ಫೆ. 6ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಚಾಲನೆ
ತೊಕ್ಕೊಟ್ಟು:ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಇದೇ ಫೆಬ್ರವರಿ 2ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಶ್ರೀ ಕ್ಷೇತ್ರದ ಮುಂಭಾಗದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯುಕ್ತ ಚಾಲನೆ ನೀಡಲಿದ್ದು ಅದೇ ಸಂದರ್ಭದಲ್ಲಿ ಯಕ್ಷಗಾನ ಬೊಂಬೆಯಾಟ ಪ್ರದರ್ಶನವನ್ನು ಆಯೋಜಿಸಿರುವುದಾಗಿ ಕಾಸರಗೋಡು ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘದ ನಿರ್ದೇಶಕ, ಪ್ರಧಾನ ಸೂತ್ರಧಾರಿ ಕೆ. ವಿ. ರಮೇಶ ತಿಳಿಸಿದ್ದಾರೆ. ತೊಕ್ಕೊಟ್ಟು ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ತೆಂಕುತಿಟ್ಟು ಯಕ್ಷಗಾನವನ್ನು ಬೊಂಬೆಯಾಟದ ಮೂಲಕ ಪ್ರದರ್ಶಿಸುತ್ತಿರುವ ಕಾಸರಗೋಡಿನ…