ಡಿ.27 ರಂದು ಮಂಗಳೂರಿನ ರಾಮಕೃಷ್ಣ ಮಿಷನ್ನಲ್ಲಿ ಹರಿಕಥಾ ಸ್ಪರ್ಧೆ-2025

ಮಂಗಳೂರು: ಹರಿಕಥಾ ಪರಿಷತ್ ಮಂಗಳೂರು ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಿಎ ಎಸ್ ಎಸ್ ನಾಯಕ್ ಪ್ರಾಯೋಜಕತ್ವದಲ್ಲಿ, ಎಸ್ ಕೆ ಜಿ ಇಂಡಸ್ಟ್ರೀಯಲ್ ಕೋ-ಆಪರೇಟಿವ್‌ ಸೊಸೈಟಿ ಲಿ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ಲಿ. ಹಾಗೂ ಗ್ರಾಮ ಸಂಘ ಸಹಕಾರದ ವತಿಯಿಂದ ಕರಾವಳಿಯಲ್ಲಿ ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಡಿ.27 ರಂದು ‘ಹರಿಕಥಾ ಸ್ಪರ್ಧೆ-2025 ಮಂಗಳೂರಿನ ರಾಮಕೃಷ್ಣ ಮಿಷನ್ ನಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾ‌ರ್ ತಿಳಿಸಿದರು. ನಗರದ…

Read More

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಧಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ . ಇದನ್ನು ಬಿಜೆಪಿ ಸಹಿಸಲ್ಲ : ಸಂಸದ ಕ್ಯಾ ಬ್ರಿಜೇಶ್‌ಚೌಟ

ಮಂಗಳೂರು: ಪೊಲೀಸ್ ಅಧಿಕಾರಿಗಳು ಕೋಳಿ ಅಂಕದಲ್ಲಿ ಅಕ್ರಮ ಚಟುವಟಿಗಳು ಆಗುತ್ತಿದೆ ಎಂದು ನೆಪವನ್ನು ಒಡ್ಡಿ ನಮ್ಮ ಧಾರ್ಮಿಕ ನಂಬಿಕೆಯನ್ನು ಹಾಳುಮಾಡುವ ಪ್ರಯತ್ನ ಮಾಡ್ತಾ ಇದ್ದಾರೆ. ರಾಜಕೀಯ ಬೆಂಬಲ ಇಲ್ಲದೆ ಈ ರೀತಿಯ ಬೆಳವಣಿಗೆ ಸಾಧ್ಯವಿಲ್ಲ. ನಮ್ಮ ನಂಬಿಕೆಯ ಆಚರಣೆಯಾದ ಕೋಳಿ ಅಂಕ, ಕಂಬಳ, ಯಕ್ಷಗಾನ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಸಂಸದ ಕ್ಯಾ ಬ್ರಿಜೇಶ್‌ಚೌಟ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು,…

Read More

ನಾಯಕತ್ವ ವಿಚಾರ ಸ್ಥಳೀಯ ನಾಯಕರೇ ಬಗೆಹರಿಸಿಕೊಳ್ಳಬೇಕು : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ:ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಹೈಕಮಾಂಡ್ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಅದು ಸ್ಥಳೀಯ ಮಟ್ಟದಲ್ಲೇ ಇದೆ” ಎಂದರು. ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ “ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?”. ಹೈಕಮಾಂಡ್…

Read More

ಖುರ್ಚಿ ಗೊಂದಲದ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ : ಪ್ರಹ್ಲಾದ್ ಜೋಶಿ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ. ಪವರ್ ಶೇರಿಂಗ್ ಗೊಂದಲದಿಂದಾಗಿ ಇಡೀ ರಾಜ್ಯದಲ್ಲಿ ಅಸ್ಥಿರತೆ, ಅರಾಜಕತೆ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಪಲ್ಲಾದ್ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎನ್ನುವ ಸ್ಥಿತಿಯಿದೆ. ರಾಜ್ಯದಲ್ಲಿ ಅರಾಜಕತೆ, ಅಸ್ಥಿರತೆಯಿಂದ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕಾಂಗ್ರೆಸ್ ಹೈಕಮಾಂಡ್‌ ರಾಜ್ಯದ ನಾಯಕರ…

Read More

ಗೃಹ ಪರಿಸರದ ಬಾವಿಗೆ ಬಿದ್ದು ನರಿಂಗಾನ ಕಲ್ಲರಕೋಡಿ ಶಾಲಾ ದೈಹಿಕ ಶಿಕ್ಷಕ ಆತ್ಮಹತ್ಯೆ..?ಮಗಳ ಶಾಲಾ ವಾರ್ಷಿಕೋತ್ಸವದಂದೇ ಘಟನೆ.ನರ ದೌರ್ಬಲ್ಯದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ.

ಉಳ್ಳಾಲ: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣದ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು,ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ. ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು.ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು.ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ…

Read More

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ… !

ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಹಾಗೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿ.ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರವರ ವಿರುದ್ಧದ ಷಡ್ಯಂತ್ರ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪ್ರತಿಭಟನೆಯನ್ನು ನಡೆಸಲಾಯಿತು . ಆದರೆ ಜಿಲ್ಲಾ ಬಿಜೆಪಿ ಕಚೇರಿಯ ತನಕ ಪ್ರತಿಭಟನೆ ನಡೆಯದೆ ಮಲ್ಲಿಕಟ್ಟೆಯ…

Read More

ಮ.ನ.ಪಾ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ಕುಂಠಿತ . ತಡೆಹಿಡಿದಿರುವ ಅನುದಾನವನ್ನು ಬಿಡುಗಡೆಗೊಳಿಸಬೇಕು .ಶಾಸಕ ವೇದವ್ಯಾಸ ಕಾಮತ್ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮನವಿ

ಮ.ನ.ಪಾ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿದ್ದು, ಜನಸಾಮಾನ್ಯರ ಹಿತದೃಷ್ಟಿಯಿಂದಲಾದರೂ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದ ಅವರು, ರಸ್ತೆ ದುರಸ್ತಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ಅನುದಾನ ನೀಡಿಲ್ಲ. ಅಲ್ಲದೇ ಈ ಹಿಂದೆ ಬಜೆಟ್ ನಲ್ಲೇ ಘೋಷಣೆಯಾದಂತಹ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಗೆ 150…

Read More

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ:ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತುಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು,…

Read More

ಮನ್‌ರೇಗಾವನ್ನು ಕೊಲ್ಲಲಾಗಿದೆ. ಮೋದಿ ಸರ್ಕಾರ ಕೆಲಸದ ಹಕ್ಕನ್ನು ಕಸಿದುಕೊಂಡಿದೆ : ಲೋಕಸಭಾ ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ

ಮಂಗಳೂರು: ಮೋದಿ ಸರ್ಕಾರವು “ಸುಧಾರಣ”, ಹೆಸರಿನಲ್ಲಿ ಲೋಕಸಭೆಯಲ್ಲಿ ಮತ್ತೊಂದು ಮಸೂದೆಯನ್ನು ಬುಲ್ಡೋಜರ್ ಮಾಡುವ ಮೂಲಕ ವಿಶ್ವದ ಅತಿದೊಡ್ಡ ಉದ್ಯೋಗ ಖಾತರಿ ಯೋಜನೆಯಾದ ಮನ್‌ರೇಗಾ ವನ್ನು ಕೊಲೆ ಮಾಡಿದೆ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರು, ಲೋಕಸಭಾ ಮಾಜಿ ಸಂಸದರಾದ ವಿಜಯ್ ಇಂದರ್ ಸಿಂಗ್ಲಾ ತಿಳಿಸಿದರು . ಅವರು ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಇದು ಮಹಾತ್ಮ ಗಾಂಧಿಯವರ ತತ್ವಶಾಸ್ತ್ರವನ್ನು ಕೆಡವಲು ಮತ್ತು ಬಡ ಭಾರತೀಯರಿಂದ ಕೆಲಸ ಮಾಡುವ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಮನ್‌ರೇಗಾ…

Read More

ಡಿ.20 ರಿಂದ ಜ.4 ರವರೆಗೆ ಕರಾವಳಿ ಉತ್ಸವ ಪ್ರಯುಕ್ತ ಪಿಲಿಕುಳದಲ್ಲಿ ವಿಶೇಷ ಕಾರ್ಯಕ್ರಮ.

ಮಂಗಳೂರು :ಕರಾವಳಿ ಉತ್ಸವದ ಅಂಗವಾಗಿ ಡಿ.20 ರಿಂದ ಜನವರಿ 4 ರ ತನಕ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕಾಂಬೋ ಪ್ಯಾಕ್ ಪ್ರವೇಶ ಶುಲ್ಕ 50 ಶೇಕಡಾ ರಿಯಾಯಿತಿಯನ್ನು ನೀಡಿದ್ದು ಈ ಹಿಂದೆ ರೂ 250 ಇದ್ದ ದರವು 125 ರೂ ನಿಗದಿ ಮಾಡಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು. ಅವರು ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕರೆದ…

Read More
error: Content is protected !!