ಮಂಗಳೂರು ನಗರಾಭಿವೃದ್ಧಿಗೆ ₹165 ಕೋಟಿ: ಏಪ್ರಿಲ್ 18ರಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ
ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (MGNVP) ದ್ವಿತೀಯ ಹಂತದಡಿ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆಗೆ ₹165 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಏಪ್ರಿಲ್ 18ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಅವರು ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಬೆಳಗ್ಗೆ 9ಕ್ಕೆ ಮರವೂರು ಸೇತುವೆ ಬಳಿ ₹3 ಕೋಟಿ ವೆಚ್ಚದ ಕಾಮಗಾರಿ, 9.45ಕ್ಕೆ ವೆಲೆನ್ಸಿಯಾ…
