ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಸನ್ಮಾನ, ಸ್ಮಾರ್ಟ್ ಕಾರ್ಡ್ ವಿತರಣೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್‌, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಆರು ಮಂದಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂದರ್ಭದಲ್ಲಿ ಧೈರ್ಯದಿಂದ ಸೇವೆ…

Read More

ಸಿಎಂ ಬದಲಾವಣೆ ಚರ್ಚೆಯಲ್ಲಿ ಅಭಿವೃದ್ಧಿ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದ್ದರೂ ಅಭಿವೃದ್ಧಿ ವಿಷಯಗಳು ಕಡೆಗಣನೆಗೊಳ್ಳುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಜಿ. ಪರಮೇಶ್ವರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಹಿನ್ನೆಲೆ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಆದರೆ ಜನರ ಸಮಸ್ಯೆಗಳತ್ತ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಟೀಕಿಸಿದರು. ಕ್ಯಾಬಿನೆಟ್‌ನಲ್ಲಿ…

Read More

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ನೂತನ ಆಡಳಿತ ಸಮಿತಿ ಆಯ್ಕೆ

ಮಂಗಳೂರು : ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಜೂನ್ 20ರಂದು ನಡೆದ ಅನಧಿಕೃತ ಸಭೆ ವಿರುದ್ಧ ಕಾನೂನು ಹೋರಾಟ ನಡೆಸಲಾಗಿದ್ದು, ಅಧ್ಯಕ್ಷರ ಅನುಮತಿ ಹಾಗೂ ಅಗತ್ಯ ಬಹುಮತವಿಲ್ಲದೆ ನಡೆದ ಸಭೆ ಅಸಂವಿಧಾನಿಕವಾಗಿತ್ತು ಎಂದು ಹೇಳಿದರು. ಈ…

Read More

ಮಣಿಪಾಲ: ಮಹಿಳೆಯ ಕೊಲೆಗೆ ಯತ್ನ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ನಿವಾಸಿ ಮಿಥುನ್ ಹಾಗೂ ನಾಗೇಶ್ ಪೂಜಾರಿ ಶಿಕ್ಷೆಗೆ ಗುರಿಯಾದ ಆರೋಪಿಗಳು.ಘಟನೆ ವಿವರ: 2022ರ ಫೆಬ್ರವರಿ 18ರಂದು ಮಂಚಿಕುಮೇರಿ ನಿವಾಸಿ ರಮಾನಾಥ ರೈ ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರ ಅಕ್ಕನ ಮಗ ಮಿಥುನ್ ಹಾಗೂ ಅವನ ಸ್ನೇಹಿತ…

Read More

ಬಂಟ್ವಾಳದಲ್ಲಿ ಮೇ 4ರಿಂದ ಕರಾವಳಿ ಕಲೋತ್ಸವ–2026: ಬಹುಸಂಸ್ಕೃತಿ ಉತ್ಸವ, ಆಹಾರ ಮೇಳಕ್ಕೆ ಸಜ್ಜು

ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು (ರಿ) ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಲೋತ್ಸವ 2026 ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಅಕಾಡೆಮಿ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳ ಮೇ 4ರಿಂದ 9ವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಪಂಜಿಕಲ್ಲು ಅವರು ಗುರುವಾರ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ…

Read More

ಮಣಿಪಾಲ: ಮಹಿಳೆಯ ಕೊಲೆಗೆ ಯತ್ನ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ನಿವಾಸಿ ಮಿಥುನ್ ಹಾಗೂ ನಾಗೇಶ್ ಪೂಜಾರಿ ಶಿಕ್ಷೆಗೆ ಗುರಿಯಾದ ಆರೋಪಿಗಳು. 2022ರ ಫೆಬ್ರವರಿ 18ರಂದು ಮಂಚಿಕುಮೇರಿ ನಿವಾಸಿ ರಮಾನಾಥ ರೈ ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರ ಅಕ್ಕನ ಮಗ ಮಿಥುನ್ ಹಾಗೂ ಅವನ ಸ್ನೇಹಿತ ನಾಗೇಶ್…

Read More

ಮಂಗಳೂರು ಮಿನಿ ವಿಧಾನಸೌಧದಲ್ಲಿ ಜೆಡಿಎಸ್ ಪ್ರತಿಭಟನೆ: ಮಹಿಳಾ ಮೀಸಲಾತಿ ಮಸೂದೆಗೆ ಬಲವಾದ ಬೆಂಬಲ, ರಾಜಕೀಯ ವಿಳಂಬಕ್ಕೆ ತೀವ್ರ ವಿರೋಧ

ಮಂಗಳೂರು,:ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ಮಾತನಾಡಿ, “ಇದು ಸಾಮಾನ್ಯ ರಾಜಕೀಯ ವಿಚಾರವಲ್ಲ, ದೇಶದ ಅರ್ಧ ಜನಸಂಖ್ಯೆಯ ಹಕ್ಕಿನ ಹೋರಾಟ. ಮಹಿಳಾ ಮೀಸಲಾತಿಯನ್ನು ರಾಜಕೀಯ ಲಾಭಕ್ಕಾಗಿ ತಡೆಹಿಡಿಯುವ ಪ್ರಯತ್ನಗಳು ಅಸಂಗತ ಮತ್ತು ಖಂಡನೀಯ,” ಎಂದು ಹೇಳಿದರು. ಮಹಿಳಾ ಮೀಸಲಾತಿ ಜಾರಿಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು. ಲೋಕಸಭೆಯಲ್ಲಿ ನಡೆದ ಇತ್ತೀಚಿನ ಘಟನೆಗಳನ್ನು…

Read More

ಮೆಸ್ಕಾಂ ಸರ್ವರ್ ಸಮಸ್ಯೆ: ವಾರದಲ್ಲಿ ಪರಿಹಾರ ಇಲ್ಲದಿದ್ದರೆ ಕಚೇರಿ ಚಲೋ ಹೋರಾಟ

ಮೆಸ್ಕಾಂನ ಸರ್ವರ್ ಮತ್ತು ಎನ್-ಸೋಫ್ಟ್ ಸಮಸ್ಯೆಯಿಂದ ಗ್ರಾಹಕರು ಹಾಗೂ ವಿದ್ಯುತ್ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿರುವುದಾಗಿ ಆರೋಪಿಸಿರುವ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ವಾರದೊಳಗೆ ಸಮಸ್ಯೆ ಪರಿಹರಿಸದಿದ್ದರೆ ಮೆಸ್ಕಾಂ ಕಚೇರಿ ಚಲೋ ಹೋರಾಟ ನಡೆಸುವುದಾಗಿ ಎಚ್ಚರಿಸಿದೆ. ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಕುಶಾಲ್ ಪೂಜಾರಿ, ಮೆಸ್ಕಾಂನ ಅವ್ಯವಸ್ಥೆಯಿಂದ ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕ ಸಿಗದೆ ಸಾವಿರಾರು ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಜನರು…

Read More

ನಿಟ್ಟೆ ವಿಶ್ವವಿದ್ಯಾನಿಲಯದ ಅಂತರರಾಷ್ಟ್ರೀಯ ಸಮಾವೇಶ ಸಮಾಪ್ತಿ: ಮಾನವಪರ ವರದಿಗಾರಿಕೆಗೆ ಒತ್ತು

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು. ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಸಚಿವೆ ಪ್ರೊ. ಡಾ. ಸುಮಾ ಬಲ್ಲಾಳ್ ಅವರು ಸಮಾರೋಪ ಭಾಷಣ ಮಾಡಿದರು. ಸತ್ಯಾಂಶ, ದತ್ತಾಂಶಗಳನ್ನು ಆಧಾರವಾಗಿ ಇರಿಸಿಕೊಂಡು ಮಾನವ ಪರವಾದ ವರದಿಗಾರಿಕೆಯನ್ನು ಮಾಡಬೇಕಾದ್ದು ಮಾಧ್ಯಮಗಳ ಪ್ರಮುಖ ಕೆಲಸವಾಗಬೇಕು ಎಂದು ಅವರು ಕಿವಿಮಾತು ಹೇಳಿದರು. ಮಾಧ್ಯಮವು ಈಗ ಹಿಂದಿನಂತೆ ಉಳಿದಿಲ್ಲ; ಹೊಸ ಹೊಸ ಆಯಾಮಗಳನ್ನು ಅಳವಡಿಸಿಕೊಂಡಿದೆ. ಕೃತಕ ಬುದ್ಧಿಮತ್ತೆ ಇತ್ಯಾದಿ ತಂತ್ರಜ್ಞಾನಗಳ…

Read More

ವಿಟ್ಲ: ಅಭಿವೃದ್ಧಿ ಶುಲ್ಕ ಜಾರಿ ವಿರುದ್ಧ ಸ್ಪಷ್ಟ ನಿರ್ಣಯ: ನೆಲದಲ್ಲೇ ಧರಣಿ ಕುಳಿತ ಸದಸ್ಯರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ ವಿಧಿಸಲು ಸುತ್ತೋಲೆ ಬಂದಿದ್ದು, ಇದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸ ಬಾರದು, ಬಡಜನರ ಮೇಲೆ ತುಂಬಲಾರದ ಹೊರೆಯಾಗಿರುವ, ಅಭಿವೃದ್ಧಿ ಶುಲ್ಕ ಜಾರಿಗೊಳಿಸುವ ಸ್ಪಷ್ಟ ನಿರ್ಣಯ ತಿಳಿಸದೇ ಸಾಮಾನ್ಯ ಸಭೆ ನಡೆಸ ಬಾರದೆಂದು ಪಟ್ಟು ಹಿಡಿದ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾಂಗಣದ ನೆಲದಲ್ಲಿಯೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು…

Read More
error: Content is protected !!