ಮಂಗಳೂರು–ಮಂತ್ರಾಲಯ ಸ್ಲೀಪರ್ ಬಸ್‌ಗೆ ಚಾಲನೆ: ಶಾಸಕ ವೇದವ್ಯಾಸ ಕಾಮತ್ ಸ್ವತಃ ಬಸ್ ಚಾಲನೆ

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸುಮಾರು ಎರಡು ಕಿಲೋಮೀಟರ್ ದೂರ ಬಸ್ ಚಾಲನೆ ಮಾಡಿ ವಿಶೇಷ ಗಮನ ಸೆಳೆದರು. ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ಪ್ರಾರಂಭಿಸಲಾದ ಮಂಗಳೂರು–ಮಂತ್ರಾಲಯ ಪಲ್ಲಕ್ಕಿ ಸ್ಲೀಪರ್ ಬಸ್ ಸೇವೆಗೆ ಅವರು ಸ್ವತಃ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ ವತಿಯಿಂದ ನಾಲ್ಕು ನಾನ್‌ ಎಸಿ ಸ್ಲೀಪರ್ ಬಸ್‌ಗಳು ಮಂತ್ರಾಲಯದತ್ತ ಸಂಚಾರ ಆರಂಭಿಸಿದ್ದು, ಈ ಬಸ್ ಸುಮಾರು 12 ಗಂಟೆಗಳಲ್ಲಿ ಗಮ್ಯಸ್ಥಾನ ತಲುಪಲಿದೆ. ಇದರಿಂದ ಮಂತ್ರಾಲಯ ಮಂಗಳೂರಿನ ಪ್ರಯಾಣಿಕರಿಗೆ ಇನ್ನಷ್ಟು ಸುಲಭವಾಗಿ ತಲುಪುವಂತಾಗಿದೆ. ಈ ಬಸ್…

Read More

ಪಕ್ಷ ಕ್ರಮಗಳಿಗೆ ಚುನಾವಣಾ ಫಲಿತಾಂಶಕ್ಕೆ ಸಂಬಂಧವಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಂಗಳೂರು: ಪಕ್ಷದಲ್ಲಿ ಕೈಗೊಳ್ಳಲಾದ ಕ್ರಮಗಳಿಗೂ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಚುನಾವಣಾ ಫಲಿತಾಂಶ ಏನಾಗುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ. ನಾನು ಜ್ಯೋತಿಷಿ ಅಲ್ಲ,” ಎಂದು ಹೇಳಿದರು. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪಕ್ಷದ ಚೌಕಟ್ಟಿನೊಳಗೆ ಕೆಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ…

Read More

ಕ್ಷೇತ್ರ ಮರುವಿಂಗಡನೆ ವಿರುದ್ಧ ಉಡುಪಿ ಕಾಂಗ್ರೆಸ್ ಪ್ರತಿಭಟನೆ: ರಸ್ತೆ ತಡೆ ಮಾಡಿ ಆಕ್ರೋಶ

ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡನೆ ಮಸೂದೆ ವಿರೋಧಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್‌ಗೆ ಆಗಮಿಸಿದ ಕಾರ್ಯಕರ್ತರು ಅಲ್ಲಿಗೆ ತಲುಪಿ ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಬಳಸಿಕೊಂಡು ಕ್ಷೇತ್ರ ಮರುವಿಂಗಡನೆ ಮಸೂದೆ ಮಂಡಿಸಲು ಯತ್ನಿಸಿದೆ ಎಂದು…

Read More

ಉಡುಪಿಯಲ್ಲಿ ‘ಶ್ರೀರಾಮ ಟಂಕ ಜಪ’ ಅಭಿಯಾನಕ್ಕೆ ಚಾಲನೆ: ಗೀತಾಮಂದಿರದಲ್ಲಿ ಭಕ್ತಿಭಾವದ ಕಾರ್ಯಕ್ರಮ

ಉಡುಪಿ: ಧಾರ್ಮಿಕ ನಗರಿ ಉಡುಪಿಯ ಶ್ರೀಕೃಷ್ಣ ಮಠ ಸಮೀಪದ ಗೀತಾಮಂದಿರ ದ ಶ್ರೀ ಪುತ್ತಿಗೆ ನರಸಿಂಹ ಸಭಾಂಗಣದಲ್ಲಿ ವಿಶೇಷ ‘ಶ್ರೀರಾಮ ಟಂಕ ಜಪ’ ಅಭಿಯಾನಕ್ಕೆ ಭಕ್ತಿಪೂರ್ವಕ ಚಾಲನೆ ನೀಡಲಾಯಿತು. ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಅಭಿಯಾನವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಇನ್ನು ಮುಂದೆ ಪ್ರತಿ ಭಾನುವಾರ ಸಾರ್ವಜನಿಕರಿಗಾಗಿ ಈ ಜಪ ಅಭಿಯಾನ ನಿರಂತರವಾಗಿ ನಡೆಯಲಿದೆ. ಪುರಾಣ ಕಾಲದ ಅಪರೂಪದ ನಾಣ್ಯವಾಗಿರುವ “ಶ್ರೀರಾಮ ಟಂಕ”ಕ್ಕೆ ವಿಶಿಷ್ಟ ಧಾರ್ಮಿಕ ಮಹತ್ವವಿದೆ. ಈ ಪವಿತ್ರ ನಾಣ್ಯವನ್ನು ಎರಡು ಕೈಗಳ ಮಧ್ಯೆ…

Read More

ಮಹಿಳಾ ಮೀಸಲಾತಿ ಹೆಸರಿನಲ್ಲಿ ವಂಚನೆ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರ ಮಹಿಳೆಯರ ಹೆಸರಿನಲ್ಲಿ ವಂಚನೆ ಮಾಡಲು ಮುಂದಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ವಾಸ್ತವದಲ್ಲಿ ಬಿಜೆಪಿ ನಾಯಕರು ಎಂದರು. 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಬಂದಾಗ ಅದನ್ನು ಸರ್ವಾನುಮತದಿಂದ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು. ಮಹಿಳಾ ಮೀಸಲಾತಿಗೆ ಕ್ಷೇತ್ರ ಪುನರ್‌ವಿಂಗಡಣೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಕುರಿತು ತಕ್ಷಣ ತೀರ್ಮಾನ ಕೈಗೊಳ್ಳಬೇಕು…

Read More

ಮಂಗಳೂರಿನಲ್ಲಿ ಬಜರಂಗದಳ ಸಂಯೋಜಕರ ಸಮಾವೇಶಕ್ಕೆ ಚಾಲನೆ: ಸಂಘನಿಕೇತನದಲ್ಲಿ ಎರಡು ದಿನಗಳ ಕಾರ್ಯಕ್ರಮ

ಮಂಗಳೂರು: ಬಜರಂಗ ದಳ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕರ ಸಮಾವೇಶ ಮಂಗಳೂರಿನ ಸಂಘನಿಕೇತನ ನಲ್ಲಿ ಎರಡು ದಿನಗಳ ಕಾಲ ನಡೆಯುತ್ತಿದ್ದು, ಶನಿವಾರ ಅದಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಗೋಪೂಜೆ ಹಾಗೂ ಧ್ವಜಾರೋಹಣದ ಮೂಲಕ ಸಮಾವೇಶವನ್ನು ವಿಧಿವತ್ತಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಜರಂಗದಳ ಸಂಯೋಜಕ ಕಿಶನ್ ಪ್ರಜಾಪತ್ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಥಾಣು ಮಾಲಯನ್ ಜೀ, ಡಾ ಎಂ ಬಿ ಪುರಾಣಿಕ್, ಸುರೇಶ್ ಬಿ ಇ, ಶರಣ್ ಪಂಪುವೆಲ್ ಹಾಗೂ ಪ್ರಭಂಜನ್ ಸೂರ್ಯ ಸೇರಿದಂತೆ ಹಲವು ಪ್ರಮುಖರು…

Read More

ಸರ್ಕಾರಿ-ಖಾಸಗಿ ಆರೋಗ್ಯ ಒಪ್ಪಂದಗಳಿಗೆ ವಿರೋಧ: ಏ.28ರಂದು ಡಿವೈಎಫ್‌ಐ ಪ್ರತಿಭಟನೆ

Democratic Youth Federation of India (ಡಿವೈಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು, ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ನಡುವಿನ ಒಪ್ಪಂದಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ, ಏಪ್ರಿಲ್ 28ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಪ್ರತಿಭಟನೆಯನ್ನು ನಡೆಸುವುದಾಗಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತ್ತೀಚೆಗೆ ಕೈಗೊಂಡಿರುವ ಸರ್ಕಾರಿ ಆರೋಗ್ಯ ಕೇಂದ್ರಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ…

Read More

ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ

ಮೈಸೂರು, ಎಪ್ರಿಲ್ 17, 2026: ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (Discalced Carmelites) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ….

Read More

ಹುಣಸೂರು: ಯುವಕನ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು

ಹುಣಸೂರು: ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ (27) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಏಪ್ರಿಲ್ 15ರಂದು ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಹಾಗೂ ಆಕೆಯ ಸಹೋದರ ಸಲ್ಮಾನ್ ಅವರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ನಂತರ ಫರ್ಮಾನ್ ಪಾಷಾ ಅವರು ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ…

Read More

ಉಡುಪಿ ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉಡುಪಿ: ಬಿಜೆಪಿ ಮುಖಂಡ ಹಾಗೂ ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇನ್ನಾ ಉದಯ ಶೆಟ್ಟಿ ಅವರು ಲಯನ್ಸ್ ಕ್ಲಬ್ ಬೆಲ್ಮಣ್‌ನ ಮಾಜಿ ಅಧ್ಯಕ್ಷರಾಗಿದ್ದು, ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

Read More
error: Content is protected !!