ…

Read More

ಇಂದಿನಿಂದ 61 ದಿನ ಮತ್ಸ್ಯ ಗಾರಿಕೆಗೆ ಬ್ರೇಕ್: ಯಾಂತ್ರೀಕೃತ ಬೋಟ್‌ಗಳ ಸಂಚಾರ ಸ್ಥಗಿತ

ಮಂಗಳೂರು:ಪಶ್ಚಿಮ ಕರಾವಳಿಯುದ್ದಕ್ಕೂ ಇಂದಿನಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಜಾರಿಯಾಗಿದ್ದು, ಇದರೊಂದಿಗೆ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ಸ್ಥಗಿತಗೊಳ್ಳಲಿವೆ. ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ನಿರ್ಬಂಧವನ್ನು ಜಾರಿಗೊಳಿಸಿದೆ. ಮಳೆಗಾಲವು ಹೆಚ್ಚಿನ ಕಡಲ ಪ್ರಭೇದಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವಾಗಿದ್ದು, ಈ ಅವಧಿಯಲ್ಲಿ ಯಾಂತ್ರೀಕೃತ ಬೋಟ್‌ಗಳ ಕಾರ್ಯಾಚರಣೆಯಿಂದ ಮೀನುಗಳ ಮೊಟ್ಟೆ ಇಡುವಿಕೆ ಹಾಗೂ ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಇದರಿಂದ ಭವಿಷ್ಯದ ಮೀನು ಸಂಪತ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸರ್ಕಾರ…

Read More

ಪಣೋಲಿಬೈಲು ಕ್ಷೇತ್ರಕ್ಕೆ ಭಕ್ತರ ಮಹಾಪೂರ; 4,180 ಅಗೇಲು ಸೇವೆ ಸಂದಾಯ

ಬಂಟ್ವಾಳ: ಕೋಲ ಹಾಗೂ ಅಗೇಲು ಸೇವೆಗೆ ಪ್ರಸಿದ್ದಿ ಪಡೆದಿರುವ ಆರಾಧನಾ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ರವಿವಾರ ಭಕ್ತರಿಂದ 4180 ಅಗೇಲು ಸೇವೆಗಳು ಸಂದಾಯವಾಗಿದೆ; ಇದು ಈ ವರ್ಷದಲ್ಲಿ ಸಂದಾಯವಾದ ಗರಿಷ್ಠ ಸಂಖ್ಯೆಯ ಅಗೇಲು ಸೇವೆಯಾಗಿದೆ. ಹೆಚ್ಚು ಸೇವೆ ಸಂದಾಯವಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು. ಕ್ಷೇತ್ರದಲ್ಲಿ ವಾರದಲ್ಲಿ ಮೂರು ದಿನ ಅಗೇಲು ಸೇವೆ ಸಂದಾಯವಾಗುತ್ತಿದ್ದರೂ ರವಿವಾರ ರಜಾ ದಿನವಾದ ಕಾರಣ ಗರಿಷ್ಠ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅಗೇಲು ಸೇವೆ ಸಲ್ಲಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ…

Read More

ಉಡುಪಿಯಲ್ಲಿ ಭೀಕರ ಅಪಘಾತ: ಲಾರಿಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ, ಚಾಲಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ.ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.ಅಪಘಾತದ ಬಳಿಕ ಟೆಂಪೋದಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ…

Read More
error: Content is protected !!