ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಅಳವು ಅರಿಯದ ಭಾಷೆ’ ಕೃತಿ ಲೋಕಾರ್ಪಣೆ; ವಿನೂತನ ಯಕ್ಷಪ್ರಸ್ತುತಿ ನಾಳೆ
ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮತ್ತು ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಯೋಜನೆಯಲ್ಲಿ ಫೆಬ್ರವರಿ 13ರಂದು ಬೆಳಿಗ್ಗೆ 10 ಗಂಟೆಗೆ ಎಲ್.ಎಫ್. ರಸ್ಕಿನ್ ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ ಹಾಗೂ ವಿನೂತನ ಯಕ್ಷಪ್ರಸ್ತುತಿ ಕಾರ್ಯಕ್ರಮ ನಡೆಯಲಿದೆ.ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊಫೆಸರ್ ನಿತ್ಯಾನಂದ ಬಿ. ಶೆಟ್ಟಿ ಅವರು ಕರಾವಳಿ ಮತ್ತು ಯಕ್ಷಗಾನದ ಸಾಮಾಜಿಕ ಇತಿಹಾಸ ಕುರಿತಾಗಿ ಸಂಶೋಧನೆ ನಡೆಸಿ ರಚಿಸಿರುವ ‘ಅಳವು ಅರಿಯದ ಭಾಷೆ’ ಕೃತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಖ್ಯಾತ ಯಕ್ಷಗಾನ ಕಲಾವಿದ ಪಟ್ಲ…