ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ

ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕರಾವಳಿಯ ಸಂಪ್ರದಾಯ, ಸಂಸ್ಕೃತಿ ಹಾಗೂ ಜನರ ಭಾವನೆಗಳಿಗೆ ನಂಟಿರುವ ಕಂಬಳಕ್ಕೆ ತಡೆ ವಿಧಿಸಿರುವ ಕ್ರಮವನ್ನು ವಿರೋಧಿಸಿದ ಅವರು, ಸಾಂಪ್ರದಾಯಿಕ ಕ್ರೀಡೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು. ಕರಾವಳಿಯ ಕಂಬಳಗಳ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು. ಕೋರ್ಟ್ ಆದೇಶವನ್ನು…

Read More

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ; 17,347 ವಿದ್ಯಾರ್ಥಿಗಳ ಪೈಕಿ 13,206 ಮಂದಿಯ ಫಲಿತಾಂಶ ಪ್ರಕಟ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಜೂನ್–ಜುಲೈ 2026ರಲ್ಲಿ ನಡೆಸಿದ ವಿವಿಧ ಪದವಿ ಕಾರ್ಯಕ್ರಮಗಳ ಆರನೇ ಸೆಮಿಸ್ಟರ್ ಹಾಗೂ ಬಿ.ಎಚ್.ಎಂ. ಎಂಟನೇ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪೂರ್ಣಗೊಂಡ ಹಿನ್ನೆಲೆ, ಸೋಮವಾರ ಫಲಿತಾಂಶವನ್ನು ಪ್ರಕಟಿಸಿದೆ.ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಕುಲಸಚಿವ ಸಂತೋಷ್ ಜಗಲಸಾರ ಅವರ ಉಪಸ್ಥಿತಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಬಿ.ಎಸ್ಸಿ, ಬಿ.ಕಾಂ., ಬಿ.ಎಸ್.ಡಬ್ಲ್ಯು., ಬಿ.ಸಿ.ಎ., ಬಿ.ಎಸ್‌.ಪಿ. (ಎಫ್‌ಎನ್‌ಡಿ), ಎಫ್‌ಎನ್‌ಡಿ (ಆನಿಮೇಶನ್ ಮತ್ತು ವಿಜುವಲ್ ಎಫೆಕ್ಟ್ಸ್), ಬಿ.ಎಸ್ಸಿ (ಫುಡ್ ಟೆಕ್ನಾಲಜಿ), ಬಿ.ಎಸ್ಸಿ (ಹೋಂ ಸೈನ್ಸ್), ಬಿ.ಎ. (ಎಚ್‌.ಆರ್‌.ಡಿ.), ಬಿ.ಎಸ್ಸಿ…

Read More

ಕಣ್ಣೂರು ದ್ಯಂಬು ಪ್ರದೇಶದಲ್ಲಿ ತಡೆಗೋಡೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್

ಮಂಗಳೂರು: ನಗರದ ಕಣ್ಣೂರು 52ನೇ ವಾರ್ಡಿನ ದ್ಯಂಬು ಪ್ರದೇಶದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ಹಾನಿಯಾಗಿರುವ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಸಂಬಂಧಿತ ಇಂಜಿನಿಯರ್ ಹಾಗೂ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾಗಿರುವ ಕಲ್ಲುಗಳು ಹಾಗೂ ಮಣ್ಣನ್ನು ತೆರವುಗೊಳಿಸಿ…

Read More

ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ದಿನಾಂಕ 20-07-2026 ರಂದು ಮಾನ್ಯ ಪೊಲೀಸ್ ಆಯುಕ್ತರು 29 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಕಳೆದ ಆರು ತಿಂಗಳ ಅವಧಿಯಲ್ಲಿ 24 ಎಲ್.ಪಿ.ಸಿ….

Read More

ಎಸ್‌ಐಆರ್ ಮಹಾ ಅಭಿಯಾನ: ಕಂಕನಾಡಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಈ ಕುರಿತು ಮಹಾ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ವಿವಿಧೆಡೆ ಭೇಟಿ ನೀಡಿದರು. ದಕ್ಷಿಣ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 48ರ ಕಂಕನಾಡಿ ವೆಲೆನ್ಸಿಯಾದ ಬೂತ್ ಸಂಖ್ಯೆ 187ರಲ್ಲಿ ಕಾರ್ಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಎಸ್‌ಐಆರ್ ಅಭಿಯಾನದ ಮಹತ್ವ ಹಾಗೂ ಉದ್ದೇಶದ ಕುರಿತು ಮಾಹಿತಿ ನೀಡಿದರು. ಎಲ್ಲಾ ಮತದಾರರು ಭರ್ತಿ ಮಾಡಿದ ಎನ್ಯುಮರೇಷನ್ ಫಾರಂಗಳನ್ನು ಅಂತಿಮ ದಿನಾಂಕದ ವರೆಗೆ ಕಾಯದೇ…

Read More

ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಬಂಧನ

ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮ, ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆಯ ಶ್ರೀಮತಿ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ಕಳೆದ 05 ವರ್ಷಗಳಿಂದ ಶಿವಲೀಲಾ ಮತ್ತು ಆಕೆಯ ಇಬ್ಬರು ಮಕ್ಕಳಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ರವರ ವಾಸ್ತವ್ಯವಿದ್ದು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ದಿನಾಂಕ: 19-07-2026 ರಂದು ರಾತ್ರಿ 11.00 ಗಂಟೆಗೆ ಆರೋಪಿಯಾದ ಸೋಮನಾಥ, ಪ್ರಾಯ 21 ವರ್ಷ, ತಂದೆ: ದಿ|| ಪರಸಪ್ಪ, ವಾಸ: ರೇಖಾ ರವರ ಬಾಡಿಗೆ ಮನೆ, ಚೊಕ್ಕಬೆಟ್ಟು, ಮಂಗಳೂರು ತಾಲೂಕು, ಖಾಯಂ ವಾಸ: ತಗ್ಯಾಳ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ

ಮಂಗಳೂರು, ಜುಲೈ 20: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್…

Read More

ಹೊಸ ದೇವಾಲಯ ನಿರ್ಮಾಣಕ್ಕಿಂತ ಪುರಾತನ ಸನ್ನಿಧಿಗಳ ಜೀರ್ಣೋದ್ಧಾರ ಶ್ರೇಷ್ಠ: ಅದಮಾರು ಶ್ರೀ

ಕುಂಜಾರುಗಿರಿ ಶ್ರೀದುರ್ಗಾ ದೇವಸ್ಥಾನದಲ್ಲಿರುವ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರ ಸೇವಾಪತ್ರವನ್ನು ಶ್ರೀ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, “ಹೊಸ ದೇವಾಲಯಗಳನ್ನು ನಿರ್ಮಿಸುವುದಕ್ಕಿಂತ ಪುರಾತನ ಸನ್ನಿಧಿಗಳನ್ನು ಸಂರಕ್ಷಿಸಿ ಜೀರ್ಣೋದ್ಧಾರಗೊಳಿಸುವುದು ಶ್ರೇಷ್ಠ ಕಾರ್ಯ. ಊರಿನ ಪ್ರತಿಯೊಬ್ಬರೂ ಒಂದಾಗಿ ಕೈಜೋಡಿಸಿ ಈ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು. ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಪ್ರತಿ ಭಾನುವಾರ ಸನ್ನಿಧಿಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಲು ಚಾಲನೆ…

Read More

ಸತ್ಯಶೋಧನೆಗೆ ಆದ್ಯತೆ ನೀಡಿ, ಉತ್ತಮ ಸಂಗತಿಗಳಿಗೂ ಪ್ರಚಾರ ಸಿಗಲಿ: ಶಾಸಕ ಅಶೋಕ್ ರೈ

ಪುತ್ತೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸತ್ಯಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣಪುಟ್ಟ ತಪ್ಪುಗಳನ್ನು ವೈಭವೀಕರಿಸುವುದರ ಜೊತೆಗೆ ಸಮಾಜದಲ್ಲಿರುವ ಉತ್ತಮ ಸಂಗತಿಗಳನ್ನೂ ಜನರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಉಪನ್ಯಾಸ, ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ಧಿ ರಾಜಕಾರಣವೇ ಚರ್ಚೆಯಾಗಬೇಕು, ಧರ್ಮ ರಾಜಕಾರಣವಲ್ಲ. ಪುತ್ತೂರಿಗೆ…

Read More

ಬಂಟಕಲ್ ಬಳಿ ಥಾರ್ ಕಾರು ಚರಂಡಿಗೆ ಉರುಳಿ: ನಾಲ್ವರಿಗೆ ಗಾಯ

ಉಡುಪಿ: ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ–ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ. ಗಾಯಾಳುಗಳನ್ನು ಚಾಲಕ ಶಿರ್ವ ನಿವಾಸಿ ಬಾಲಕೃಷ್ಣ (21), ಇಬ್ಬರು ಯುವತಿಯರು ಹಾಗೂ ಮತ್ತೋರ್ವ ಸಹ ಪ್ರಯಾಣಿಕ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರೂ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.ಸ್ಥಳೀಯರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಉಡುಪಿಯ ಖಾಸಗಿ ಆಸ್ಪತ್ರೆಗೆ…

Read More
error: Content is protected !!