ಮಹಿಳಾ ಮೀಸಲಾತಿ ಮಸೂದೆ ಕುರಿತು ಕಾಂಗ್ರೆಸ್ ಟೀಕೆ
ಮಂಗಳೂರು: ಮಹಿಳೆಯರಿಗೆ 50% ಮೀಸಲಾತಿ ನೀಡುವ ಬದಲು, ಕ್ಷೇತ್ರ ಮರುವಿಂಗಡಣೆಯನ್ನು ಜೋಡಿಸುವ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಪ್ಪಿ ಆರೋಪಿಸಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಚರ್ಚೆಯಿಲ್ಲದೆ ಲೋಕಸಭೆಯಲ್ಲಿ ಮಸೂದೆ ಮಂಡಿಸಿ, ಅದರೊಂದಿಗೆ ಕ್ಷೇತ್ರ ಮರುವಿಂಗಡಣೆಯನ್ನು ಲಿಂಕ್ ಮಾಡಿರುವುದು ರಾಜಕೀಯ ಸಂಚು ಎಂದರು. ಇದರಿಂದ ಮಸೂದೆ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಕೇಂದ್ರ…
