ನೇತ್ರಾವತಿ ನದಿ ತೀರದಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಬಿಳಿ ಬಣ್ಣದ ತುಂಬು ತೋಳಿನ ಅಂಗಿಯನ್ನು ಧರಿಸಿದ್ದಾನೆ. ಅಲ್ಲದೆ, ಅವನ ಬಲ ಕೈಯಲ್ಲಿ ಕೆಂಪು ದಾರ ಕಟ್ಟಿರುವುದು ಗುರುತು ಲಕ್ಷಣವಾಗಿ ಕಂಡುಬಂದಿದೆ. ಘಟನೆಯ ಮಾಹಿತಿ ಪಡೆದ ತಕ್ಷಣ ಬಂಟ್ವಾಳ…

Read More

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ನಡೆದ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ಕಾರ್ಯಕ್ರಮವು ಜನಸಾಮಾನ್ಯರ ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮವನ್ನು ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಮೇಲ್ವಿಚಾರಕರಾದ ಶ್ರೀ ಪೂರ್ಣೇಶ್ ಅವರು ಉದ್ಘಾಟಿಸಿ, ಪರಿಷತ್ತಿನ ಈ ವಿಭಿನ್ನ ಪ್ರಯತ್ನಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ…

Read More

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು ‘ಮೈಕಲ್…

Read More

ಗುರುಪುರ ನೀರಿನ ಸಮಸ್ಯೆ ತುರ್ತು ಪರಿಹಾರಕ್ಕೆ ಶಾಸಕ ಭರತ್ ಶೆಟ್ಟಿ ಸೂಚನೆ

ಮಂಗಳೂರು: ಗುರುಪುರ–ಕೈಕಂಬ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ಶಾಸಕ ಭರತ್ ಶೆಟ್ಟಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಗೆ ಪ್ರತ್ಯೇಕ ಸಭೆ ಕರೆಯುವಂತೆ ಅವರು ನಿರ್ದೇಶಿಸಿದರು. ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುರುಪುರ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನೀರಿನ ಪೈಪ್ ಅಳವಡಿಕೆಗೆ ಅಗತ್ಯ ಯುಟಿಲಿಟಿ ವ್ಯವಸ್ಥೆ ಮಾಡದ ಕಾರಣ…

Read More

ಉಡುಪಿಯಲ್ಲಿ ಕಾಡುಬೆಕ್ಕಿನ ರಕ್ಷಣೆ – ಅರಣ್ಯ ಇಲಾಖೆಗೆ ಹಸ್ತಾಂತರ

ಉಡುಪಿ: ನಗರದ ಕವಿ ಮುದಣ್ಣ ಮಾರ್ಗದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಡುಬೆಕ್ಕು ಅಸಹಾಯಕ ಸ್ಥಿತಿಯನ್ನು ಎದುರಿಸುತಿತ್ತು. ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳಕ್ಕೆ ಹೋಗಿ ನಗರ ವಲಯದಲ್ಲಿ ಬದುಕಲು ಅಸಹಾಯಕತೆ ಎದುರಿಸುತ್ತಿದ್ದ ಕಾಡುಬೆಕ್ಕನ್ನು ವಶಕ್ಕೆ ಪಡೆದರು. ಬಳಿಕ ಆಹಾರ ಉಪಚಾರ ನೆಡೆಸಿ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ದೇವರಾಜ್ ಪಾಣ ಅವರಿಗೆ ಹಸ್ತಾಂತರಿಸಿದ್ದಾರೆ. ಇಲಾಖೆಯಿಂದ ಅರಣ್ಯ ವಲಯಕ್ಕೆ ಬಿಡುಗಡೆ ಮಾಡಲಾಗಿದೆ.

Read More

ಮಕ್ಕಳೊಂದಿಗೆ ಪ್ರಯಾಣಿಸಿದ ಮಹಿಳೆಗೆ ಸಂಕಷ್ಟ – ಬಸ್ ಸಿಬ್ಬಂದಿ ವಿರುದ್ಧ ದೂರು

ಮಂಗಳೂರು:ಬಸ್ ಪ್ರಯಾಣದ ವೇಳೆ ತಮಗೆ ಸಂಭವಿಸಿದ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದಾರೆ. ಕಾರ್ಕಳ ಮೂಲದ ರಮಿತಾ ಸೂರ್ಯವಂಶಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು, ತಾವು ಎದುರಿಸಿದ ತೊಂದರೆಗಳನ್ನು ವಿವರಿಸಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ಬೆಂಗಳೂರುದಿಂದ ಪುತ್ತೂರಿಗೆ ಪ್ರಯಾಣಿಸಲು ಖಾಸಗಿ ಬಸ್‌ನ್ನು ಬುಕ್ ಮಾಡಿದ್ದರು. ಪ್ರಯಾಣದ ದಿನ ಸಂಜೆ, ತಾವು ಹತ್ತಬೇಕಿದ್ದ ಬಸ್ ಕೆಟ್ಟು ಹೋಗಿದೆ ಎಂದು ಕರೆ ಬಂದಿದ್ದು, ಮಜೇಸ್ಟಿಕ್‌ನಿಂದ ಮತ್ತೊಂದು…

Read More

ಕರಾವಳಿಯಲ್ಲಿ ಮೇ 6ರಿಂದ ಗುಡುಗು-ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು :ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ…

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ದಂಡು

ಪುತ್ತೂರು: ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅವರು ಮಾಧ್ಯಮದ ಜೊತೆ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲೇ ಬಿಜೆಪಿಯನ್ನು ಬೆಳೆಸಿದರೆ, ಯಡಿಯೂರಪ್ಪ ಅವರು ದಕ್ಷಿಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕರ್ನಾಟಕದಿಂದ ಹೆಬ್ಬಾಗಿಲು ತೆರದ ಒಬ್ಬ ಧೀಮಂತ ವ್ಯಕ್ತಿ.ರೈತಾಪಿ ವರ್ಗಕ್ಕೆ ಸ್ಪಂಧಿಸಿ ಎಲ್ಲಾ ವರ್ಗದ ನಾಯಕರಾಗಿ ನಾಲ್ಕು ಬಾರಿ…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಕಾರು ಚರಂಡಿಗೆ

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಮೇ.5 ರಂದು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ. ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಲಕ್ಷಣ್ ಗೌಡ ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.

Read More

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ

ವಿಟ್ಲ: ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ…

Read More
error: Content is protected !!