ಇಂದಿನಿಂದ 61 ದಿನ ಮತ್ಸ್ಯ ಗಾರಿಕೆಗೆ ಬ್ರೇಕ್: ಯಾಂತ್ರೀಕೃತ ಬೋಟ್‌ಗಳ ಸಂಚಾರ ಸ್ಥಗಿತ

ಮಂಗಳೂರು:ಪಶ್ಚಿಮ ಕರಾವಳಿಯುದ್ದಕ್ಕೂ ಇಂದಿನಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಜಾರಿಯಾಗಿದ್ದು, ಇದರೊಂದಿಗೆ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ಸ್ಥಗಿತಗೊಳ್ಳಲಿವೆ. ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ನಿರ್ಬಂಧವನ್ನು ಜಾರಿಗೊಳಿಸಿದೆ. ಮಳೆಗಾಲವು ಹೆಚ್ಚಿನ ಕಡಲ ಪ್ರಭೇದಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವಾಗಿದ್ದು, ಈ ಅವಧಿಯಲ್ಲಿ ಯಾಂತ್ರೀಕೃತ ಬೋಟ್‌ಗಳ ಕಾರ್ಯಾಚರಣೆಯಿಂದ ಮೀನುಗಳ ಮೊಟ್ಟೆ ಇಡುವಿಕೆ ಹಾಗೂ ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಇದರಿಂದ ಭವಿಷ್ಯದ ಮೀನು ಸಂಪತ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸರ್ಕಾರ…

Read More

ಪಣೋಲಿಬೈಲು ಕ್ಷೇತ್ರಕ್ಕೆ ಭಕ್ತರ ಮಹಾಪೂರ; 4,180 ಅಗೇಲು ಸೇವೆ ಸಂದಾಯ

ಬಂಟ್ವಾಳ: ಕೋಲ ಹಾಗೂ ಅಗೇಲು ಸೇವೆಗೆ ಪ್ರಸಿದ್ದಿ ಪಡೆದಿರುವ ಆರಾಧನಾ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ರವಿವಾರ ಭಕ್ತರಿಂದ 4180 ಅಗೇಲು ಸೇವೆಗಳು ಸಂದಾಯವಾಗಿದೆ; ಇದು ಈ ವರ್ಷದಲ್ಲಿ ಸಂದಾಯವಾದ ಗರಿಷ್ಠ ಸಂಖ್ಯೆಯ ಅಗೇಲು ಸೇವೆಯಾಗಿದೆ. ಹೆಚ್ಚು ಸೇವೆ ಸಂದಾಯವಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು. ಕ್ಷೇತ್ರದಲ್ಲಿ ವಾರದಲ್ಲಿ ಮೂರು ದಿನ ಅಗೇಲು ಸೇವೆ ಸಂದಾಯವಾಗುತ್ತಿದ್ದರೂ ರವಿವಾರ ರಜಾ ದಿನವಾದ ಕಾರಣ ಗರಿಷ್ಠ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅಗೇಲು ಸೇವೆ ಸಲ್ಲಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ…

Read More

ಉಡುಪಿಯಲ್ಲಿ ಭೀಕರ ಅಪಘಾತ: ಲಾರಿಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ, ಚಾಲಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ.ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.ಅಪಘಾತದ ಬಳಿಕ ಟೆಂಪೋದಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ…

Read More

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತ ಸಾಗರ: ಒಂದೇ ದಿನ 30 ಸಾವಿರಕ್ಕೂ ಅಧಿಕ ಭಕ್ತರ ದರ್ಶನ

ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ರವಿವಾರ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000 ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿರುವರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ ಘಟ್ಟದಲ್ಲಿ ಭಕ್ತರು ಮಿಂದು ಶ್ರೀ ದೇವಳದ ಹೊರಾಂಗಣ ಪ್ರವೇಶಿಸಿ ಸರತಿಯ ಸಾಲಿನಲ್ಲಿ ಶ್ರೀ ದೇವರ ದರ್ಶನ ಮಾಡಿರುವರು. ಭಕ್ತರಿಗೆ ಲಡ್ಡು ಪ್ರಸಾದ ಹಾಗೂ ಪಂಚಕಜ್ಜಾಯ ತೀರ್ಥ ಬಾಟಲಿ ಇತ್ಯಾದಿಗಳಿಗಾಗಿ ಶ್ರೀ ದೇವಳದ…

Read More

ಬಿ.ಕೆ. ಹರಿಪ್ರಸಾದ್‌ಗೆ ಸಚಿವ ಸ್ಥಾನ ನೀಡಬೇಕು: ಅಖಿಲ ಭಾರತ ಬಿಲ್ಲವ ಸಂಘಟನೆ ಆಗ್ರಹ

ಮಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಭಾರತ ಬಿಲ್ಲವ ಸಂಘಟನೆ ಒತ್ತಾಯಿಸಿದೆ. ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಿಲ್ಲವ ಸಮುದಾಯಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರಕಬೇಕು ಎಂಬುದು ಸಮಾಜದ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು….

Read More

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ಟೀಚರ್ ದಂಪತಿಗಳಿಗೆ “ರಾಮಕ್ಷತ್ರಿಯ ಪೌರ ಸನ್ಮಾನ “

ಉಡುಪಿ : ಉಡುಪಿ ಜಿಲ್ಲೆಯ ನೀಲಾವರದ ಶಾರದಾ ಸಭಾಅಂಗಣ ದಲ್ಲಿ 31.5.2026,ಭಾನುವಾರ ಉಡುಪಿ ರಾಮಕ್ಷತ್ರಿಯ ಯುವ ಸಂಘ ನೇತೃತ್ವದಲ್ಲಿ ಉಡುಪಿ ರಾಮಕ್ಷತ್ರಿಯ ಸಂಘ, ಉಡುಪಿ ರಾಮಕ್ಷತ್ರಿಯ ಮಹಿಳಾ ಸಂಘ, ರಾಮಕ್ಷತ್ರಿಯ ವೆಲ್ಫೇರ್ ಟ್ರಸ್ಟ್, ನೀಲಾವರ ರಾಮಕ್ಷತ್ರಿಯ ಸಂಘ ಸಹಕಾರದಲ್ಲಿ, ನಾಡೋಜ ಡಾ. ಕೃಷ್ಣ ಪ್ರಸಾದ್ -ಡಾ ರಶ್ಮಿ ಕೃಷ್ಣ ಪ್ರಸಾದ್ ನೇತೃತ್ವದ ನೇತ್ರ ಜ್ಯೋತಿ ಸಮೂಹ ಸಂಸ್ಥೆ -ಡಾ ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಸಾರತ್ಯದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ…

Read More

ಸೈಂಟ್ ಆಗ್ನೆಸ್ ಕಾಲೇಜಿನ ಮಾಜಿ ವಿಭಾಗ ಮುಖ್ಯಸ್ಥೆ ಡಾ. ಸರಸ್ವತಿ ರಾವ್ ಇನ್ನಿಲ್ಲ

ಮಂಗಳೂರು, ಮೇ 31 :  ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ  37 ವರ್ಷಗಳ ಕಾಲ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿಯೂ ವಿಭಾಗ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿ 2015ರಲ್ಲಿ ನಿವೃತ್ತರಾಗಿದ್ದ ಡಾ.ಸರಸ್ವತಿ ಎಸ್.ರಾವ್ ಅಲ್ಪಕಾಲದ ಅಸ್ವಾಸ್ಥ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅಪಾರ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು ಸದಾ ನಗುಮೊಗದ ವ್ಯಕ್ತಿತ್ವವುಳ್ಳವರಾಗಿದ್ದರು. ಅತೀವ ಕುಟುಂಬ ಪ್ರೇಮವುಳ್ಳವರಾಗಿದ್ದು, ಬಂಧು ಬಾಂಧವರ ಪ್ರೀತಿ ಅಭಿಮಾನ ಗೌರವಕ್ಕೆ ಪಾತ್ರರಾದ ಡಾ. ಸರಸ್ವತಿ ರಾವ್ ನ್ಯಾನೋ ತಂತ್ರಜ್ಞಾನದ ಬಗ್ಗೆ ಸಂಶೋಧನೆ ನಡೆಸಿ…

Read More

ಪಂಚಾಯತ್ ರಾಜ್ ಬಲಪಡಿಸಿದ್ದು ಕಾಂಗ್ರೆಸ್; ದುರ್ಬಲಗೊಳಿಸಲು ಬಿಜೆಪಿ ಯತ್ನ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮಾ…

Read More

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: BMS ಆಗ್ರಹ

ಮಂಗಳೂರು, ಮೇ 30:ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರು ಸಂಘ (BMS)ದ ಮುಂದಾಳತ್ವದಲ್ಲಿ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಹೆಚ್.ಆರ್. ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ರವಾನಿಸಿ…

Read More

ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಸಿಐಟಿಯು ಪ್ರತಿಭಟನೆ

ಮಂಗಳೂರು:ವೈಜ್ಞಾನಿಕ ಕನಿಷ್ಠ ಕೂಲಿ ನಿಗದಿ, ಕಾರ್ಮಿಕ ಕಾನೂನುಗಳ ರಕ್ಷಣೆ, ರಾಜ್ಯ ಸರ್ಕಾರ ಪ್ರಕಟಿಸಿರುವ ಕನಿಷ್ಠ ಕೂಲಿಯ ಕಟ್ಟುನಿಟ್ಟಿನ ಜಾರಿ ಹಾಗೂ ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ಸೇರಿಸುವಂತೆ ಆಗ್ರಹಿಸಿ ಸಿಐಟಿಯು (CITU) ಕರೆ ನೀಡಿದ್ದ ರಾಜ್ಯವ್ಯಾಪಿ ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ 300ಕ್ಕೂ ಅಧಿಕ ಕಾರ್ಮಿಕರು ಭಾಗವಹಿಸಿ, ಕಾರ್ಮಿಕ ಕಾನೂನುಗಳು ಹಾಗೂ ಕನಿಷ್ಠ…

Read More
error: Content is protected !!