ಇ-ಖಾತಾ ಸಮಸ್ಯೆ ಕಾಂಗ್ರೆಸ್ ಕೃಪಾಪೋಷಿತ ಗ್ಯಾರಂಟಿ :- ಶಾಸಕ ಕಾಮತ್

ಮ.ನ.ಪಾ. ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಇನ್ನೂ ಸಹ ಜನರು ಹರಸಾಹಸ ಪಡುವಂತಾಗಿದ್ದು ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಗ್ಗೆ ಚಿಂತೆಯೇ ಇಲ್ಲವಾಗಿರುವುದು ದುರಂತವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ದಿನದಿಂದಲೂ ನಗರ ವ್ಯಾಪ್ತಿಯಲ್ಲಿ ಅವ್ಯವಸ್ಥೆ ಉಂಟಾಗಿದೆ. ದೂರದ ಊರುಗಳಲ್ಲಿ, ವಿದೇಶಗಳಲ್ಲಿ ನೆಲೆಸಿರುವ ಖರೀದಿದಾರರು, ಮಾರಾಟಗಾರರು ಇಲ್ಲಿಗೆ ಬಂದು ಹಲವು ದಿನಗಳ ನಂತರವೂ ತಮ್ಮ ಕೆಲಸವಾಗದೇ ಬರಿಗೈಯಲ್ಲಿ ಮರಳುತ್ತಿದ್ದಾರೆ. ಮೊನ್ನೆ…

Read More

ಕುಂಪಲ–ಬೈಪಾಸ್ ಡಿಮಾರ್ಟ್‌ನಲ್ಲಿ ಉದ್ಯೋಗವಿದೆ ಎಂದು ಸುಳ್ಳು ಜಾಹಿರಾತು: ನೂರಾರು ಮುಗ್ಧರು ಶಾಪಿಂಗ್ ಮಾಲ್ ಎದುರು ಜಮಾವಣೆ

ಮಂಗಳೂರು :ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ಸಂಸ್ಥೆಯ ಶಾಖೆಯೊಂದು ಉಳ್ಳಾಲ ತಾಲೂಕಿನ ಕುಂಪಲ- ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದೆ. ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ ವಿಘ್ನ ಸಂತೋಷಿಗಳು ಜಾಲತಾಣಗಳಲ್ಲಿ ಜಾಹಿರಾತು ಹರಿಯಬಿಟ್ಟಿದ್ದು, ಉದ್ಯೋಗ ಅರಸಿ ಮಾಲ್ ಕಡೆಗೆ ಧಾವಿಸಿ ಬಂದ ನೂರಾರು ಮುಗ್ಧ ಜನರಿಗೆ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿಯ ಮಾತು ಕೇಳಿ ಶಾಕ್ ಆಗಿದೆ.ಸಾಮಾಜಿಕ ಜಾಲತಾಣವನ್ನ ಎಷ್ಟರ ಮಟ್ಟಿಗೆ ದುರುಪಯೋಗ ಪಡಿಸಬಹುದೆಂಬುದಕ್ಕೆ ಕುಂಪಲ -ಬೈಪಾಸಿನ ನೂತನ ಡಿಮಾರ್ಟ್ ನಲ್ಲಿ ಉದ್ಯೋಗಾವಕಾಶದ ಜಾಹಿರಾತು ಹರಿಯಬಿಟ್ಟ ಬೆಳವಣಿಗೆಯೇ…

Read More

ಮೂಡುಬಿದಿರೆ ಪುತ್ತಿಗೆಯಲ್ಲಿ 30 ಅಡಿ ಬಾವಿಗೆ ಬಿದ್ದು ಸುರಂಗದಲ್ಲಿ ಸಿಲುಕಿದ್ದ ವ್ಯಕ್ತಿ: ಅಗ್ನಿಶಾಮಕ ದಳದ ಸಾಹಸಮಯ ರಕ್ಷಣೆ

ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬುಧವಾ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ.ಪುತ್ತಿಗೆಯ ಜಾಣಪ್ಪ ಗೌಡರ ಪುತ್ರ ರಾಧಾಕೃಷ್ಣ (38 ವರ್ಷ) ಎಂಬವರು ಬುಧವಾರ ರಾತ್ರಿ ಅಕಸ್ಮಿಕವಾಗಿ ಸುಮಾರು 30 ಅಡಿ ಆಳದ ಬಾವಿಗೆ ಬಿದ್ದಿದ್ದರು. ಬಿದ್ದ ರಭಸಕ್ಕೆ ಅವರು ಬಾವಿಯ ಒಳಗಿದ್ದ ಸುಮಾರು 20 ಅಡಿ ಆಳದ ಸುರಂಗದೊಳಗೆ ಸಿಲುಕಿಕೊಂಡಿದ್ದರು. ಇದು ರಕ್ಷಣಾ ಕಾರ್ಯಕ್ಕೆ ದೊಡ್ಡ ಸವಾಲಾಗಿತ್ತು. ರಕ್ಷಣೆ ಕಾರ್ಯಾಚರಣೆಗೆ ಕಾರ್ಕಳ…

Read More

ಜನವರಿ 18 ರಂದು ಮಂಗಳೂರಿನಲ್ಲಿ ‘ಲಯ ಲಾವಣ್ಯ’ ಸಂಗೀತೋತ್ಸವ… !

ಮಂಗಳೂರು:ಕರಾವಳಿ ಭಾಗದ ಸಂಗೀತಾಸಕ್ತರಿಗೆ ನಾವಿನ್ಯ ರೀತಿಯ ಸಂಗೀತ ಕಾರ್ಯಕ್ರಮವನ್ನು ನೀಡುತ್ತಿರುವ ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಜನವರಿ 18ರಂದು ಭಾನುವಾರ ಸಂಜೆ 6.00ರಿಂದ ‘ಲಯ ಲಾವಣ್ಯ’ ಎಂಬ ಭಾರತೀಯ ತಾಳವಾದ್ಯಗಳ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಟ್ರಸ್ಟಿಅಂಕುಶ್ ಎನ್ ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ‘ಕರ್ಣಾಟಕ ಬ್ಯಾಂಕ್‌ನ’ ಪ್ರಾಯೋಜಕತ್ವದಲ್ಲಿ ನಡೆಯುವ ಈ ಕಾರ್ಯಕ್ರಮದ ಪರಿಕಲ್ಪನೆ ಹಾಗೂ ನಿರ್ದೇಶನವನ್ನು ಖ್ಯಾತ ಮೃದಂಗ ವಿದ್ವಾಂಸರಾದ ಆನೂರು…

Read More

ಕೇಂದ್ರ ಸರಕಾರದ ಯೋಜನೆಗಳಿಗೆ ಗಾಂಧೀಜಿಯವರ ಕನ್ನಡಕ ಅವಶ್ಯಕತೆ ಇದೆ ಆದರೆ ಅವರ ಹೆಸರಿನ ಅವಶ್ಯಕತೆ ಇಲ್ಲ : ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ

ಮಂಗಳೂರು:ಕೇಂದ್ರ ಸರಕಾರ ಜಾರಿಗೆ ತಂದ ‘ವಿಬಿ-ಜಿ ರಾಮ್ ಜಿ’ ಯೋಜನೆಯು ನಿರೋದ್ಯೋಗ ಸಮಸ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಇದು ಉದ್ಯೋಗ ಖಾತರಿಗೆ ಕತ್ತರಿ ಹಾಕಲಿದೆ ಇದನ್ನು ರಾಜ್ಯ ಸರಕಾರದೊಂದಿದೆ ಯಾವುದೇ ರೀತಿಯ ಚರ್ಚೆಯನ್ನು ಮಾಡದೆ ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕೇಂದ್ರ ಸರಕಾರದ ಅನೇಕ ಯೋಜನೆಗಳಿಗೆ ಗಾಂಧೀಜಿಯವರ ಕನ್ನಡಕ…

Read More

ದ್ವೇಷ ಭಾಷಣ ಮಸೂದೆಯಿಂದ ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯ ಧಕ್ಕೆ : ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ

ಮಂಗಳೂರು:ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಮತ್ತುರಾಜ್ಯದ ಜನರನ್ನು ಭಯಗೊಸಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ತರಲು ಉದ್ದೇಶಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋಪಿಸಿದ್ದಾರೆ.ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ದ್ವೇಷ ಭಾಷಣ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಭಾರೀ ಧಕ್ಕೆ ತರುತ್ತದೆ , ಈ ಮಸೂದೆಯನ್ನು ಸೂಕ್ತ ಚಿಂತನೆ, ಸಮಾಲೋಚನೆ ಹಾಗೂ ತಜ್ಞರ ಸಲಹೆ ಇಲ್ಲದೆ, ಏಕಪಕ್ಷೀಯವಾಗಿ ರೂಪಿಸಿ ಚರ್ಚೆಗಳನ್ನು ನಡೆಸದೆ…

Read More

ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಚೆತ್ತುಕೊಳ್ಳಿ ಎಂದು ಪ್ರಚೋದನಕಾರಿ ವಾಟ್ಸಾಪ್‌ ಪೋಸ್ಟ್ ಮಾಡಿದ ಇಬ್ಬರ ವಿರುದ್ಧ ಎಫ್‌ಐಆರ್

ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಚೆತ್ತುಕೊಳ್ಳಿ ಎಂದು ಪ್ರಚೋದನಕಾರಿ ವಾಟ್ಸಾಪ್‌ ಪೋಸ್ಟ್ ಮಾಡಿದ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಛೆತ್ತುಕೊಳ್ಳಿ ಹಿಂದುಗಳೇ ಎಂದು ವ್ಯಕ್ತಿಯ ವಾಟ್ಸಾಪ್‌ ಪೋಸ್ಟ್ ಪೋಸ್ಟ್ ವೈರಲ್ ಆಗಿದ್ದು ಇದೀಗ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್ ರಿಕ್ಷಾ ಸ್ಟಾಂಡ್ ಹಿಂದೆ ಬಂಗಾಳಿ ಕ್ಯಾಂಟೀನ್ ಎಂದು ಬೋರ್ಡ್ ಹಾಕಿ ಅದರ ಅಕ್ಕ ಪಕ್ಕ ಕೆಲವು ಅನಧಿಕೃತ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತ…

Read More

ಅತ್ತಾವರ ಅರಸು ಮುಂಡಂತಾಯ ದೈವಸ್ಥಾನದಲ್ಲಿ ₹21 ಲಕ್ಷ ವೆಚ್ಚದ ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿ ಪೂಜೆ

ಪವಿತ್ರ ಕಾರ್ಣಿಕ ಕ್ಷೇತ್ರ ಅತ್ತಾವರ ಅರಸು ಮುಂಡಂತಾಯ ದೈವಸ್ಥಾನದಲ್ಲಿ ಮಂಗಳೂರಿನ ನೆಚ್ಚಿನ ಶಾಸಕರಾದ ವೇದ ವ್ಯಾಸ ಕಾಮತ್ ಅವರ ಶಾಸಕರ ಅನುದಾನದಲ್ಲಿ 21 ಲಕ್ಷ ವೆಚ್ಚದಲ್ಲಿ ನೂತನವಾಗಿ ಇಂಟರ್ಲಾಕ್ ಅಳವಡಿಸುವ ಕಾರ್ಯಕ್ರಮದ ಗುದ್ದಲಿ ಪೂಜೆಯು ಇಂದು ದೈವಸ್ಥಾನದ ವಟಾರದಲ್ಲಿ ನಡೆಯಿತು . ದೈವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ವಿದ್ಯಾಧರ ಕೆ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು .ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್, ಮಾಜಿ ಕಾರ್ಪೊರೇಟರ್ ದಿವಾಕರ್ ಪಾಂಡೇಶ್ವರ . ಮೋಹನ್ ಕುಮಾರ್ ,ಗೋಪಾಲಕೃಷ್ಣ ಭಟ್…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಸುಳ್ಳು ಸುದ್ದಿಗಳಿಗೆ ಒಕ್ಕೂಟದಿಂದ ಸ್ಪಷ್ಟೀಕರಣ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಧಿಕಾರಿಗಳು ಸ್ಪಷ್ಟಿಕರಣ ನೀಡಿದ್ದಾರೆ.ದಿನಾಂಕ 12-01-2026 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.)ದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಪ್ರಧಾನ ಕಛೇರಿಯಲ್ಲಿ ಪದಾಧಿಕಾರಿಗಳ ಸಭೆ ಜರಗಿಸಲಾಯಿತು.ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಖಂಡಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು…

Read More

ದೇವಸ್ಥಾನಕ್ಕೆ ಹೊರಟ ಬಾಲಕನ ಅಸಹಜ ಸಾವು: ತಲೆಗೆ ಮೂರು ಗಂಭೀರ ಗಾಯಗಳು, ಪ್ರಕರಣವನ್ನು ಕೊಲೆ ಎಂದು ದಾಖಲಿಸಿ ತನಿಖೆ

ಮಂಗಳೂರು : ಬೆಳ್ತಂಗಡಿ ಸಮೀಪ ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ ಬಲವಾದ ಮೂರು ಹೊಡೆತಗಳು ಬಿದ್ದಿವೆ….

Read More
error: Content is protected !!