ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ : ಮುನೀರ್ ಕಾಟಿಪಳ್ಳ
ಸಿದ್ದರಾಮಯ್ಯ ಸರ್ಕಾರ ದ್ವೇಷಭಾಷಣದ ಕಾಯ್ದೆ ಮಂಡಿಸಿ ಬೀಗುತ್ತಿದೆ. ವಾಸ್ತವವಾಗಿ ರಾಜ್ಯ ಸರ್ಕಾರಕ್ಕೆ ದ್ವೇಷ ಭಾಷಣ ತಡೆಯುವ ಇಚ್ಚಾಶಕ್ತಿ ಇಲ್ಲ. ದ್ವೇಷಭಾಷಣಕಾರರ ಮೇಲೆ ದಾಖಲಾಗಿರುವ 38 ಮೊಕದ್ದಮೆಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಸಿದ್ದರಾಮಯ್ಯ ಸರ್ಕಾರ ತೆರವುಗೊಳಿಸಲು ಕ್ರಮ ಕೈಗೊಳ್ಳದೆ ಮೃದು ಹಿಂದುತ್ವ ದೋರಣೆ ಅನುಸರಿಸುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಜನದನಿ ರ್ಯಾಲಿಯಲ್ಲಿ ಅವರು ಮಾತನಾಡುತ್ತಿದ್ದರು. ‘ರಾಜ್ಯದ ಜನಸಾಮಾನ್ಯರ ಬದುಕಿನ ಪ್ರಶ್ನೆ ಮುನ್ನಲೆಗೆ ಬಾರದಂತೆ ಕೋಮುವಾದವನ್ನು ಬಳಕೆ…