ಬಿಸಿರೋಡಿನ ಎನ್.ಜಿ. ಸರ್ಕಲ್ ಬಳಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ – ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು
ಬಂಟ್ವಾಳ: ಬಿಸಿರೋಡಿನ ಎನ್.ಜಿ. ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಗುಂಡಿಯಿಂದಾಗಿ ಸೋಮವಾರ ಬೆಳಿಗ್ಗೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಕೆ.ಎನ್.ಆರ್.ಸಿ. ಕಂಪನಿ ನಡೆಸುತ್ತಿರುವ ಕಾಮಗಾರಿಯ ಪರಿಣಾಮ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು, ಇದೇ ಟ್ರಾಫಿಕ್ ದಟ್ಟಣೆಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೆದ್ದಾರಿಯ ಮಧ್ಯಭಾಗದಲ್ಲಿ ವಾಹನಗಳ ವೇಗ ಕುಂಠಿತಗೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಉಭಯ…
