ಬೆಳಗಾವಿಯ ಅಧಿವೇಶದಲ್ಲಿ ಚರ್ಚೆಯಾಗಿದ್ದು ಮುಖ್ಯ ಮಂತ್ರಿ ಬದಲಾವಣೆ ಬಗ್ಗೆ ಹೊರತು , ರಾಜ್ಯದ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಅಲ್ಲ , ಅಲ್ಲಿ ನಡೆದದ್ದು ನಾಮಕಾವಸ್ತೆಯ ಅಧಿವೇಶನ : ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್
ಮಂಗಳೂರು:ಉತ್ತರ ಕರ್ನಾಟಕದ ಬೆಳಗಾವಿಯ ಅಧಿವೇಶದಲ್ಲಿ ರಾಜ್ಯದ ಅಭಿವೃದ್ಧಿಯ ಕುರಿತು ಚರ್ಚೆಗಳು ನಡೆಯದೆ ಮುಂದಿನ ಮುಖ್ಯಮಂತ್ರಿಗಳು ಯಾರು ಎನ್ನುವುದರ ಬಗ್ಗೆ ಚರ್ಚೆಗಳು ನಡೆದಿದೆ . ಈ ಮೂಲಕ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿರ್ಲಕ್ಷ್ಯವನ್ನು ತೋರಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಆಸಕ್ತಿ ಇಲ್ಲ. ರಾಜ್ಯದ ರೈತರ , ಮಹಿಳೆಯರ ಕಲ್ಯಾಣ ಯೋಜನೆಗಳ ಬಗ್ಗೆ…