ಶೀಘ್ರವೇ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ಸಂಚಾರಕ್ಕೆ ಮುಕ್ತವಾಗುವ ವಿಶ್ವಾಸ ವ್ಯಕ್ತ ಪಡಿಸಿದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು:ಕೇರಳ, ಉಳ್ಳಾಲ ಕಡೆಯಿಂದ ಮಂಗಳೂರು ನಗರ ಪ್ರವೇಶಕ್ಕೆ ನೇರ ಅವಕಾಶ ಕಲ್ಪಿಸುವ ಮಹಾಕಾಳಿಪಡ್ಡು ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕ ಸಂಚಾರಕ್ಕೆ ಇನ್ನೂ ಮುಕ್ತಗೊಳಿಸದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಸಚಿವರ ಜತೆ ಚರ್ಚಿಸುವುದಾಗಿ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು. ಮಂಗಳೂರು ಸರ್ಕ್ಯೂಟ್‌ಹೌಸ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಪೂರಕವಾಗಿ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಸೇತುವೆ ಕಾಮಗಾರಿಗೆ ಅನುಮೋದನೆಯನ್ನು ಒದಗಿಸಿರುವುದು ನಾನೇ. ನಾನಾ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಬಾಕಿ ಕಾಮಗಾರಿಯನ್ನು…

Read More

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಗೊಳಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಆಯೋಜಿಸಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು. ನಗರದ ಸರ್ಕ್ಯೂಟ್‌ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್‌, ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು.ಎಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷ ಎಂ.ಜಿ.ಶಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ…

Read More

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟ- ಬಿಜೆಪಿಗೆ ಬಹುಮತ

ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡೆಯಿತು. ವಿಜೇತರ ವಿವರ:ವಾರ್ಡ್ 1. ಯಶೋಧ (ಬಿ ಜೆ ಪಿ )ವಾರ್ಡ್ 2. ಪದ್ಮನಾಭ ಪೂಜಾರಿ (ಬಿ ಜೆ ಪಿ )ವಾರ್ಡ್ 3.ಜಾಕೋಬ್ ಪಿರೇರಾ (ಕಾಂಗ್ರೆಸ್ )ವಾರ್ಡ್ 4.ಸಿರಾಜ್…

Read More

ಜ.27-28 ರಂದು ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವ ಅಂಗವಾಗಿ ಬೀದಿ ನಾಟಕ ಸ್ಪರ್ಧೆ… !

ಮಂಗಳೂರು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜನವರಿ 27 ಮತ್ತು 28, 2026 ರಂದು ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಸಂದರ್ಭದಲ್ಲಿ ಜನವರಿ 27 ರಂದು ವಂದೇ ಮಾತರಂ ಹಾಡಿಗೆ 150 ವರ್ಷ ಸ್ಮರಣಾರ್ಥ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನ 26ನೇ ಸಮ್ಮೇಳನವಾಗಿ ನಡೆಯಲಿದೆ. ಅದೇ ರೀತಿ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯಲ್ಲಿ…

Read More

ಮಂಗಳೂರಿನಲ್ಲಿ ಶುಭಾರಂಭಗೊಂಡ ಲಂಚುಲಾಲ್ ಮಾಲಕತ್ವದ ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ ಮಳಿಗೆ

ಅಸ್ತ್ರ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ, ಚಲನಚಿತ್ರ ನಿರ್ಮಾಪಕ ಶ್ರೀ ಲಂಚುಲಾಲ್ ಮಾಲಕತ್ವದ ‘ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್’ ಫಳ್ನೀರ್ ನಲ್ಲಿ ಮಂಗಳವಾರ ಶುಭಾರಂಭಗೊಂಡಿದೆ. ಸ್ನೋಮ್ಯಾನ್ ಐಸ್ ಕ್ರೀಮ್ ಪಾರ್ಲರ್ , ಅಸ್ತ್ರ ಗ್ರೂಪ್ ,ಅಸ್ತ್ರ ಪ್ರೊಡಕ್ಷನ್,ಅಕ್ಷಯ ಪಾತ್ರ, ಚಲನಚಿತ್ರ ನಿರ್ಮಾಣ ಈಗೆ ಹಲವು ಉದ್ಯಮದಲ್ಲಿ ತೊಡಗಿರುವ ಲಂಚುಲಾಲ್ ರವರು ಇದೀಗ ಸ್ವರ್ಣ ಉದ್ಯಮಕ್ಕೆ ಹೆಜ್ಜೆ ಇಟ್ಟು ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯನ್ನು ಮಂಗಳವಾರ ಶುಭಾರಂಭಗೊಳಿಸಿ ನಾಡಿನ ಜನರಿಗೆ ಸಮರ್ಪಿಸಿದ್ದಾರೆ. ವಿವಿಧ ವಿನ್ಯಾಸದ ಚಿನ್ನ ,…

Read More

ಕ್ರಿಸ್‌ ಮಸ್ ಸತ್ಯ, ಪಾರದರ್ಶಕತೆ ಹಾಗೂ ನೈತಿಕ ಜೀವನಕ್ಕೆ ಕರೆ ನೀಡುತ್ತದೆ : ಮಂಗಳೂರು ಧರ್ಮಧ್ಯಕ್ಷ ಡಾ. ಪೀಟರ್ ಪಾವ್ ಸಲ್ದಾನ್ಹಾ

ಮಂಗಳೂರು:ಕ್ರಿಸ್‌ಮಸ್‌ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಈ ಜಗತ್ತಿಗೆ ತಂದ ಪ್ರೀತಿ, ಶಾಂತಿ ಮತ್ತು ಮಾನವೀಯತೆಯ ಶಾಶ್ವತ ಸಂದೇಶವನ್ನು ನಾವು ಇವತ್ತು ಕೃತಜ್ಞತೆಯಿಂದ ಸ್ಮರಿಸುತ್ತೇವೆ. ಈ ಹಬ್ಬವು ಸಮಾಜದಲ್ಲಿ ಸತ್ಯ, ನ್ಯಾಯ ಹಾಗೂ ಸಹಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ ಎಂದು ನಾವು ಸ್ಪಷ್ಟವಾಗಿ ಹೇಳಬಹುದು ಎಂದು ಮಂಗಳೂರು ಕೊಡಿಯಾಲ್‌ಬೈಲ್‌ನ ಬಿಷಪ್ಸ್ ಹೌಸ್ ನಲ್ಲಿ ಧರ್ಮಾಧ್ಯಕ್ಷರಾದ ಮಂಗಳೂರು ಕಥೊಲಿಕ್ ಧರ್ಮಕ್ಷೇತ್ರದ ಅತೀ ವಂದನೀಯ ಡಾ| ಪೀಟರ್ ಪಾವ್ ಸಲ್ದಾನ್ಹಾ ಹೇಳಿದರು. ಅವರು ಕ್ರಿಸ್ಮಸ್…

Read More

ಬಾಂಗ್ಲಾದೇಶಿ ಪ್ರಜೆಗೆ ಅಕ್ರಮವಾಗಿ ಪಾಸ್‌ಪೋರ್ಟ್ ಪಡೆಯಲು ಸಹಾಯ . ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧನ

ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಶಂಕಿತ ಬಾಂಗ್ಲಾದೇಶಿ ಪ್ರಜೆಗೆ ಅಕ್ರಮವಾಗಿ ಪಾಸ್‌ಪೋರ್ಟ್ ಪಡೆಯಲು ಸಹಾಯ ಮಾಡಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಸುದ್ದಿ ಅತ್ಯಂತ ಆತಂಕಕಾರಿ ಹಾಗೂ ಖಂಡನೀಯವಾಗಿದೆ.ಪೊಲೀಸ್ ಇಲಾಖೆ ಎಂಬುದು ಕಾನೂನು ಜಾರಿ ಮಾಡುವ ಸಂಸ್ಥೆಯಾಗಿದ್ದು, ರಾಷ್ಟ್ರ ಭದ್ರತೆ ಮತ್ತು ನಾಗರಿಕರ ಸುರಕ್ಷತೆಯನ್ನು ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದೆ. ಇಂತಹ ಇಲಾಖೆಯೊಳಗಿಂದಲೇ ದೇಶದ ಕಾನೂನು ಹಾಗೂ ಭದ್ರತಾ ವ್ಯವಸ್ಥೆಗೆ ಧಕ್ಕೆ ತರುವ ಕೃತ್ಯ ನಡೆದಿದೆ ಎಂಬುದು ಕರ್ನಾಟಕ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಅಕ್ರಮ…

Read More

ಕೆಸಿ ರೋಡಲ್ಲಿ ಎಮ್ ಡಿಎಮ್ಎ ಮಾರಾಟ,ಉಳ್ಳಾಲ ಪೊಲೀಸರ ದಾಳಿ.ಓರ್ವನ ಬಂಧನ,ಇಬ್ಬರು ಆರೋಪಿಗಳು ಪರಾರಿ.11 ಗ್ರಾಂ ಡ್ರಗ್ಸ್ ವಶಕ್ಕೆ.

ಉಳ್ಳಾಲ: ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22)ಎಂಬಾತನನ್ನು ಉಳ್ಳಾಲ ಪೊಲೀಸರು ಸೋಮವಾರದಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ,ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್ ಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ…

Read More

ಡಿ 25 ರಿಂದ 27 ತನಕ “ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ” -ಸ್ತಬ್ಧಚಿತ್ರ ರಥಯಾತ್ರೆ… !

ಮಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಸಮಿತಿ ರಾಜ್ಯಾದ್ಯಂತ ಯುವ ಸಮುದಾಯದ ಭವಿಷ್ಯ, ಆರೋಗ್ಯ ಮತ್ತು ಸಾಮರ್ಥವನ್ನು ಬಲಪಡಿಸುವ ಗಂಭೀರ ಜವಾಬ್ದಾರಿಯೊಂದಿಗೆ ವಿನಾಶಕಾರಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಮಹತ್ವಾಕಾಂಕ್ಷಿ ಪ್ರಯತ್ನದೊಂದಿಗೆ – “ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ” -ಸ್ತಬ್ಧಚಿತ್ರ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸಲಿದ್ದು ಡಿ 25 ಬೆಳಗ್ಗೆ 9.00 ಗಂಟೆಗೆ ಮಂಗಳೂರಿಗೆ ಸ್ತಬ್ದಚಿತ್ರ ಹೊತ್ತ ರಥವು ಬರಲಿದೆ ಎಂದು ಕಾರ್ಯಕ್ರಮದ ಸಂಚಾಲಕರು , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ ಶಾಖೆ ಇದರ ಸಭಾಪತಿಗಳಾದ…

Read More

ಡಿ.25 ರಂದು ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಶೇಣಿ ಪ್ರಶಸ್ತಿ

ಮಂಗಳೂರು:ಯಕ್ಷಗಾನದ ಭೀಷ್ಮ, ಹರಿದಾಸ ಡಾ. ಶೇಣಿ ಗೋಪಾಲಕೃಷ್ಣ ಭಟ್ ಅವರ ಹೆಸರಿನಲ್ಲಿ ಎರಡು ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಟ್ರಸ್ಟ್ 2025ನೇ ಸಾಲಿನ ಶೇಣಿ ಪ್ರಶಸ್ತಿಗೆ ಹಿರಿಯ ತಾಳಮದ್ದಳೆ ಅರ್ಧದಾರಿ, ಪ್ರವಚನಕಾರ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ನ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಡಿ.25 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಗರದ ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ…

Read More
error: Content is protected !!