ಮೇ 17ರಂದು ರಾಶಿ ರಾಜೇಶ್ ಹೆಗ್ಡೆ ಅದ್ದೂರಿ ಭರತನಾಟ್ಯ ರಂಗಪ್ರವೇಶ
ಮಂಗಳೂರು,ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್(ರಿ) ನಿರ್ದೇಶಕ ವಿದ್ವಾನ್ ಯು. ಕೆ. ಪ್ರವೀಣ್ ಅವರ ಶಿಷ್ಯೆ ಕುಮಾರಿ ರಾಶಿ ರಾಜೇಶ್ ಹೆಗ್ಡೆ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಮೇ 17ರಂದು ರವಿವಾರ ಸಂಜೆ 4.30ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ವಿದ್ವಾನ್ ಯು. ಕೆ. ಪ್ರವೀಣ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 13 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿರುವ ರಾಶಿ ರಾಜೇಶ್ ಹೆಗ್ಡೆ ಅವರು ಪುಷ್ಪಾಂಜಲಿ, ಶ್ಲೋಕ,…
