ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ – ಸಮಾರೋಪ ಸಮಾರಂಭ

ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ಯಕ್ಷದ್ರುವ ಯಕ್ಷ ಶಿಕ್ಷಣ – ಯಕ್ಷಗಾನ ಅಭ್ಯಾಸ ತರಗತಿಯ ಸಮಾರೋಪ ಸಮಾರಂಭ ದಿನಾಂಕ 23-01-2026 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಶಾಲಾ ಸಭಾಂಗಣದಲ್ಲಿ ಜರುಗಿತು. ಅತಿಥಿಗಳಾಗಿ ಭಾಗವಹಿಸಿದ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮಾತನಾಡಿ, “ಅವಕಾಶ ವಂಚಿತ ಸರಕಾರಿ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿರುವ ಯಕ್ಷದ್ರುವ ಯಕ್ಷ ಶಿಕ್ಷಣವು ಯಕ್ಷಗಾನದ ಅರಿವಿನ ಜೊತೆಗೆ ಸಂಸ್ಕಾರ ಭರಿತ ಜೀವನವನ್ನು ಕಟ್ಟಿಕೊಡುವುದರಲ್ಲಿ…

Read More

ಪುಷ್ಪ ಕಾಶಿ ಕದ್ರಿ ಉದ್ಯಾನವನದಲ್ಲಿ ಕಣ್ಮನ ಸೆಳೆಯುವ ವಂದೇ ಭಾರತ್ ರೈಲಿನ ಪ್ರತಿಕೃತಿ … …? ಏನಿದೆ ಬೇರೆ ಬೇರೆ ವಿಶೇಷ

ದ.ಕ. ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಕದ್ರಿ ಉದ್ಯಾನವನದಲ್ಲಿ ಜ.23 ರಿಂದ 26ತನಕ ಪುಷ್ಪ ಮೇಳ ನಡೆಯಲಿದ್ದು ಅದಕ್ಕೆ ನಿನ್ನೆ ಚಾಲನೆ ಸಿಕ್ಕಿತ್ತು . ಈ ಬಾರಿ ಬಗೆಬಗೆಯ ಹೂವುಗಳಿಂದ ತಯಾರಿಸಲಾದ ವಂದೇ ಭಾರತ್ ರೈಲಿನ ಪ್ರತಿಕೃತಿ ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿದೆ.ಈ ರೈಲು 3 ಬೋಗಿಗಳನ್ನು ಹೊಂದಿದ್ದು, 24 ಅಡಿ ಉದ್ದ ಇದೆ. ರೈಲಿನ ಹಳಿ…

Read More

ತುಳು ಚಿತ್ರರಂಗದಲ್ಲಿ ಹೊಸ ಧಾಖಲೆ ಬರೆಯಲು ಅಸ್ತ್ರ ಪ್ರೊಡಕ್ಷನ್ “ಕಟ್ಟೆಮಾರ್” ಸಿನೆಮಾ ಇಂದು ಬಿಡುಗಡೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿಬಂದ ‘ಕಟ್ಟೆಮಾರ್’ ಸಿನಿಮಾದ ಅಧಿಕೃತ ಬಿಡುಗಡೆ ಕಾರ್ಯಕ್ರಮ ಶುಕ್ರವಾರ (ಜ.23) ನಗರದ ಬಿಗ್ ಸಿನಿಮಾಸ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಟ್ಟೆಮಾರ್‌ನ ಮಣ್ಣಿನ ಸುವಾಸನೆ ಹಾಗೂ ದೈವಾನುಗ್ರಹದ ಹಿನ್ನೆಲೆಯ ಕಾರಣಿಕತೆಯನ್ನು ಪ್ರತಿಬಿಂಬಿಸುವ ಚಿತ್ರ ಇದಾಗಿದ್ದು, ಯುವ ನಿರ್ದೇಶಕರು ಅತ್ಯಂತ ಸಮರ್ಪಕವಾಗಿ ಸಿನಿಮಾವನ್ನು ರೂಪಿಸಿದ್ದಾರೆ ಎಂದು ಪ್ರಶಂಸಿಸಿದರು. ಕಟ್ಟೆಮಾರ್ ಕ್ಷೇತ್ರದ ಮನೋಜ್ ಕಟ್ಟೆಮಾರ್ ಮಾತನಾಡಿ, ದೈವ ದೇವರ ಅನುಗ್ರಹ ಹಾಗೂ ನಂಬಿಕೆಯ…

Read More

ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಜ.24 ರಂದು ಲೋಕಾರ್ಪಣೆ … !

ಮಂಗಳೂರು:ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊಂದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ 9 ವರ್ಷಗಳ ದೀರ್ಘ ನಿರೀಕ್ಷೆಗೆ ತೆರೆ ಎಳೆದಂತೆ, ವೃತ್ತ ಪುನರ್ನಿಮರ್ಾಣಗೊಂಡಿದ್ದು, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯಕ್ಕೆ ನವ ಚೈತನ್ಯವನ್ನು ತುಂಬಿದೆ. ಬಹುನಿರೀಕ್ಷಿತ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಜ.24 ರಂದು ಸಂಜೆ 5:30ಕ್ಕೆ ನೆರವೇರಲಿದೆ ಎಂದು ಮಂಗಳೂರು ಜೈನ್ ಸೊಸೈಟಿಯ ಅಧ್ಯಕ್ಷ ಪುಷ್ಪರಾಜ್ ಜೈನ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಜೈನ ಸೊಸೈಟಿ (ರಿ) ಅವರ ಮುಂದಾಳತ್ವದಲ್ಲಿ…

Read More

ಮಂಗಳೂರು ಕನ್ನಡ ಸಾಹಿತ್ಯ ಪರಿಷತ್‌ಗೆ ಅರ್ಧ ಎಕರೆ ಜಾಗ ಮಂಜೂರು – ಕನ್ನಡ ಭವನ ನಿರ್ಮಾಣಕ್ಕೆ ಐತಿಹಾಸಿಕ ಹೆಜ್ಜೆ : ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣಕರ್

ಮಂಗಳೂರು:2026ರ ಹೊಸ ವರ್ಷದ ಶುಭಾರಂಭದ ಸಂದರ್ಭದ ಡಾ. ಮಂಜುನಾಥ ಎಸ್. ರೇವಣಕರ್ ಅವರ ಷಷ್ಟ್ಯಬ್ದಿ ಸಂಭ್ರಮದ ಶುಭ ಘಳಿಗೆ, ಧರ್ಮಸ್ಥಳದ ಕದ್ರಿಯ ರಥೋತ್ಸವ, ಮಂಗಳೂರು ರಥೋತ್ಸವ ಹಾಗೂ ಕರ್ಕಿ ದೈವಜ್ಞ ಬ್ರಾಹ್ಮಣ ಮಠದ ರಜತ ರಥೋತ್ಸವದ ಶುಭ ಸಂದರ್ಭದಲ್ಲಿ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತಿನ 110 ವರ್ಷಗಳ ಇತಿಹಾಸದಲ್ಲೇ ಅಪೂರ್ವ ಸಾಧನೆಯೊಂದಾಗಿ ಮಂಗಳೂರು ತಾಲ್ಲೂಕು ಘಟಕಕ್ಕೆ ಸರ್ಕಾರದಿಂದ ಅರ್ಧ ಎಕರೆ ಜಾಗ ಮಂಜೂರಾಗಿದೆ ಎಂದು ಕಸಾಪ ತಿಳಿಸಿದೆ. ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ಎಸ್….

Read More

ಮುಳುಗು ತಜ್ಞ , ಆಪದ್ಬಾಂಧವ ಈಶ್ವರ ಮಲ್ಪೆಗೆ ಪ್ರಪ್ರಥಮ ‘ಲಯನ್ಸ್ ಅಶೋಕ ಸೇವಾ ರತ್ನ ‘ಪ್ರಶಸ್ತಿ. ಪ್ರಧಾನ…. !

ಮಂಗಳೂರು : ಲಯನ್ಸ್ ಕ್ಲಬ್‌ ಅಶೋಕನಗರ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರ ಸಹಯೋಗದೊಂದಿಗೆ ಸಮಾಜಸೇವೆಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಖ್ಯಾತ ಸಮಾಜಸೇವಕ ಮತ್ತು ಮುಳುಗು ತಜ್ಞ ಈಶ್ವ‌ರ ಮಲ್ಪೆ ಇವರಿಗೆ ಪ್ರಪ್ರಥಮ “ಲಯನ್ಸ್ ಅಶೋಕ ಸೇವಾ ರತ್ನ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜನವರಿ 26 ಮಂಗಳೂರಿನ ಕದ್ರಿ ಸರ್ಕಿಟ್ ಹೌಸ್ ಬಳಿಯಿರುವ ಅಶೋಕ ನಗರದ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಲಿದೆ ಎಂದು ಲಯನ್.ಡಾ|ನವೀನ್ ಶೆಟ್ಟಿಯವರು ಹೇಳಿದರು. ಮಂಗಳೂರಿನ ಪತ್ರಿಕಾಭವನದಲ್ಲಿ…

Read More

ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ

ಮಂಗಳೂರು: ಕದ್ರಿ ಶ್ರೀ ಮಂಜುನಾಥನ ಜಾತ್ರಾ ಮಹೋತ್ಸವದ ಶುಭಾವಸರದಲ್ಲಿ ರಥೋತ್ಸವದ ಪುಣ್ಯ ದಿನ 21 ರಂದು ಪ್ರಖ್ಯಾತ ಹರಿದಾಸರು, ಸಂಘಟಕರು, ಭಜನಾ ಕೀರ್ತನಕಾರರು , ನಿರೂಪಕರು ಮತ್ತು ಅಂಕಣ ಬರಹಗಾರರಾದ ಶರತ್ ಶೆಟ್ಟಿ ಪಡುಪಳ್ಳಿ ಯವರ ತುಳು ಬರಹಗಳ ಗುಚ್ಚ “ ಕಡ್ಲೆ ಬಜಿಲ್” ಎಂಬ ಪುಸ್ತಕವು ಕದ್ರಿ ದೇವಳದ ರಜಾoಗಣದಲ್ಲಿ ಬಿಡುಗಡೆ ಗೊಂಡಿತು.ಮಲ್ಲಿಕಾ ಕಲಾ ವೃಂದದ ಸಂಚಾಲಕರಾದ ಸುಧಾಕರ್ ರಾವ್ ಪೇಜಾವರ, ಹಿರಿಯ ಲೇಖಕಿ, ಲೇಖಕಿಯರ ವಾಚಕಿಯರ ಸಂಘದ ರೂಪಕಲಾ ಆಳ್ವ, ಪ್ರಸಿದ್ಧ ತುಳು ಸಾಹಿತಿ…

Read More

ಕರಾವಳಿಯಲ್ಲಿ ಹಿಂದೂ ಸಮಾಜ ಏಕತೆಗೆ ಸರಣಿ ‘ಹಿಂದೂ ಸಂಗಮ’: ವಜ್ರದೇಹಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಮಂಗಳೂರು:ಹಿಂದೂ ಸಮಾಜದ ಏಕತೆ ಬಂಧುಗಳ ಏಕತೆ, ಸಂಸ್ಕೃತಿ ಹಾಗೂ ಧಾರ್ಮಿಕ ನಂಬಿಕೆಯನ್ನು ಬಲಪಡಿಸುವ ಮಹತ್ತರ ಉದ್ದೇಶದಿಂದ ಮಂಗಳೂರು ತಾಲೂಕಿನ ಎಡಪದವು, ಮಳಲಿ, ಗುರುಪುರ, ಪರ್ಮಂಕಿ, ಕೆಂಜಾರು, ಬಜಪೆ, ಎಕ್ಕಾರು: ಮಂಡಲಗಳಲ್ಲಿ ಫೆಬ್ರವರಿ ತಿಂಗಳಲ್ಲಿ ‘ಹಿಂದೂ ಸಂಗಮ’ ಆಯೋಜಿಸಲಾಗಿದ್ದು ಈ ಮೂಲಕ ಸಮಸ್ತ ಹಿಂದೂ ಸಮಾಜವನ್ನು ಸಂಘಟಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಹಿಂದು ಸಂಗಮ ಆಯೋಜನ ಸಮಿತಿ ಗುರುಪುರ ಕೈಕಂಬ, ಕಿನ್ನಿಕಂಬಳ ಇದರ ಗೌರವಾಧ್ಯಕ್ಷರಾದ ವಜ್ರದೇಹಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ ಕದ್ರಿಯಲ್ಲಿರುವ ವಿಶ್ವಹಿಂದೂ ಪರಿಷತ್…

Read More

ಜ.23 ರಿಂದ 25 ರ ತನಕ ಕೊಲ್ಯ ಆದರ್ಶ ಮಿತ್ರ ಮಂಡಳಿಯ ಸುವರ್ಣ ಸಂಭ್ರಮ.

ಉಳ್ಳಾಲ: ಕೊಲ್ಯದ ಆದರ್ಶ ಮಿತ್ರ ಮಂಡಳಿಯ 50ನೇ ವರುಷದ ಸುವರ್ಣ ಸಂಭ್ರಮ ಕಾರ್ಯಕ್ರಮವು ಜ.23 ರಿಂದ ಜ 25 ರ ವರೆಗೆ ಕೊಲ್ಯ ಶ್ರೀ ಶಾರದಾ ಮಂದಿರದಲ್ಲಿ ನಡೆಯಲಿದೆ ಎಂದು ಆದರ್ಶ ಮಿತ್ರ ಮಂಡಳಿಯ ಗೌರವ ಸಲಹೆಗಾರರಾದ ರಾಜೇಶ್ ಕುಮಾರ್ ಕೆ.ಎಸ್ ಹೇಳಿದರು.ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು ಜ.23 ರ ಶುಕ್ರವಾರ ಸಂಜೆ 4.30 ಗಂಟೆಗೆ ಶ್ರೀ ಶಾರದಾ ಮಹಿಳಾ ಮಂಡಳಿಯವರಿಂದ ಲಲಿತ ಸಹಸ್ರನಾಮ,5.30ಕ್ಕೆ ದೀಪ ಪ್ರಜ್ವಲನೆ,ಭಜನಾ ಕಾರ್ಯಕ್ರಮ,ಸಂಜೆ…

Read More

ಮನರೇಗಾ ಯೋಜನೆ ಬದಲು ವಿ.ಜಿ.ಗ್ರಾಮ್ ಜೀ ಯೋಜನೆ ಮಾಡದಂತೆ ಒತ್ತಾಯಿಸಿ ವಾಪಸ್ಸಾತಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳುವಂತೆ – ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷ ಕುಳಾಲು ಶ್ರಿ.ಸುಭಾಶ್ಚಂದ್ರ ಶೆಟ್ಟಿ ಕರೆ

ಮನರೇಗಾ ಯೋಜನೆಯನ್ನು ಹಂತ ಹಂತವಾಗಿ ಮೊಟಕುಗೊಳಿಸುವ ಕೇಂದ್ರ ಸರ್ಕಾರದ ಉದ್ದೇಶದ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ರಾಜಕೀಯ ನೋಡದೆ ಪಕ್ಷಾತೀತವಾಗಿ ಖಂಡನ ನಿರ್ಣಯ ಕೈಗೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಗ್ರಹಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯತಿಗಳಿದ್ದಲ್ಲಿ ವಿಶೇಷ ಸಭೆ ಕರೆದು ಆದರೂ ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯು.ಪಿ.ಎ ಸರ್ಕಾರ ಜಾರಿಗೆ ತಂದ ಮನರೇಗಾ ಕಾನೂನು…

Read More
error: Content is protected !!