ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುಳ್ಯ: ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರು ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರು ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನದಿ ದಂಡೆಗಳ ಬಳಿ,…

Read More

ಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ…

Read More

ನರೇಗ ಬಚಾವೋ ಸಂಗ್ರಾಮ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ಕಾಂಗ್ರೆಸ್ ಪಾದಯಾತ್ರೆ ಘೋಷಣೆ – ರಮಾನಾಥ್ ರೈ

ಬಂಟ್ವಾಳ: ಯುಪಿಎ ಸರಕಾರದ ಅವಧಿಯಲ್ಲಿ ಜಾರಿಯಾದ ಮಹತ್ವಾಕಾಂಕ್ಷೆಯ ಕಾಯ್ದೆಯ ಮತ್ತು ಯೋಜನೆಗಳ ಹೆಸರು ಬದಲಾವಣೆ ಮಾಡಲು ಹೊರಟು ಕಾರ್ಯಕ್ರಮಗಳ ಮೂಲ ಸ್ಚರೂಪವೇ ಬದಲಾಗಿದೆ.ಅ ಕಾರಣಕ್ಕಾಗಿ ಕೇಂದ್ರ ಸರಕಾರದ ವಿರುದ್ದ ನರೇಗ ಬಚಾವೋ ಸಂಗ್ರಾಮ ಹಮ್ಮಿಕೊಂಡಿದ್ದು,ರಾಷ್ಟ್ರ ವ್ಯಾಪಿ ಸಂಗ್ರಾಮವಾಗಿದೆ. ಇದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಗಳನ್ಬು ಬೇರೆ ಬೇರೆ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದರು.ಅವರು ಪಾಣೆಮಂಗಳೂರು ಮತ್ತು ಬಂಟ್ವಾಳ ಕಾಂಗ್ರೆಸ್ ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಜ.21ರಂದು ದಕ್ಷಿಣ ಭಾರತದ ಮೊಟ್ಟ ಮೊದಲ RuTAGe ಸ್ಮಾರ್ಟ್ ವಿಲೇಜ್ ಸೆಂಟರ್‌ಗೆ ಚಾಲನೆ… !

ಮಂಗಳೂರು:ಭಾರತ ಸರ್ಕಾರದ ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಮಾರ್ಗದರ್ಶನದಲ್ಲಿ, ನಿಮ್ಮ ಪರಿಗಣಿತ ವಿಶ್ವವಿದ್ಯಾಲಯ ಮತ್ತು ಸೆಕ್ಷನ್ ಇನ್ಸಿನ್-8 ಫೌಂಡೇಶನ್ ಸಹಯೋಗದಲ್ಲಿ ದಕ್ಷಿಣ ಭಾರತದ ಮೊದಲ RUTAGE ಸ್ಮಾರ್ಟ್ ವಿಲೇಜ್ ಸೆಂಟರ್ ಜನವರಿ 21ರಂದು ಸ್ಥಾಪಿಸಲಾಗಲಿದೆ ಎಂದು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಪ್ರೊ.ಅಜಯ್ ಹೇಳಿದರು.ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , ಎನ್.ಸಿ. ಮೂರ್ತಿ ಅವರ ಉದಾರ ದೇಣಿಗೆಯಿಂದ ನಿಷ್ಠೆ ಹಾಗೂ ಫರಂಗಿಪೇಟೆ ಆರೋಗ್ಯ ಕೇಂದ್ರಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದವರು ತಿಳಿಸಿದರು. ಈ…

Read More

ಬಹುನಿರೀಕ್ಷಿತ ಕಟ್ಟೆಮಾರ್ ಸಿನೆಮಾ ಬೆಳ್ಳಿ ಪರದೆಯ ಮೇಲೆ ಮಿಂಚಲು ರೆಡಿ …. !

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಚಲನಚಿತ್ರ ಕಟ್ಟೆಮಾರ್ ಜನವರಿ 23 ರಂದು ಕರಾವಳಿಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ . ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ಭರ್ಜರಿಯಾಗಿ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಎಲ್ಲರಾ ಹುಬ್ಬೇರುವಂತೆ ಮಾಡಿದೆ. ತುಳು ಚಿತ್ರ ರಂಗದಲ್ಲೇ ವಿಭಿನ್ನ ಕಥಾ ಹಂದರವನ್ನು ಹೇಳಲು ರೆಡಿಯಾಗಿರುವ ಚಿತ್ರ ಈಗ ಟ್ರೇಲರ್ ಮೂಲಕ ನಿರೀಕ್ಷೆ ಮತ್ತಷ್ಟು ಮಗದಷ್ಟು…

Read More

ಸಂಸದ ಕೋಟರಿಂದ ಕಟಪಾಡಿ ಓವರ್ ಪಾಸ್ ಕಾಮಗಾರಿ ವೀಕ್ಷಣೆ

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ. ಸದ್ಯ ಕಾಮಗಾರಿ ಆರಂಭಗೊಂಡಿದ್ದು ,ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಮಳೆಗಾಲ ಆರಂಭವಾಗುವ ಮೊದಲು ಬಹುತೇಕ ಕಾಮಗಾರಿ ಮುಗಿಸಬೇಕೆಂಬುದು ಇಂಜಿನಿಯರ್ ತಯಾರಿ ನಡೆಸಿದ್ದಾರೆ. ಕಾಮಗಾರಿ ಸ್ಥಳಕ್ಕೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ಸದ್ಯ ಕಾಮಗಾರಿ ಆಗುತ್ತಿರುವುದರಿಂದ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದೆ. ಆದರೆ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡದೆ ವಾಹನ ಚಲಾವಣೆ ಮಾಡುತ್ತಾರೆ ಮತ್ತು ಜನರು ಅಡ್ಡಾದಿಡ್ಡಿ…

Read More

ಶೀರೂರು ವೇದವರ್ಧನ ತೀರ್ಥರಿಂದ ಮೊದಲ ಪೂಜೆ

ಉಡುಪಿ: ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೊದಲ ಮಹಾಪೂಜೆ ನಡೆಸಿದರು.ಶ್ರೀಕೃಷ್ಣನನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮೊದಲ ದಿನವಾದ ಭಾನುವಾರ ಸುಮಾರು 80 ಸಾವಿರ ಮಂದಿ ಅನ್ನಪ್ರಸಾದ ಭೋಜನ ಸ್ವೀಕರಿಸಿದರು. ಮಹಾಪೂಜೆ ಬಳಿಕ ಪಲ್ಲಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾಜಾಂಗಣ, ಭೋಜನಶಾಲೆ, ಹೊರೆಕಾಣಿಕೆ ಪೆಂಡಾಲ್‌ ಸಹಿತ ವಿವಿಧೆಡೆಗಳಲ್ಲಿ ಭೋಜನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Read More

ಕರಾವಳಿ ಉತ್ಸವದ ಅಂಗವಾಗಿ ಚಲನಚಿತ್ರೋತ್ಸವ ಇಂದು ಶುರು … !

ಮಂಗಳೂರು:ಹಲವು ವಿಶೇಷತೆಗಳೊಂದಿಗೆ ಕರಾವಳಿ ಉತ್ಸವ ಜನಮನ್ನಣೆ ಗಳಿಸುತ್ತಿರುವ ಹೊತ್ತಿನಲ್ಲಿ ಜಿಲ್ಲಾಡಳಿತದ ನೇತ್ರಿತ್ವದಲ್ಲಿ ಈ ಬಾರಿ ತುಳು, ಕನ್ನಡ, ಕೊಂಕಣಿ ಹಾಗೂ ಬ್ಯಾರಿ ಭಾಷೆಗಳ ಕರಾವಳಿ ಚಲನಚಿತ್ರ ಉತ್ಸವವು ಜ.19ರಿಂದ 21ರವರೆಗೆ ನಡೆಯಲಿದ್ದು ಇದರ ಭಾಗವಾಗಿ ಕರಾವಳಿ ಉತ್ಸವ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವು ಬಿಜೈನ ಭಾರತ್ ಸಿನಿಮಾಸ್ ನಲ್ಲಿ ಇಂದು ನಡೆಯಿತ್ತು .ಭಾರತ್ ಸಿನೆಮಾಸ್ ಒಂದರಲ್ಲಿ ಒಟ್ಟು 18 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ತುಳು ಭಾಷೆಯ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿ 11 ತುಳು ಚಿತ್ರಗಳ ಪ್ರದರ್ಶನ ನಡೆಯಲಿದೆ…

Read More

ಸುಲಿಗೆ ಪ್ರಕರಣ: ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅರೆಸ್ಟ್

ಸುಲಿಗೆ ಕೇಸಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ನವೀನ್ ಸಿಕ್ವೇರಾ, ಬಂಧಿತ ವ್ಯಕ್ತಿ. ಇವರ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು…

Read More

ಜಾತಿ ನಿಂದನೆ ನಡೆಸಿ ಹಲ್ಲೆ : ಕೇಸ್ ದಾಖಲು

ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ದೂರುದಾರರಾದ ಜಗದೀಶ ಎಂಬುವವರು ಮೊನ್ನೆ ರಾತ್ರಿ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದರು. ಆಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡುತ್ತಾ, ಕೈಯಿಂದ ಕೆನ್ನೆ, ತಲೆ, ಭುಜ, ಬೆನ್ನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು…

Read More
error: Content is protected !!