ಮೇ 24ರಂದು ಕದ್ರಿ ಪಾರ್ಕ್‌ನಲ್ಲಿ ‘ಫಂಟೋಪಿಯಾ’ ಮೆಗಾ ಮನರಂಜನಾ ಉತ್ಸವ

ಮಂಗಳೂರು: ಯುವಜನತೆ ಹಾಗೂ ಕುಟುಂಬಗಳಿಗಾಗಿ ವಿಶೇಷವಾಗಿ ಆಯೋಜಿಸಲಾಗಿರುವ “ಫಂಟೋಪಿಯಾ – ಮೆಗಾ ಮನರಂಜನಾ ಉತ್ಸವ 2026” ಕಾರ್ಯಕ್ರಮವು ಮೇ 24ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಾಘವೇಂದ್ರ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವು ಸಂಜೆ 4ರಿಂದ ರಾತ್ರಿ 8ರವರೆಗೆ ನಡೆಯಲಿದೆ . ಈ ಸಮಾರಂಭಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು . ಗೌರವ ಅತಿಥಿಗಳಾಗಿ…

Read More

ಮೇ 24ರಂದು ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಪ್ರಥಮ ಬಾರಿಗೆ ವಿಪ್ರಬಾಂಧವರಿಗಾಗಿ ‘ಜಿಲ್ಲಾಮಟ್ಟದ ಭಜನಾ ಸ್ಪರ್ಧೆ’ಯನ್ನು ಮೇ 24ರಂದು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್‌ನ ವಿಷ್ಣುಪ್ರಸಾದ್ ಪಾಡಿಗಾರ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದರು.ಪುರುಷರ ವಿಭಾಗ, ಮಹಿಳೆಯರ ವಿಭಾಗ ಹಾಗೂ ಮಕ್ಕಳ ವಿಭಾಗ ಸೇರಿದಂತೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು…

Read More

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಕಾಮತ್ ಮಂಗಳೂರಿನಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಆರಂಭದಿಂದಲೂ…

Read More

ಬಕ್ರೀದ್ ಹಿನ್ನೆಲೆ ಅಕ್ರಮ ಗೋಸಾಗಾಟ ತಡೆಗೆ ವಿಶ್ವಹಿಂದೂ ಪರಿಷತ್ ಆಗ್ರಹ

ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಪ್ರಕ್ರಿಯೆಗಳು ಜಾಸ್ತಿಯಾಗಿ ನಡೆಯುತ್ತಿದ್ದು, ಪೋಲೀಸರು ಇದನ್ನು ತಡೆಯಲು ವಿಶೇಷ ಬಂದೋಬಸ್ತ್ ಏರ್ಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಘಟಕ ಆಗ್ರಹಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸಾದ್ ಗೋವಂಶದ ಹತ್ಯೆ, ಸಾಗಾಟ ಮತ್ತು ಬಲಿ ಕಟ್ಟುನಿಟ್ಟಾಗಿ ತಡೆಯಬೇಕು ಹಾಗು ಗೋವಂಶದ ಬಲಿ ಕೊಟ್ಟ ಸ್ಥಳವನ್ನು ಮುಟ್ಟುಗೋಲು ಹಾಕುವ ಕಾನೂನನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದ ಅವರು ಬಕ್ರಿದ್ ಹಬ್ಬ ಸಮೀಪಿಸುವ ಹಿನ್ನಲೆಯಲ್ಲಿ ಹೆಚ್ಚಿನ…

Read More

ಮಂಗಳೂರಿನಲ್ಲಿ ಧರೆ ಕುಸಿತ; ವ್ಯಕ್ತಿ ದುರ್ಮರಣ

ಮಂಗಳೂರು :ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ಮೃತಪಟ್ಟಿದ್ದಾರೆ.ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುತ್ತಿದ್ದಾಗ ಧರೆ ಜರಿದು ಅವಘಡ…

Read More

ಮೇ.26ಕ್ಕೆ ಹಕ್ಕುಪತ್ರ ವಿತರಣೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಮೂರು ಕುಟುಂಬಗಳಿಗೆ ಹಕ್ಕುಪತ್ರಕ್ಕಾಗಿ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತ್ರತ್ವದಲ್ಲಿ ಮಾತುಕತೆ ನಡೆಸಿ ಕೊನೆಗೊಳಿಸಲಾಯಿತು. ಮೇ. 26 ರಂದು ಪೆರ್ನೆಯ ಗ್ರಾ.ಪಂ.ನಲ್ಲಿ ಮೂರು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಭರವಸೆಯನ್ನು ತಹಶಿಲ್ದಾರ್ ಮಂಜುನಾಥ್ ಅವರು ಬಂಟ್ವಾಳ ಶಾಸಕರಿಗೆ ಭರವಸೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಕುಟುಂಬಗಳು ಇವರ ಮಾತಿಗೆ ಗೌರವ ನೀಡಿ…

Read More

ಸಹ್ಯಾದ್ರಿ ಕಾಲೇಜಿನಲ್ಲಿ ಎಐ-ರೊಬೊಟಿಕ್ಸ್ ಲ್ಯಾಬ್ ಹಾಗೂ ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ ಉದ್ಘಾಟನೆ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಎಂಫಸಿಸ್ ಫೌಂಡೇಶನ್ ಸಹಯೋಗದೊಂದಿಗೆ ಮೇ 22ರಂದು “ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್” ಹಾಗೂ ಮೇ 23ರಂದು “ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ” ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌. ಇಂಜನಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 22ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ…

Read More

ಜಾಗತಿಕ ಶಾಂತಿಗಾಗಿ ಮೇ 23ರಂದು ಮಂಗಳೂರಿನಲ್ಲಿ ಮೌನ ಧರಣಿ

ಮಂಗಳೂರು: ಜಾಗತಿಕ ಯುದ್ಧ ಭೀತಿ, ಮಾನವೀಯ ಮೌಲ್ಯಗಳ ಕುಸಿತ ಹಾಗೂ ಪರಿಸರ ಹಾನಿಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಮೇ 23ರಂದು ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್ ಟವರ್ ಎದುರು ಮೌನ ಧರಣಿ ನಡೆಸಲಾಗುವುದು ನನ್ನ ಜೊತೆ ಒಂದು ಮಗು ಕೂಡ“ನಮಗೂ ಬದುಕಲು ಅವಕಾಶ ಕೊಡಿ” ಎಂಬ ಸಂದೇಶದೊಂದಿಗೆ ಧರಣಿಯಲ್ಲಿ ಭಾಗವಹಿಸಲಿದೆ ಆಸಕ್ತರು ಧರಣಿಯಲ್ಲಿ ಭಾಗಿಯಾಗಬಹುದೆಂದು ನಮ್ಮ ಭೂಮಿ ಕುಂದಾಪುರ ಸಂಸ್ಥೆಯ ಪ್ರಮುಖರಾದ ರಾಮಾಂಜಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಳೆದ…

Read More

ಮೇ 24ರಂದು ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026’

ಮಂಗಳೂರು: ಕರಾವಳಿಯ ಚಿತ್ರರಂಗದಲ್ಲಿ ಸತತ ಐದನೇ ಬಾರಿಗೆ ಅತಿ ದೊಡ್ಡ ಸಿನಿಗಾಲಾ ಕಾರ್ಯಕ್ರಮವೆನಿಸಿಕೊಂಡಿರುವ ‘ಸ್ಯಾಂಡಿಸ್ ಕಂಪೆನಿ’ ಅರ್ಪಿಸುವ ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026’ ಮೇ 24ರಂದು ಸಂಜೆ 3 ಗಂಟೆಗೆ ಮುಲ್ಕಿಯ ಕೊಲ್ನಾಡ್‌ನ ಸುಂದರರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸ್ಯಾಂಡಿಸ್ ಕಂಪೆನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರರಂಗ ಹಾಗೂ ರಾಜಕೀಯ…

Read More

ಬಿಜೆಪಿ ಸರ್ಕಾರ ಕಟ್ಟಡ ನಿರ್ಮಿಸಿತು, ಕಾಂಗ್ರೆಸ್‌ಗೆ ರಿಬ್ಬನ್ ಕತ್ತರಿಸುವ ಭಾಗ್ಯ: ಶಾಸಕ ವೇದವ್ಯಾಸ ಕಾಮತ್ ವ್ಯಂಗ್ಯ

ಮಂಗಳೂರು: “ಅಭಿವೃದ್ಧಿ ಕಾಮಗಾರಿಗಳಿಗೆ ಮುತುವರ್ಜಿ ವಹಿಸಿ ಕೋಟಿ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ. ಇದೀಗ ನಿರ್ಮಾಣ ಪೂರ್ಣಗೊಂಡ ಕಟ್ಟಡಗಳಿಗೆ ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡುವ ಭಾಗ್ಯ ಮಾತ್ರ ಕಾಂಗ್ರೆಸ್ ಸರ್ಕಾರಕ್ಕೆ ಸಿಕ್ಕಿದೆ” ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು. ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕದ್ರಿಹಿಲ್ಸ್‌ನ ನೂತನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)…

Read More
error: Content is protected !!