ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಅಗತ್ಯ: ಸಚಿವ ಯು.ಟಿ. ಖಾದರ್

ಉಡುಪಿ: ದೇಶದಲ್ಲಿ ಮತ್ತೆ ಕೋವಿಡ್‌-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಪರೀಕ್ಷೆ ನಡೆಸಿದಾಗ ಕೆಲವರಲ್ಲಿ ಸೋಂಕು ದೃಢಪಟ್ಟರೂ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‌ಗಳು ಪರಿಸರದಲ್ಲಿ ಇರುವುದು ಸಹಜ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವೈರಸ್‌ಗಿಂತ ನಾವು ಗಟ್ಟಿಯಾಗಬೇಕು. ಉತ್ತಮ ಆಹಾರ ಪದ್ಧತಿ, ಸ್ವಚ್ಛತೆ ಮತ್ತು…

Read More

‘ರಾಮ ಮಂದಿರ ಹಗರಣದ ಬಗ್ಗೆ ಮೋದಿ ಸರ್ಕಾರ ಉತ್ತರಿಸಲಿ’ – ವಿನಯ್ ಕುಮಾರ್ ಸೊರಕೆ

ಪುತ್ತೂರು: ಬಿಜೆಪಿಯವರು ನಮ್ಮನ್ನು ಧರ್ಮಕ್ಕೆ ವಿರೋಧ ಎಂಬ ಪ್ರಚಾರ ಮಾಡುತ್ತಾರೆ. ಆದರೆ ನಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇವೆ. ನಮ್ಮ ಧರ್ಮವನ್ನು ಪ್ರಥಮವಾಗಿ ಗೌರವಿಸುತ್ತೇವೆ, ಅನುಸರಿಸುತ್ತೇವೆ. ಬೇರೆ ಧರ್ಮಗಳನ್ನು ದ್ವೇಷ ಮಾಡುವುದಿಲ್ಲ. ಆದರೆ ಇವತ್ತು ಬಿಜೆಪಿಯವರಿಗೆ ರಾಮದೇವರ ಶಾಪ ತಟ್ಟಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಅಲ್ಲಿನ ಟ್ರಸ್ಟನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕು. ಭಕ್ತರ ನಂಬಿಕೆಗೆ ತೊಂದರೆ ಆಗದಂತೆ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ…

Read More

ಪುತ್ತೂರು ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಭೇಟಿ

ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ ಇವರು ದಿನಾಂಕ 11-07-2026ರಂದು ಸಂಜೆ ಗಂಟೆ 4.30ರಿಂದ ನಗರ ಠಾಣೆಯ ಪೋಲೀಸ್‍ ಸಿಬ್ಬಂದಿ ಶ್ರೀ ಪ್ರಭಾಕರ ಮೋರೆ ಹಾಗೂ ಸಮಿತಿಯ ಸಿಬ್ಬಂದಿಯವರೊಂದಿಗೆ ಪುತ್ತೂರು ತಾಲೂಕಿನ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಭೇಟಿ ನೀಡಿದ ಸಂದರ್ಭ ಡಾ. ಅಜಯ್‍ ಅವರು ಆಸ್ಪತ್ರೆಯ ಬಗ್ಗೆ ವಿಶ್ಲೇಷಣೆ ಮಾಡುತ್ತಾ – ಹೊರ ರೋಗಿಗಳ ವಿಭಾಗ, ಒಳರೋಗಿಗಳ…

Read More

ಕಾರ್ಗಿಲ್ ವಿಜಯ್ ದಿವಸ್‌ಗೆ ಸಜ್ಜಾಗುತ್ತಿರುವ ಮಂಗಳೂರಿನ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್

ಮಂಗಳೂರು:ಭಾರತದ 1965 ಹಾಗೂ 1971ರ ಯುದ್ಧಗಳಲ್ಲಿ ಬಳಸಲಾಗಿದ್ದ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್ ಹಾಗೂ .303 ರೈಫಲ್‌ಗೆ ಮಂಗಳೂರಿನಲ್ಲಿ ಶಾಶ್ವತ ಸ್ಥಾನ ಕಲ್ಪಿಸಲಾಗಿದೆ. ಕದ್ರಿಯ ಯುದ್ಧ ಸ್ಮಾರಕದ ಸಮೀಪ, ಸರ್ಕ್ಯೂಟ್ ಹೌಸ್ ಪಕ್ಕದಲ್ಲಿ ಮಂಗಳೂರು ಮಹಾನಗರ ಪಾಲಿಕೆ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಟ್ಯಾಂಕ್ ಪ್ರತಿಷ್ಠಾಪನೆಯಾಗಿದ್ದು, ಜುಲೈ 26ರ ಕಾರ್ಗಿಲ್ ವಿಜಯ್ ದಿವಸ್‌ದಂದು ಆಕರ್ಷಕ ವಿನ್ಯಾಸದೊಂದಿಗೆ ಸಾರ್ವಜನಿಕರ ವೀಕ್ಷಣೆಗೆ ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್…

Read More

ಮಣಿಪುರದಲ್ಲಿ ‘ಆಟಿದ ನೆನಪು’: ಕರಾವಳಿ ಸಂಪ್ರದಾಯದ ಅನಾವರಣ

ಉಡುಪಿ: ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಮಣಿಪುರ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಗೀತಾ ವಾಗ್ಲೆ ಅವರು ಆಟಿ ತಿಂಗಳಲ್ಲಿ ಬಳಸುತ್ತಿದ್ದ ಔಷಧೀಯ ಸಸ್ಯಗಳು, ವಿವಿಧ…

Read More

‘ಮಿಥ್ಯ’ ಅಭಿನಯಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪತ್ರಿಕಾಗೋಷ್ಠಿಯಲ್ಲಿ ಕಲಾ ಪಯಣ ಹಂಚಿಕೊಂಡ ರೂಪಶ್ರೀ ವರ್ಕಾಡಿ

ಮಂಗಳೂರು:72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಹಾಗೂ ಸುಮಂತ್ ಭಟ್ ನಿರ್ದೇಶನದ ‘ಮಿಥ್ಯ’ ಕನ್ನಡ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿರುವ ಕರಾವಳಿಯ ಹಿರಿಯ ರಂಗಭೂಮಿ ಹಾಗೂ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ ಅವರು ತಮ್ಮ ಕಲಾ ಪಯಣ, ರಾಷ್ಟ್ರ ಪ್ರಶಸ್ತಿ ಹಾಗೂ ಚಿತ್ರರಂಗದ ಅನುಭವಗಳನ್ನು ನಗರದ ಪತ್ರಿಕಾಭವನದಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಹರೀಶ್ ಹಾಗೂ…

Read More

ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ; ವಿಶೇಷ ಸಂಚಿಕೆ ಬಿಡುಗಡೆ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ನಗರದ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ವಹಿಸಿ ಮಾತನಾಡಿ, ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ; ಅದು ಸಮಾಜದ ಧ್ವನಿ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆ ಸಮಾಜಮುಖಿ ವಿಚಾರಗಳು, ಮಹಿಳಾ ಸಬಲೀಕರಣ,…

Read More

ಮಳೆಗಾಲದ ಸುಮಧುರ ಗೀತೆಗಳ ರಸದೌತಣ ‘ಸುಹಾನ ಸಫರ್’ ಜುಲೈ 26ರಂದು

ಮಂಗಳೂರು:ಮಳೆಗಾಲದ ನೆನಪುಗಳನ್ನು ಸಂಗೀತದ ಮೂಲಕ ಮರುಕಳಿಸುವ ಉದ್ದೇಶದಿಂದ ಕುಂಬ್ಳೆ ಬ್ರದರ್ಸ್ ಹಾಗೂ ಲಯನ್ಸ್ ಕ್ಲಬ್ ಆಫ್ ಮಂಗಳೂರು ಸಹಯೋಗದಲ್ಲಿ ‘ಸುಹಾನ ಸಫರ್’ ಹಾಗು “ರಿಮ್‍ಝಿಮ್ ಗಿರೆ ಸಾವನ್ ” ಸಂಗೀತ ಕಾರ್ಯಕ್ರಮವನ್ನು ಜುಲೈ 26 ರ ಭಾನುವಾರ ಸಂಜೆ 5 ಗಂಟೆಯಿಂದ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಲಯನ್ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಯಕ್ಷಧ್ರುವ ಪಟ್ಲ ಫೌಂಡೇಷನ್ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ಹಾಗೂ ಹಾಪ್‌ಕಾಮ್ಸ್ ಉದ್ಯೋಗಿ ರವಿ ಶೆಟ್ಟಿ (ಅಶೋಕ್ ನಗರ) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ (ಜು. 21) ಮುಂಜಾನೆ ನಿಧನರಾದರು. ತಿರುಪತಿ ಯಾತ್ರೆ ಮುಗಿಸಿ ಮಂತ್ರಾಲಯದತ್ತ ತೆರಳುತ್ತಿದ್ದ ವೇಳೆ, ಮಂತ್ರಾಲಯ ಸಮೀಪ ಕೇವಲ ಒಂದೆರಡು ಕಿಲೋಮೀಟರ್ ದೂರದಲ್ಲಿ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೇ ಕಾರಿನಲ್ಲಿದ್ದ…

Read More

ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಈಜಿಪ್ಟ್‌ನ ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್‌ನ ಬೆಂಬಲ

​ಮಂಗಳೂರು: ಬ್ಯಾರಿ ಸಮುದಾಯದ ಯುವ ವಿದ್ವಾಂಸರನ್ನು ಜಾಗತಿಕ ಮಟ್ಟದ ಶೈಕ್ಷಣಿಕ ವೇದಿಕೆಗೆ ಪರಿಚಯಿಸುವ ಮತ್ತು ಅವರಿಗೆ ಅತ್ಯುತ್ತಮ ಇಸ್ಲಾಮಿಕ್ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ, ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಐತಿಹಾಸಿಕ ಹೆಜ್ಜೆಯೊಂದನ್ನು ಇರಿಸಿದೆ. ಈಜಿಪ್ಟ್‌ನ ಕೈರೋದಲ್ಲಿರುವ ವಿಶ್ವವಿಖ್ಯಾತ ‘ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ಸ್ ಪದವಿ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಗೆ ಟ್ರಸ್ಟ್ ಸಂಪೂರ್ಣ ಪ್ರಾಯೋಜಕತ್ವವನ್ನು ಘೋಷಿಸಿದೆ. ಅಲ್-ಅಝ್ಹರ್ ವಿಶ್ವವಿದ್ಯಾಲಯವು ಇಸ್ಲಾಮಿಕ್ ಜ್ಞಾನ ಮತ್ತು ಶೈಕ್ಷಣಿಕ ಸಂಶೋಧನೆಯಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಕೇಂದ್ರವಾಗಿದೆ. ಇಲ್ಲಿನ ವಿದ್ಯಾಭ್ಯಾಸವು ವಿದ್ಯಾರ್ಥಿಗಳಿಗೆ ಕೇವಲ…

Read More
error: Content is protected !!